ಪಠ್ಯ ಪರಿಷ್ಕರಣೆ ವಿವಾದ: ಸಚಿವ ಬಿಸಿ ನಾಗೇಶ್​ಗೆ ಸಿದ್ದರಾಮಯ್ಯ ಸಾಲು-ಸಾಲು ಪ್ರಶ್ನೆ

Published : Jun 05, 2022, 04:44 PM ISTUpdated : Jun 05, 2022, 04:58 PM IST
ಪಠ್ಯ ಪರಿಷ್ಕರಣೆ ವಿವಾದ: ಸಚಿವ ಬಿಸಿ ನಾಗೇಶ್​ಗೆ ಸಿದ್ದರಾಮಯ್ಯ ಸಾಲು-ಸಾಲು ಪ್ರಶ್ನೆ

ಸಾರಾಂಶ

* ಕರ್ನಾಟಕದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿವಾದ * ಸಚಿವ ಬಿಸಿ ನಾಗೇಶ್‌ಗೆ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆ * ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ ಸಿದ್ದರಾಮಯ್ಯ

ಬೆಂಗಳೂರು, (ಜೂನ್.05): ಕರ್ನಾಟಕದಲ್ಲಿ ಶಾಲಾ ಪಠ್ಯಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಸಹ ಜೋರಾಗಿವೆ. ಇನ್ನು ಇದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ಸಾಹಿತಿಗಳು, ವಿದ್ಯಾರ್ಥಿಗಳು ಸೇರಿ ವಿರೋಧ ಪಕ್ಷಗಳು ಧ್ವನಿ ಎತ್ತಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಸರಣಿ ಟ್ವೀಟ್ ಮಾಡಿದ್ದು, ಈ ಹಿಂದೂಗಳು ಯಾರು? ಎನ್ನುವುದನ್ನು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನೂ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ? ಎಂದು ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಸಮರ್ಥಿಸಿಕೊಂಡ BC Nagesh

ಪಠ್ಯಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲ ಎಂದು ಟ್ವೋಟ್ ಮಾಡಿರುವ ಅವರು, ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ? ಎಂದು ಕೇಳಿದ್ದಾರೆ.

ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತಾ? ಎಂದು ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ, ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿ ತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತಾ ಎಂದು ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ