ಸಿಎಂ ಸವಾಲು ಸ್ವೀಕರಿಸಿದ ಮಾಜಿ ಸಿಎಂ: ರಾಜೀನಾಮೆ ನೀಡುತ್ತೇನೆಂದ ಸಿದ್ದರಾಮಯ್ಯ...!

Published : Sep 30, 2020, 05:02 PM IST
ಸಿಎಂ ಸವಾಲು ಸ್ವೀಕರಿಸಿದ ಮಾಜಿ ಸಿಎಂ: ರಾಜೀನಾಮೆ ನೀಡುತ್ತೇನೆಂದ ಸಿದ್ದರಾಮಯ್ಯ...!

ಸಾರಾಂಶ

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸವಾಲನ್ನು ಸಿದ್ದರಾಮಯ್ಯ ಅವರು ಸ್ವೀಕರಿಸಿದ್ದಾರೆ.

ಬೆಂಗಳೂರು, (ಸೆ.30): ಸಿಎಂ ಬಿಎಸ್ ಯಡಿಯೂರಪ್ಪ ಅವರ ಕುಟುಂಬ ಭ್ರಷ್ಟಾಚಾರ ನಡೆಸಿದ್ದು ಸುಳ್ಳು ಎಂದು ತನಿಖೆಯಿಂದ ಸಾಬೀತಾದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬಿ.ವೈ ವಿಜಯೇಂದ್ರ ಅವರ ಮೇಲಿನ ಭ್ರಷ್ಟಾಚಾರ ಆರೋಪವನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿಯಾಗುತ್ತೇನೆ. ಸುಳ್ಳಾದರೇ ವಿರೋಧ ಪಕ್ಷದ ನಾಯಕ ಸ್ಥಾನ ರಾಜೀನಾಮೆ ನೀಡುತ್ತೀರಾ ಎಂದು ಬಿಎಸ್‌ವೈ, ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದರು.

ಸದನಲ್ಲಿ ಬಿಎಸ್‌ವೈ-ಸಿದ್ದರಾಮಯ್ಯ ವಾಕ್ಸಮರ: ರಾಜೀನಾಮೆ ಸವಾಲು..! 

ಇದೀಗ ಆ ಚಾಲೆಂಜನ್ನು  ಸಿದ್ದರಾಮಯ್ಯ ಅವರು ಸ್ವೀಕರಿಸಿದ್ದು, ಯಡಿಯೂರಪ್ಪನವರ ಕುಟುಂಬ ಭಾಗಿಯಾಗಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರನ್ನು ಒಳಗೊಂಡ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಲಿ. ಅವರ ಕುಟುಂಬ ಭ್ರಷ್ಟಾಚಾರ ನಡೆಸಿದ್ದು ಸುಳ್ಳು ಎಂದು ತನಿಖೆಯಿಂದ ಸಾಬೀತಾದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅಸ್ತು : ಯಾವ ಇಲಾಖೆಯ ಎಷ್ಟು ಹುದ್ದೆ ?
ಡಾ। ಯತೀಂದ್ರ ವಿರುದ್ಧ ಡಿಕೆಶಿ ಬಣ ಮತ್ತೆ ಬಾಣ