
ಬೆಂಗಳೂರು, (ಜೂನ್.12): ಚಾಮರಾಪೇಟೆ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
"
ಇಂದು (ಶನಿವಾರ) ನಗರದಲ್ಲಿ ಶಾಸಕ ಜಮೀರ್ ಅಹಮದ್ ಅವರಿಂದ 300 ಪೌರ ಕಾರ್ಮಿಕರಿಗೆ ಉಚಿತ ದಿನಸಿ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಚಾಲನೆ ನೀಡಿದರು. ಇದೇ ವೇಳೆ ಚಾಮರಾಪೇಟೆ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರವಾಗಿ ಖುದ್ದು ತಾವೇ ಪ್ರಸ್ತಾಪಿಸಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಚಾಮರಾಜಪೇಟೆಯಿಂದ ಸ್ಪರ್ಧೆ : ಸಿದ್ದರಾಮಯ್ಯಗೆ ಜಮೀರ್ ಆಹ್ವಾನ
ಚಾಮರಾಜಪೇಟೆ ಕ್ಷೇತ್ರಕ್ಕೆ ಸಿದ್ದರಾಮಯ್ಯ ಯಾಕೆ ಪದೇ ಪದೇ ಹೋಗುತ್ತಾರೆ ಎಂದು ಬಹಳ ಜನ ಪ್ರಶ್ನಿಸುತ್ತಾರೆ. ತಮ್ಮ ಕ್ಷೇತ್ರಕ್ಕೆ ಜಮೀರ್ ಪದೇ ಪದೇ ಕರೀತಾರೆ, ಅದಕ್ಕೆ ಬರ್ತಾ ಇರ್ತೇನೆ. ಬದಾಮಿ ಬಿಟ್ಟು ಚಾಮರಾಜಪೇಟೆಯಲ್ಲೇ ಸ್ಪರ್ಧಿಸಲು ಜಮೀರ್ ಹೇಳುತ್ತಾರೆ. ಅದು ಜಮೀರ್ ಖಾನ್ ಔದಾರ್ಯ. ಈ ಕ್ಷೇತ್ರಕ್ಕೆ ಬನ್ನಿ ಎಂದು ಔದಾರ್ಯ ತೋರಿಸುತ್ತಿದ್ದಾರೆ. ಆದ್ರೆ ನಾನು ಬಾದಾಮಿಯಲ್ಲೇ ನಿಲುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು
ಈ ವೇಳೆ ಸಿದ್ದರಾಮಯ್ಯಗೆ ಚಾಮರಾಜಪೇಟೆಯಲ್ಲೇ ಸ್ಪರ್ಧಿಸಿ ಅಂತ ಮತ್ತೆ ಜಮೀರ್ ಒತ್ತಾಯಿಸಿದ್ರು. ಅದಕ್ಕೆ ಬೆಂಬಲಿಗರು ಕೂಡ ದನಿಗೂಡಿಸಿದರು. ಆಗ ಸಿದ್ದರಾಮಯ್ಯ, ಅದೇನೇ ಇರಲಿ. ಅದರ ಬಗ್ಗೆ ಆಮೇಲೆ ಯೋಚನೆ ಮಾಡೋಣ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.