
ಬೆಂಗಳೂರು, (ಮಾ. 09): 'ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬಿಜೆಪಿಗೆ ಬಂದು ಕೇಂದ್ರ ಮಂತ್ರಿಯಾಗಿತ್ತಾರೆ ಎಂದು ಮಾಜಿ ಸಚಿವ ಬಾಬೂರಾವ್ ಚಿಂಚನಸೂರ ಹೇಳಿಕೆ ನೀಡಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.
'ಸಿದ್ದರಾಮಯ್ಯ ಬಿಜೆಪಿಗೆ ಬಂದು ಕೇಂದ್ರ ಮಂತ್ರಿ ಆಗೋದು ಫಿಕ್ಸ್'
ಇದೀಗ ಇದಕ್ಕೆ ಸ್ವತಃ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ. ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ ಎಂದು ಟ್ವೀಟ್ ಮಾಡಿದ್ದಾರೆ.
ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಎಂದಿದ್ದಾರೆ.
ಈ ಮೂಲಕ ತಮ್ಮ ಕಾರ್ಯಕರ್ತರಲ್ಲಿ ಮೂಡಿಸಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಶುಕ್ರವಾರ ಕಲಬುರಗಿಯಲ್ಲಿ ಮಾತನಾಡಿದ್ದ ಬಾಬೂರಾವ್ ಚಿಂಚನಸೂರ, ಸಿದ್ದರಾಮಯ್ಯ ಬಿಜೆಪಿ ಸೇರಿದರೆ ಕೇಂದ್ರ ಸಚಿವರಾಗಲಿದ್ದಾರೆ. ಅವರನ್ನು ನಾನು ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದರು.
ಮಾರ್ಚ್ 09ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.