ಬಿಜೆಪಿಯ ಸಬ್‌ ಕಾ ಸಾಥ್‌ನಲ್ಲಿ ಮುಸ್ಲಿಂ, ಕ್ರೈಸ್ತರು, ದಲಿತರಿದ್ದಾರಾ?: ಸಿದ್ದರಾಮಯ್ಯ

Kannadaprabha News   | Asianet News
Published : Apr 13, 2021, 02:41 PM IST
ಬಿಜೆಪಿಯ ಸಬ್‌ ಕಾ ಸಾಥ್‌ನಲ್ಲಿ ಮುಸ್ಲಿಂ, ಕ್ರೈಸ್ತರು, ದಲಿತರಿದ್ದಾರಾ?: ಸಿದ್ದರಾಮಯ್ಯ

ಸಾರಾಂಶ

ಬಿಜೆಪಿ ಮೇಲ್ಜಾತಿ, ಸಿರಿವಂತರ ಪರವಾಗಿ ಬಡವರ ವಿರೋಧಿ| ಇಂಥ ಸರ್ಕಾರ ಇರಬಾರದು, ಬಡವ ಹಾಗೂ ಶೋಷಿತರನ್ನು ನಿರ್ಲಕ್ಷಿಸುವ ಇವರನ್ನು ಅಧಿಕಾರದಿಂದ ಕೆಳಗಿಳಿಸಲು ಉಪಚುನಾವಣೆಯ ಫಲಿತಾಂಶ ಪೂರಕ| ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಸಿದ್ದರಾಮಯ್ಯ| 

ಬಸವಕಲ್ಯಾಣ(ಏ.13): ಬಿಜೆಪಿಯ ಸಬ್‌ ಕಾ ಸಾಥ್‌ನಲ್ಲಿ ಮುಸ್ಲಿಂ, ಕ್ರೈಸ್ತರು, ದಲಿತರಿದ್ದಾರಾ. ಬಿಜೆಪಿ ಮೇಲ್ಜಾತಿ, ಸಿರಿವಂತರ ಪರವಾಗಿದ್ದು ಬಡವರ ವಿರೋಧಿಯಾಗಿದೆ. ನೀವೆಲ್ಲ ಸ್ವಾಭಿಮಾನಿಯಾಗಿದ್ರೆ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ ಎಂದು ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಸಸ್ತಾಪೂರ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರವಧಿಯಲ್ಲಿ ಬಡವರಿಗಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ಈ ಸರ್ಕಾರ ನಿಲ್ಲಿಸಿದ್ದು, ಅಲ್ಪಸಂಖ್ಯಾತರು, ಹಿಂದುಳಿದ ಹಾಗೂ ದಲಿತರ ಏಳ್ಗೆಯನ್ನು ಸಹಿಸದ ಪಕ್ಷ ಬಿಜೆಪಿಯಾಗಿದೆ ಎಂದು ದೂರಿದ್ದಾರೆ.

 

ರೈತರ ನಿರ್ಲಕ್ಷ್ಯ:

ದೇಶದ ಶೇ.65ರಷ್ಟು ಜನ ಗ್ರಾಮೀಣರನ್ನು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ದೆಹಲಿಯಲ್ಲಿ ಲಕ್ಷಾಂತರ ಗ್ರಾಮೀಣ ರೈತರು ಧರಣಿ ನಡೆಸುತ್ತಿದ್ದರೂ ನಿರ್ಲಕ್ಷ್ಯ ವಹಿಸಿದೆ. ಪ್ರಧಾನಿ ಮೋದಿ ಧರಣಿ ನಿರತರನ್ನು ಮಾತನಾಡಿಸಿಯೂ ಇಲ್ಲ. ರೈತರ ಮೇಲಾಗುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿ ಸರ್ಕಾರ ತಲೆಕೆಡಿಸಿಕೊಳ್ತಿಲ್ಲ ಎಂದು ಆರೋಪಿಸಿದ್ದಾರೆ.

ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಸಿಎಂ ಬಿಎಸ್‌ವೈಗೆ ಮಹತ್ವದ ಸಲಹೆ ನೀಡಿದ ಸಿದ್ದರಾಮಯ್ಯ

ಅಧಿಕಾರ ಶಾಶ್ವತವಲ್ಲ:

ಸಾರಿಗೆ ನೌಕರರು ಕಳೆದ 6 ದಿನಗಳಿಂದ ಚಳವಳಿ ಮಾಡುತ್ತಿದ್ದರೂ ಕೇಳುತ್ತಿಲ್ಲ. ಎಸ್ಮಾ ಜಾರಿ, ವರ್ಗಾವಣೆ, ವಜಾದ ಬೆದರಿಕೆಯೊಡ್ಡಿ ನೌಕರರನ್ನು ಅತಂತ್ರಗೊಳಿಸುವ ತಂತ್ರ ಸರಿಯಲ್ಲ. ಅಧಿಕಾರ ಶಾಶ್ವತವಲ್ಲ ಎಂಬುದನ್ನು ಯಡಿಯೂರಪ್ಪ ಅರಿತುಕೊಳ್ಳಬೇಕು. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ಮಗನ ಜೊತೆ ಸೇರಿ ರಾಜ್ಯದ ತೆರಿಗೆ ಹಣ ಲೂಟಿ ಹೊಡೆದಿದ್ದಾರೆ. ಅನೈತಿಕವಾಗಿ ಸರ್ಕಾರ ರಚಿಸಿರುವ ಇವರು 17 ಎಂಎಲ್‌ಎಗೆ ತಲಾ 30 ಕೋಟಿ ರು, ನೀಡಿ ಖರೀದಿಸಿ ಸರ್ಕಾರ ರಚಿಸಿದ್ದಾರೆ. ಉಪಚುನಾವಣೆಗಳಲ್ಲಿಯೂ ತಲಾ 50 ಕೋಟಿ ರು. ಖರ್ಚು ಮಾಡಿದ್ದಾರೆ. ಒಟ್ಟಾರೆ ಒಂದೂವರೆ ಸಾವಿರ ಕೋಟಿ ರು.ಗಳನ್ನು ಖರ್ಚು ಮಾಡಿದ್ದಾರೆ. ಇದು ಯಾರ ದುಡ್ಡು, ರಾಜ್ಯದ ಜನತೆಯ ದುಡ್ಡು ಎಂದು ಆರೋಪಿಸಿದ್ದಾರೆ.

ಇಂಥ ಸರ್ಕಾರ ಇರಬಾರದು, ಬಡವ ಹಾಗೂ ಶೋಷಿತರನ್ನು ನಿರ್ಲಕ್ಷಿಸುವ ಇವರನ್ನು ಅಧಿಕಾರದಿಂದ ಕೆಳಗಿಳಿಸಲು ಉಪಚುನಾವಣೆಯ ಫಲಿತಾಂಶ ಪೂರಕವಾಗಲಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರೋದು ಗ್ಯಾರಂಟಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ