'ಸಿದ್ದರಾಮಯ್ಯ ಬಿಜೆಪಿಗೆ ಬಂದು ಕೇಂದ್ರ ಮಂತ್ರಿ ಆಗೋದು ಫಿಕ್ಸ್'

Published : Mar 04, 2020, 09:50 PM ISTUpdated : Mar 05, 2020, 07:37 AM IST
'ಸಿದ್ದರಾಮಯ್ಯ ಬಿಜೆಪಿಗೆ ಬಂದು ಕೇಂದ್ರ ಮಂತ್ರಿ ಆಗೋದು ಫಿಕ್ಸ್'

ಸಾರಾಂಶ

ಮಾಜಿ ಸಿಎಂ ಮತ್ತು ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶೀಘ್ರದಲ್ಲಿಯೇ ಬಿಜೆಪಿ ಸೇರಲಿದ್ದು, ಪಕ್ಷ ಸೇರ್ಪಡೆಯಾದ ನಂತರ ಕೇಂದ್ರ ಸಚಿವರಾಗುತ್ತಾರೆ ಎಂದು ಮಾಜಿ ಸಚಿವರೊಬ್ಬರು ಹೊಸ ಸಿಡಿಸಿ ರಾಜ್ಯ ರಾಜಕಾರಣದಲ್ಲಿ ಸಂಚಲ ಮೂಡಿಸಿದ್ದಾರೆ.

ಯಾದಗಿರಿ, (ಮಾ.04): ಸಿದ್ದರಾಮಯ್ಯ ಬಿಜೆಪಿ ಬಂದು ಕೇಂದ್ರ ಮಂತ್ರಿಯಾಗುವುದು ಖಚಿತ ಎಂದು ಮಾಜಿ ಸಚಿವ ಬಾಬುರಾವ್  ಚಿಂಚನಸೂರ ಕಡ್ಡಿ ಮುರಿದಂತೆ ಹೇಳಿದ್ದಾರೆ.

ಇಂದು (ಬುಧವಾರ) ಯಾದಗಿರಿಯಲ್ಲಿ ಮಾತನಾಡಿರುವ ಅವರು ಬಿಜೆಪಿ ನಾಯಯ ಚಿಂಚನಸೂರ, ಜೆಡಿಎಸ್ ಶಾಸಕ ಜೆ.ಟಿ.ದೇವೇಗೌಡ ಸೇರಿದಂತೆ ಬಹುತೇಕ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಬಾಂಬ್ ಸಿಡಿಸಿದರು.

ಬಿಎಸ್‌ವೈ ಹುಟ್ಟುಹಬ್ಬಕ್ಕೆ ಹೋದ ಸಿದ್ದುಗೆ ಕಾಂಗ್ರೆಸ್ಸಲ್ಲೇ ವಿರೋಧ

ಅಲ್ಲದೇ ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ. ಹುಮ್ನಾಬಾದ್ ಕಾಂಗ್ರೆಸ್ ಶಾಸಕ ರಾಜಶೇಖರ್ ಪಾಟೀಲ್ ಅವರು ಕೂಡ ಬಿಜೆಪಿ ಸೇರಲಿದ್ದಾರೆಂದು ಎಂದು ಹೇಳಿದರು.

ಇನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ವ್ಯಕ್ತಿಯೊಬ್ಬ ಚಿಂಚನಸೂರ ಮೇಲೆ ಸಿಡಿಮಿಡಿಗೊಂಡಿರುವ ಪ್ರಸಂಗ ನಡೆಯಿತು. ನೀವು ನಿಮ್ಮ ಹಿಂಬಾಲಕ ಚೇಲಾಗಳ ಮಾತುಗಳನ್ನು ಕೇಳುತ್ತೀರಾ. ಅವರಿಗೆ ಕಡಿವಾಣ ಹಾಕಬೇಕು ಇಲ್ಲದಿದ್ದರೆ ಮತ್ತೆ ಚುನಾವಣೆ ಹೇಗೆ ಗೆಲ್ಲುತ್ತಿಯಾ ನಾನು ನೋಡುತ್ತೆನೆಂದು ಸವಾಲು ಹಾಕಿದ್ದಾನೆ.

ಜಿಲ್ಲೆಯ ಕಬ್ಬಲಿಗ ಸಮಾಜದ ಮುಖಂಡ ಜಿ.ವೆಂಕಟೇಶ್ ಎನ್ನುವಾತನೇ ಚಿಂಚನಸೂರಗೆ ತರಾಟೆಗೆ ತೆಗೆದುಕೊಂಡಿದ್ದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!