ಅಧಿಕಾರಿಗೆ ಬೆದರಿಕೆ ಆರೋಪ, ಬಿಜೆಪಿ ಶಾಸಕನ ವಿರುದ್ಧ ಸಿಡಿದೆದ್ದ ಸಿದ್ದು

Published : May 29, 2020, 04:21 PM IST
ಅಧಿಕಾರಿಗೆ ಬೆದರಿಕೆ ಆರೋಪ, ಬಿಜೆಪಿ ಶಾಸಕನ ವಿರುದ್ಧ ಸಿಡಿದೆದ್ದ ಸಿದ್ದು

ಸಾರಾಂಶ

ಕಲಬುರಗಿ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ್ ಸಂಗಾ ಅವರಿಗೆ ಬೆದರಿಕೆ ಮತ್ತು ಲಂಚ ಬೇಡಿಕೆ ಇಟ್ಟ ಬಿಜೆಪಿ ಶಾಸಕನ ವಿರುದ್ಧ ವಿರೋಧ ಪಕ್ಷದ ನಾಯಕ ಸಿಡಿದೆದ್ದಿದ್ದಾರೆ.

ಬೆಂಗಳೂರು/ಕಲಬುರಗಿ, (ಮೇ.29): ಅಧಿಕಾರಿಗೆ ಬೆದರಿಕೆ  ಹಾಕಿದ ಆರೋಪ ಎದುರಿಸುತ್ತಿರುವ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ‌ ದತ್ತಾತ್ರೇಯ ಪಾಟೀಲ್ ರೇವೂರು (ಅಪ್ಪುಗೌಡ) ವಿರುದ್ಧ ಕ್ರಮ ಜರುಗಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕಲಬುರಗಿಯ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ರಮೇಶ್ ಸಂಗ ಅವರಿಗೆ ವರ್ಗಾವಣೆಯ ಬೆದರಿಕೆಯೊಡ್ಡಿ ಹಣಕ್ಕಾಗಿ ಪೀಡಿಸಿದ ಶಾಸಕ ದತ್ತಾತ್ರೇಯ ರೇವೂರ ವಿರುದ್ಧ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಿಜೆಪಿಯಲ್ಲಿ ಅಸಮಧಾನ ಸ್ಫೋಟ: ಅತೃಪ್ತ ಸಭೆಯಲ್ಲಿ ಪಾಲ್ಗೊಂಡ ಶಾಸಕರ ಪಟ್ಟಿ

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ಶಾಸಕ ದತ್ತಾತ್ರೇಯ ಅವರು ತಾನು ಬೆದರಿಕೆಯೊಡ್ಡಿದ್ದು ಮಾತ್ರವಲ್ಲ ಹಾದಿಮನಿ ಎಂಬ ಕಾರ್ಪೋರೇಟರ್‌ನಿಂದಲೂ ಬೆದರಿಕೆ ಹಾಕಿಸಿದ್ದಾರೆ. ಇದು ಭ್ರಷ್ಟಾಚಾರ ಎಸಗಿದ ಮತ್ತು ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಗಂಭೀರ ಆರೋಪವಾಗಿದೆ. ಈ ಬಗ್ಗೆ ಅಧಿಕಾರಿ ರಮೇಶ್ ಸಂಗ ನೀಡುವ ದೂರನ್ನು ದಾಖಲಿಸಿ ಕ್ರಮಕೈಗೊಳ್ಳಬೇಕು' ಎಂದಿದ್ದಾರೆ.

'ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್‌ಗೆ ಮಾತನಾಡಿದ್ದೇನೆ. ರಮೇಶ್ ಸಂಗ ಅವರ ದೂರನ್ನು ದಾಖಲಿಸಿ, ತನಿಖೆ ನಡೆಸುವಂತೆ ಆಗ್ರಹಿಸಿದ್ದೇನೆ. ಬೆದರಿಕೆ ಹಾಕಿದ ಕಾರ್ಪೋರೇಟರನ್ನು ಸಹ ಬಂಧಿಸುವಂತೆ ತಿಳಿಸಿದ್ದೇನೆ' ಎಂದರು.

ಏನಿದು ಆರೋಪ..?
ಕಲಬುರಗಿ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ್ ಸಂಗಾ ವರ್ಗಾವಣೆಗೆ ಕಲಬುರಗಿ ದಕ್ಷಿಣ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಒತ್ತಡ ಹಾಕಿದ್ದು, ಅಲ್ಲದೆ ಶಾಸಕರ ಬೆಂಬಲಿಗರು ಬೆದರಿಕೆ ಕರೆ ಮಾಡಿದ್ದಾರೆ ಎಂಬ ಸಂಗತಿ ಹೊರಬಿದ್ದಿದೆ. ಬಿಸಿಎಂ ಅಧಿಕಾರಿ ರಮೇಶ್ ಸಂಗಾ ದುರ್ನಡತೆಯಿಂದ ವರ್ತಿಸುತ್ತಿದ್ದಾರೆ ಹೀಗಾಗಿ ವರ್ಗಾವಣೆ ಮಾಡುವಂತೆ ಶಾಸಕ ಪತ್ರ ಬರೆದಿದ್ದು, ಶಾಸಕ ದತ್ತಾತ್ರೇಯ ಪಾಟೀಲ್ ಆಪ್ತ ದೇವಿಂದ್ರ ಬಿರಾದರ್ ಎನ್ನುವವರ ನೇಮಕಕ್ಕೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಹಣ ಕೊಡದಿದ್ದಕ್ಕೆ ವರ್ಗಾವಣೆ ಮಾಡಲು ಮುಂದಾಗುತ್ತಿದ್ದಾರೆ ಎಂದು ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಅಧಿಕಾರಿ ರಮೇಶ್ ಸಂಗಾ ಗಂಭೀರ ಆರೋಪ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?