ಕೋಲಾರದಲ್ಲಿ ಸಿದ್ದರಾಮಯ್ಯಗೆ ಗೆಲುವು ಸುಲಭವಿಲ್ಲ: ಸುಧಾಕರ್‌

Published : Nov 16, 2022, 03:00 AM IST
ಕೋಲಾರದಲ್ಲಿ ಸಿದ್ದರಾಮಯ್ಯಗೆ ಗೆಲುವು ಸುಲಭವಿಲ್ಲ: ಸುಧಾಕರ್‌

ಸಾರಾಂಶ

ಸಿದ್ದು ಸಿಎಂ ಅಭ್ಯರ್ಥಿ ಎಂದು ಹೈಕಮಾಂಡ್‌ ಘೋಷಿಸಲಿ, ಸ್ವಯಂ ಘೋಷಿಸಿಕೊಂಡ್ರೆ ಅದಕ್ಕೆ ಮಾನ್ಯತೆ ಇಲ್ಲ: ಸಚಿವ ಸುಧಾಕರ್‌ 

ಚಿಕ್ಕಬಳ್ಳಾಪುರ(ನ.16):  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೆ ಅವರ ಗೆಲುವು ಸುಲಭವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಎಚ್ಚರಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳು, ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಆದರೆ ನನಗಿರುವ ರಾಜಕೀಯ ಅನುಭವದಲ್ಲಿ ಹೇಳುವುದಾದರೆ ಅವರಿಗೆ ಕೋಲಾರ ವಿಧಾನಸಭಾ ಕ್ಷೇತ್ರ ಸುಲಭ ತುತ್ತಲ್ಲ. ಅಲ್ಲಿ ಅವರ ಗೆಲುವು ಕಠಿಣವಾಗಿರಲಿದೆ ಎಂದರು.

ಸಿದ್ದರಾಮಯ್ಯ ಸ್ಪರ್ಧೆಯಿಂದ ಬಿಜೆಪಿಗೆ ರಾಜಕೀಯವಾಗಿ ಏನಾದರೂ ನಷ್ಟಆಗಬಹುದಾ ಎಂಬ ಪ್ರಶ್ನೆಗೆ, ಅವರಾಗಿಯೇ ಕಣಕ್ಕಿಳಿಯುತ್ತಿರುವುದರಿಂದ ಕೋಲಾರದಲ್ಲಿ ಏನಾಗುತ್ತದೆ ಎಂಬುದನ್ನು ನೀವೇ ಕಾದು ನೋಡಿ ಎಂದರು.
ಹೈಕಮಾಂಡ್‌ ಘೋಷಣೆ ಮಾಡಲಿ: ನಾನು ಮುಖ್ಯಮಂತ್ರಿಯಾಗಬೇಕಿದ್ದರೆ ಕಾಂಗ್ರೆಸ್‌ಗೆ ಮತ ಹಾಕಬೇಕೆಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸುಧಾಕರ್‌, ಸಿದ್ದರಾಮಯ್ಯ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಆ ಪಕ್ಷದ ಹೈಕಮಾಂಡ್‌ ಅಥವಾ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಲಿ ಎಂದು ಸವಾಲು ಹಾಕಿದರು.

ಮತ್ತೆ ಬಾದಾಮಿಯಿಂದಲೇ ಸ್ಪರ್ಧೆ ಮಾಡದಿದ್ರೆ ಸಿದ್ದರಾಮಯ್ಯ ಮನೆ ಮುಂದೆ ಆತ್ಮಹತ್ಯೆ: ಸಿದ್ದು ಅಭಿಮಾನಿಗಳು

ಯಾರೂ ತನ್ನನ್ನು ತಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳಲು ಆಗುವುದಿಲ್ಲ. ಇಂದು ನಮ್ಮ ಪಕ್ಷದಲ್ಲೂ ಹೈಕಮಾಂಡ್‌ ಘೋಷಿಸಿದವರಷ್ಟೇ ಮುಖ್ಯಮಂತ್ರಿ ಅಭ್ಯರ್ಥಿ ಆಗುತ್ತಾರೆ. ಪಕ್ಷದ ಹೈಕಮಾಂಡ್‌ ಘೋಷಣೆ ಮಾಡುವವರೆಗೂ ಸ್ವಯಂ ಘೋಷಣೆ ಮಾಡಿಕೊಂಡರೆ ಅದಕ್ಕೆ ಮಾನ್ಯತೆ ಇಲ್ಲ ಎಂದು ಟಾಂಗ್‌ ನೀಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ