ಸಿದ್ದರಾಮೋತ್ಸವದಿಂದ ವಾಪಸ್‌ ಆಗುತ್ತಿದ್ದಾಗ ಮೃತಪಟ್ಟಿದ್ದ ಅಭಿಮಾನಿ ನಿವಾಸಕ್ಕೆ ಸಿದ್ದು ಭೇಟಿ

Published : Aug 07, 2022, 09:13 PM IST
ಸಿದ್ದರಾಮೋತ್ಸವದಿಂದ ವಾಪಸ್‌ ಆಗುತ್ತಿದ್ದಾಗ ಮೃತಪಟ್ಟಿದ್ದ ಅಭಿಮಾನಿ ನಿವಾಸಕ್ಕೆ ಸಿದ್ದು ಭೇಟಿ

ಸಾರಾಂಶ

ಸಿದ್ದರಾಮಯ್ಯನವರ ಅಮೃತಮಹೋತ್ಸವಕ್ಕೆ ಆಗಮಿಸುತ್ತಿದ್ದ ವೇಳೆ ಸಾವನ್ನಪ್ಪಿದ್ದ ಅಭಿಮಾನಿ ನಿವಾಸಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ.

ಮೈಸೂರು, (ಆಗಸ್ಟ್.07): ಸಿದ್ದರಾಮೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಅಭಿಮಾನಿ ನಿವಾಸಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

 ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ ಸಿದ್ದರಾಮಯ್ಯ ಅವರ ಅಭಿಮಾನಿ ಪಿರಿಯಾಪಟ್ಟಣ ತಾಲ್ಲೂಕಿನ ಹಲಗನಹಳ್ಳಿಯ ಫಸಿ ಉದ್ದೀನ್‌ ಅವರು ಕಾರ್ಯಕ್ರಮ ಮುಗಿಸಿ ವಾಪಸ್‌ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.

ಸಿದ್ದರಾಮೋತ್ಸವಕ್ಕೆ ತೆರಳುತ್ತಿದ್ದ ವಾಹನ ಅಪಘಾತ, ಓರ್ವ ಸಾವು, ಸಿದ್ದರಾಮಯ್ಯ ಸಂತಾಪ

ಇದೀಗ ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ ಅವರು ಇಂದು(ಭಾನುವಾರ) ಫಸಿ ಉದ್ದೀನ್‌ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಅಲ್ಲದೇ ಇದೇ ವೇಳೆ ಎರಡು ಲಕ್ಷ ರೂಪಾಯಿ ಸಹಾಯ ಮಾಡಿದರು.

ಈ ಎರಡು ಲಕ್ಷ ಮಾತ್ರವಲ್ಲದೇ ಕಾಂಗ್ರೆಸ್ ಶಾಸಕ  ಜಮೀರ್ ಅಹಮ್ಮದ್ ಖಾನ್ ಅವರು ಫಸಿ ಉದ್ದೀನ್‌ ಕುಟುಂಬಕ್ಕೆ ಐದು ಲಕ್ಷ ರೂ, ನೀಡುವುದಾಗಿ ಭರವಸೆ ನೀಡಿದ್ದಾರೆ.

ಬಾಗಲಕೋಟೆಯಿಂದ ದಾವಣಗೆರೆ ಬರುತ್ತಿದ್ದ ವೇಳೆ ಅಪಘಾತದ ವೇಳೆ ಸಾವನ್ನಪ್ಪಿದ್ದ ಪ್ರಕಾಶ್ ನಿವಾಸಕ್ಕೆ ಸಿದ್ದರಾಮಯ್ಯ ಸಹ ಭೇಟಿ ನೀಡಲಿದ್ದಾರೆ.

ಆಗಸ್ಟ್ 02ರಂದು ಬಾಗಲಕೋಟೆ ಜಿಲ್ಲೆಯ ಹಿರೇಆಲಗುಂಡಿ ಬಿ.ಕೆ. ಗ್ರಾಮದಿಂದ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ಹೂಲಗೇರಿ ಗ್ರಾಮದ ಬಳಿ ಅಪಘಾತವಾಗಿತ್ತು.  ಪರಿಣಾಮ ಚಿಕ್ಕಾಲಗುಂಡಿ ಗ್ರಾಮದ ಕ್ರೂಸರ್ ಚಾಲಕ ಪ್ರಕಾಶ್ ಸಾವನ್ನಪ್ಪಿದ್ದ. ಇನ್ನು ಘಟನೆಯಲ್ಲಿ 12 ಜನರು ಗಾಯಗೊಂಡಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ