ಈ ಬಾರಿ ಸಿದ್ದರಾಮಯ್ಯ ಸೋಲು ಖಚಿತ: ವರ್ತೂರು ಪ್ರಕಾಶ್‌ ಭವಿಷ್ಯ

Published : Apr 06, 2023, 02:05 PM IST
ಈ ಬಾರಿ ಸಿದ್ದರಾಮಯ್ಯ ಸೋಲು ಖಚಿತ: ವರ್ತೂರು ಪ್ರಕಾಶ್‌ ಭವಿಷ್ಯ

ಸಾರಾಂಶ

ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆದಂತೆಯೇ ವರುಣಾ ಹಾಗೂ ಕೋಲಾರದಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲನುಭವಿಸಲಿದ್ದು, ಮಾಡಿದ ಪಾಪದ ಕೆಲಸಗಳಿಂದಲೇ ಸಿದ್ದರಾಮಯ್ಯ ಸೋಲಲಿದ್ದು, ಯಾವುದೇ ಕಾರಣಕ್ಕೂ ವಿಧಾನಸಭೆಗೆ ಹೋಗಲ್ಲ ಎಂದು ಮಾಜಿ ಶಾಸಕ ವರ್ತೂರು ಪ್ರಕಾಶ್‌ ಭವಿಷ್ಯ ನುಡಿದಿದ್ದಾರೆ.

ದಾವಣಗೆರೆ (ಏ.06): ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆದಂತೆಯೇ ವರುಣಾ ಹಾಗೂ ಕೋಲಾರದಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲನುಭವಿಸಲಿದ್ದು, ಮಾಡಿದ ಪಾಪದ ಕೆಲಸಗಳಿಂದಲೇ ಸಿದ್ದರಾಮಯ್ಯ ಸೋಲಲಿದ್ದು, ಯಾವುದೇ ಕಾರಣಕ್ಕೂ ವಿಧಾನಸಭೆಗೆ ಹೋಗಲ್ಲ ಎಂದು ಮಾಜಿ ಶಾಸಕ ವರ್ತೂರು ಪ್ರಕಾಶ್‌ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯಗೆ ಈಗಾಗಲೇ ವರುಣಾ ಟಿಕೆಟ್‌ ಘೋಷಣೆಯಾಗಿದೆ. ಕೋಲಾರ ಕ್ಷೇತ್ರಕ್ಕೂ ಟಿಕೆಟ್‌ ಪಡೆಯಬಹುದು. ವರುಣಾದಲ್ಲಿ ಪ್ರಬಲ ಅಭ್ಯರ್ಥಿಗೆ ಹುಡುಕುತ್ತಿದ್ದೇವೆ. ಇನ್ನು 2 ದಿನದಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದೆ ಎಂದು ತಿಳಿಸಿದರು. ರಾಜ್ಯ ಪ್ರವಾಸ ಕೈ ಬಿಟ್ಟು ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿರುತ್ತಾರೆ. ಎಷ್ಟೇ ಪ್ರಯತ್ನ ಪಟ್ಟರೂ ಈ ಸಲ ಸಿದ್ದರಾಮಯ್ಯ ವಿಧಾನಸಭೆಗಂತೂ ಹೋಗಲ್ಲ. ಇಲ್ಲಿವರೆಗೆ ಮುಖ್ಯಮಂತ್ರಿಯಾಗಿದ್ದವರು ಕ್ಷೇತ್ರ ಬದಲಾವಣೆ ಮಾಡಿರಲಿಲ್ಲ. ಆದರೆ ಸಿದ್ದರಾಮಯ್ಯಗೆ ಸುರಕ್ಷಿತ ಕ್ಷೇತ್ರವೇ ಸಿಗುತ್ತಿಲ್ಲ. ಸ್ವ ಕ್ಷೇತ್ರದಲ್ಲೇ ನೆಲೆ ಇಲ್ಲ. ಇನ್ನೂ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಿದ್ದಾರೆ ಎಂದು ಟೀಕಿಸಿದರು.

ಕುಂಬಳಕಾಯಿ ಕಳ್ಳರು: ಕಾಂಗ್ರೆಸ್ಸಿಗೆ ಸಿಎಂ ಬೊಮ್ಮಾಯಿ ಚಾಟಿ

ಹಿಂದೆ 120 ಸೀಟು ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಆದರೆ, ಸಿದ್ದರಾಮಯ್ಯ ಆಡಳಿತದ ನಂತರ 2018ರ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಕೇವಲ 70-80 ಸೀಟು ಬಂದಿತು. ಅಕ್ಕಿ ಕೊಟ್ಟಿದ್ದೇವೆಂದು ಸಿದ್ದರಾಮಯ್ಯ ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅಕ್ಕಿ ಕೊಡಲಿಲ್ಲ, ಗೋಣಿ ಚೀಲಕ್ಕೆ ಮಾತ್ರ ಸರ್ಕಾರದ ದುಡ್ಡು ಕೊಟ್ಟಿದ್ದರು. ಕೇಂದ್ರ ಸರ್ಕಾರವೇ ಅನ್ನ ಭಾಗ್ಯದ ಅಕ್ಕಿಗೆ ಹಣ ನೀಡಿದ್ದು ಎಂದು ಹೇಳಿದರು.

ರಾಜ್ಯದಲ್ಲಿ ಸಿದ್ದರಾಮಯ್ಯನವರ ವರ್ಚಸ್ಸು ಮುಗಿದು ಹೋಗಿದೆ. ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಿತ್ತಾಟ ನಡೆದಿದೆ. ಆದರೆ, ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ತಾನೇ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಡೋ ಪ್ರಶ್ನೆ ಬರುತ್ತದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ, ಆ ಪಕ್ಷದವರಲ್ಲಿ ಒಗ್ಗಟ್ಟು ಬರುವುದಿಲ್ಲ. ಕಾಂಗ್ರೆಸ್‌ ಎರಡನೇ ಪಟ್ಟಿ ಬಿಡುಗಡೆ ನಂತರ ಪರಿಸ್ಥಿತಿ ಹೇಗಿದೆಯೆಂಬುದು, ಎಷ್ಟುಜನ ಕಾಂಗ್ರೆಸ್ಸನ್ನು ತೊರೆದು ಹೋಗುತ್ತಾರೆಂಬುದನ್ನು ಗೊತ್ತಾಗಲಿದೆ ಎಂದು ವರ್ತೂರು ವ್ಯಂಗ್ಯವಾಡಿದರು.

ಒಂದೇ ಕ್ಷೇತ್ರಕ್ಕೆ ಸಿದ್ದು ಕಟ್ಟಿಹಾಕಲು ಯತ್ನ: ಕೆಲವು ನಾಯಕರಿಂದ ಹೈಕಮಾಂಡ್‌ ಮೇಲೆ ಒತ್ತಡ

ಕೋಲಾರದ ಮಾಜಿ ಶಾಸಕ ವರ್ತೂರು ಪ್ರಕಾಶ್‌, ಕೆಜಿಎಫ್‌ನ ಮಾಜಿ ಶಾಸಕ ವೈ.ಸಂಪಗಿ ಹೊನ್ನಾಳಿಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ, ಉಭಯ ಕುಶಲೋಪರಿ ವಿಚಾರಿಸಿ, ಮಾರ್ಗ ಮಧ್ಯೆ ದಾವಣಗೆರೆಗೆ ಭೇಟಿ ನೀಡಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ