10 ವರ್ಷದಿಂದ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿರುವೆ: ಸಚಿವ ಸುಧಾಕರ್‌

Published : Apr 04, 2023, 02:40 AM IST
10 ವರ್ಷದಿಂದ ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿರುವೆ: ಸಚಿವ ಸುಧಾಕರ್‌

ಸಾರಾಂಶ

ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿ ಮತ್ತು ಎಲ್ಲ ವರ್ಗದ ಜನರ ಶ್ರೇಯಸ್ಸಿಗಾಗಿ ನಿರಂತರ ಶ್ರಮಿಸುತ್ತಿದ್ದು, ಈಗಾಗಲೇ ಹಲವು ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. 

ಚಿಕ್ಕಬಳ್ಳಾಪುರ (ಏ.04): ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿ ಮತ್ತು ಎಲ್ಲ ವರ್ಗದ ಜನರ ಶ್ರೇಯಸ್ಸಿಗಾಗಿ ನಿರಂತರ ಶ್ರಮಿಸುತ್ತಿದ್ದು, ಈಗಾಗಲೇ ಹಲವು ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕೊಂಡೇನಹಳ್ಳಿ, ಸಿಡಗಾನಹಳ್ಳಿ, ನಾಗಸನಹಳ್ಳಿ, ಸೇರಿದಂತೆ ವಿವಿಧ ಗ್ರಾಪಂಗಳ ವ್ಯಾಪ್ತಿಯ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರು ತಮ್ಮ ಅಪಾರ ಬೆಂಬಲಿಗರೊಂದಿಗೆ ಬೆಂಗಳೂರಿನ ಸಚಿವರ ನಿವಾಸದಲ್ಲಿ ಸೋಮವಾರ ಬಿಜೆಪಿಗೆ ಬರಮಾಡಿಕೊಂಡು ಮಾತನಾಡಿದರು.

ಕ್ಷೇತ್ರ ಕೇಸರಿಯಾಗಲು ಸಹಕರಿಸಿ: ತಮ್ಮ ಮೇಲೆ ವಿಶ್ವಾಸ ಇಟ್ಟು, ವಿವಿಧ ಪಕ್ಷಗಳನ್ನು ತೊರೆದು ಸಾಗರೋಪಾದಿಯಲ್ಲಿ ಬಿಜೆಪಿ ಸೇರ್ಪಡೆಯಾಗುತ್ತಿರುವ ಕ್ಷೇತ್ರದ ಎಲ್ಲ ಮುಖಂಡರಿಗೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಸಚಿವ ಸುಧಾಕರ್‌, ಈ ಹಿಂದೆ ನೆಲೆಯೇ ಇಲ್ಲದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಸಂಪೂರ್ಣ ಕೇಸರಿಮಯ ಮಾಡಲು ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ. ಇದಕ್ಕೆ ಕೈ ಜೋಡಿಸಿ ನಮ್ಮೊಂದಿಗೆ ಬರುವ ಎಲ್ಲರಿಗೂ ತುಂಬು ಹೃದಯದ ಸ್ವಾಗತ. ತಮ್ಮ ಮೇಲೆ ವಿಶ್ವಾಸ ಇಟ್ಟು, ಪಕ್ಷ ಸೇರ್ಪಡೆಯಾಗುತ್ತಿರುವ ಎಲ್ಲರಿಗೂ ಸಮಾನ ಸ್ಥಾನಮಾನ ನೀಡುವ ಜವಾಬ್ದಾರಿ ತಮ್ಮ ಮೇಲಿದ್ದು, ಇದಕ್ಕೆ ಅಹರ್ನಿಷಿ ಶ್ರಮಿಸುವುದಾಗಿ ಅವರು ಹೇಳಿದರು.

ಚುನಾವಣಾ ಪ್ರಚಾರಕ್ಕೆ ಮಕ್ಕಳು ಬರು​ವಂತಿ​ಲ್ಲ: ಜಿಲ್ಲಾಧಿಕಾರಿ ಸೆಲ್ವಮಣಿ ಎಚ್ಚ​ರಿಕೆ

ಸಿಡಗಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಕೆ. ವೆಂಕಟರಾಯಪ್ಪ, ಕಳೆದ 75 ವರ್ಷದಲ್ಲಿ ಆಗದ ಅಭಿವೃದ್ಧಿ ಕೆಲಸ ಸಚಿವ ಸುಧಾಕರ್‌ ಅವರ ಅವಧಿಯಲ್ಲಿ ಆಗಿರುವುದು ಬಹಿರಂಗ ಸತ್ಯ. ಅಂತಹ ನಾಯಕರೊಂದಿಗೆ ಇರುವುದು ಜಿಲ್ಲೆಗೆ ಉತ್ತಮ ಎಂಬ ಉದ್ದೇಶದಿಂದ ಬಿಜೆಪಿ ಸೇರ್ಪಡೆಯಾಗಿರುವುದಾಗಿ ಹೇಳಿದರು. ಬಿಜೆಪಿ ಸೇರಿದ ಕೊಂಡೇನಹಳ್ಳಿ ಕಾಂಗ್ರೆಸ್‌ ಮುಖಂಡ ನಂದರೆಡ್ಡಿ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರತಿ ಹಳ್ಳಿಯಲ್ಲಿಯೂ ಪ್ರಸ್ತುತ ಬಿಜೆಪಿ ರಾರಾಜಿಸುತ್ತಿದೆ. ಇದಕ್ಕೆ ಕಾರಣ ಸಚಿವ ಸುಧಾಕರ್‌ ಅವರು ಮಾಡಿರುವ ಅಬಿವೃದ್ಧಿಯೇ ಆಗಿದೆ. ಅಲ್ಲದೆ, ಸಚಿವರು ಯಾವುದೇ ಜಾತಿ ಮತಗಳಿಗೆ ಮನ್ನಣೆ ನೀಡದೆ, ಎಲ್ಲರನ್ನೂ ಸಮಾನವಾಗಿ ಕೊಂಡೊಯ್ಯುವ ಮನಸ್ಥತ್ವ ಹೊಂದಿರುವ ಸಚಿವರ ಕೈ ಬಲಪಡಿಸಿದರೆ ಅವರು ಕ್ಷೇತ್ರವನ್ನು ಬಲಪಡಿಸಲಿದ್ದಾರೆ ಎಂದರು.

ಮುಸ್ಲಿ​ಮ​ರಿಗೆ ಸೌಲಭ್ಯ ನೀಡಿ​ಲ್ಲ​ವೆಂದರೆ ರಾಜ​ಕೀಯ ನಿವೃ​ತ್ತಿ: ಬಿ.ಎಸ್‌.ಯಡಿಯೂರಪ್ಪ

10 ವರ್ಷಗಳಿಂದ ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಒಂದು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಲಾಗುವುದು.
- ಡಾ.ಕೆ.ಸುಧಾಕರ್‌, ಆರೋಗ್ಯ ಸಚಿವ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌