
ತುಮಕೂರು, (ನ.09): ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ನವೆಂಬರ್ 10ರಂದು ನಡೆಯುವ ಶಿರಾ ಉಪಚುನಾವಣೆಯ ಫಲಿತಾಂಶದ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ.
ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟಪಡಿಸಿದ್ದಾರೆ. ಜಯಚಂದ್ರ ಅವರಿಗೆ ಮಾತ್ರವಲ್ಲದೇ ಪತ್ನಿಗೂ ಸಹ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ದಂಪತಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗಾದರೇ ಶಿರಾ ಉಪಚುನಾವಣೆ ಪ್ರಕ್ರಿಯೆ ಶುರುವಾಗಲಿದೆ. ಆದ್ರೆ, ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರು ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ.
ಕೋವಿಡ್ ಪಾಸಿಟಿವ್ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಾಳಿನ ಮತ ಎಣಿಕೆಗೆ ಭಾಗವಹಿಸಲು ಆಗುವುದಿಲ್ಲ, ನಿಮ್ಮೆಲ್ಲರ ಶ್ರಮ ಹಾಗೂ ಆಶೀರ್ವಾದ ಗೆಲುವಿನ ಫಲಿತಾಂಶ ನೀಡಲಿದೆ ಎಂಬ ವಿಶ್ವಾಸದಲ್ಲಿ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.