ರಾಮನ ಬಳಿಕ ಈಗ ಸೀತಾ ಮಂದಿರ ನಿರ್ಮಾಣ: ಅಮಿತ್‌ ಶಾ

Published : May 17, 2024, 05:30 AM IST
ರಾಮನ ಬಳಿಕ ಈಗ ಸೀತಾ ಮಂದಿರ ನಿರ್ಮಾಣ: ಅಮಿತ್‌ ಶಾ

ಸಾರಾಂಶ

ಬಿಜೆಪಿ ಎಂದಿಗೂ ಪ್ರತಿಪಕ್ಷಗಳ ರೀತಿ ಮತಬ್ಯಾಂಕ್‌ ರಾಜಕಾರಣ ಮಾಡುವುದಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರದ ರೀತಿ ಸೀತಾಮಢಿಯಲ್ಲೂ ಸೀತಾಮಂದಿರ ನಿರ್ಮಿಸಲಾಗುವುದು ಎಂದು ತಿಳಿಸಿದ ಅಮಿತ್‌ ಶಾ 

ಸೀತಾಮಢಿ(ಮೇ.17):  ಮರ್ಯಾದಾ ಪುರುಷೋತ್ತಮ ಶ್ರೀರಾಮನಿಗೆ ಆತನ ಜನ್ಮಸ್ಥಳ ಅಯೋಧ್ಯೆಯಲ್ಲಿ ಭವ್ಯ ಮಂದಿರದ ಭರವಸೆ ನೀಡಿ ಅದನ್ನು ಈಡೇರಿಸಿದ ಬಿಜೆಪಿ, ಇದೀಗ ರಾಮನ ಧರ್ಮಪತ್ನಿ ಸೀತೆಗೂ ಆಕೆಯ ಹುಟ್ಟೂರು, ಬಿಹಾರ ಸೀತಾಮಢಿಯಲ್ಲಿ ಬೃಹತ್‌ ದೇಗುಲ ನಿರ್ಮಿಸುವುದಾಗಿ ಘೋಷಿಸಿದೆ.

ಬುಧವಾರ ಇಲ್ಲಿ ಬಿಜೆಪಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್‌ ಶಾ, ‘ಬಿಜೆಪಿ ಎಂದಿಗೂ ಪ್ರತಿಪಕ್ಷಗಳ ರೀತಿ ಮತಬ್ಯಾಂಕ್‌ ರಾಜಕಾರಣ ಮಾಡುವುದಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರದ ರೀತಿ ಸೀತಾಮಢಿಯಲ್ಲೂ ಸೀತಾಮಂದಿರ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ. 

ಪೂರ್ಣಾವಧಿಗೆ ಮತ್ತೆ ಮೋದಿಯೇ ಪ್ರಧಾನಿ: ಅಮಿತ್‌ ಶಾ

ಇದು ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಬಹಿಷ್ಕರಿಸಿದವರಿಂದ ಸಾಧ್ಯವಿಲ್ಲ. ಕೇವಲ ರಾಮಮಂದಿರದ ಕನಸು ಸಾಕಾರ ಮಾಡಿದ ಬಿಜೆಪಿ ಮತ್ತು ನರೇಂದ್ರ ಮೋದಿಯಿಂದ ಮಾತ್ರ ಸಾಧ್ಯ’ ಎಂದು ವಾಗ್ದಾನ ನೀಡಿದರು.
ಸೀತಾಮಢಿಯಲ್ಲಿ ಹಾಲಿ ಸೀತೆಗೆ ಒಂದು ಸಣ್ಣ ದೇಗುಲ ನಿರ್ಮಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Karnataka Hate Speech Bill 2025: ವಿರೋಧಿಗಳ ಹತ್ತಿಕ್ಕಲು ಸರ್ಕಾರಕ್ಕೆ ದ್ವೇಷ ಮಸೂದೆ ಮುಕ್ತ ಪರವಾನಗಿ!
ಪವರ್‌ ಪಾಯಿಂಟ್‌: ದ್ವೇಷ ಭಾಷಣ ಮಸೂದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ