ಬಸವನ ಬಾಗೇವಾಡಿ ಮತಕ್ಷೇತ್ರದ ಸಮಸ್ಯೆ ಪರಿಹರಿಸಲು ಸಿಎಂ ಬೊಮ್ಮಾಯಿಗೆ ಬೆಳ್ಳುಬ್ಬಿ ಮನವಿ

Published : Nov 25, 2022, 11:30 AM IST
ಬಸವನ ಬಾಗೇವಾಡಿ ಮತಕ್ಷೇತ್ರದ ಸಮಸ್ಯೆ ಪರಿಹರಿಸಲು ಸಿಎಂ ಬೊಮ್ಮಾಯಿಗೆ ಬೆಳ್ಳುಬ್ಬಿ ಮನವಿ

ಸಾರಾಂಶ

ಈ ಎಲ್ಲ ವಿಷಯಗಳ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂಧಪಟ್ಟವರಿಗೆ ಪರಿಹರಿಸಲು ಸೂಚಿಸಿದ ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ಜಲ ಸಂಪನ್ಮೂಲ ಸಚಿವರು 

ಕೊಲ್ಹಾರ(ನ.25):  ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿಯವರು ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕಂದಾಯ ಮಂತ್ರಿ ಆರ್‌.ಅಶೋಕರವರನ್ನು ಹಾಗೂ ನೀರಾವರಿ ಮಂತ್ರಿ ಗೋವಿಂದ ಕಾರಜೋಳರವರನ್ನು ಭೇಟಿ ಮಾಡಿ ಬಸವನ ಬಾಗೇವಾಡಿ ಮತಕ್ಷೇತ್ರದ ಹಲವಾರು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿ, ಪರಿಹರಿಸಲು ವಿನಂತಿಸಿದರು.

ಕನ್ಹೇರಿ ಸಿದ್ದಗಿರಿ ಮಠದ ಶಾಖಾ ಮಠ ನಿರ್ಮಾಣ ಮಾಡಲು ಬಸವನ ಬಾಗೇವಾಡಿ ತಾಲೂಕಿನ ಮಣ್ಣೂರ ಹಾಗೂ ನಾಗವಾಡ ಗ್ರಾಮಕ್ಕೆ ಹೊಂದಿಕೊಂಡಿರುವ ಸರ್ಕಾರಿ ಭೂಮಿ ಮಂಜೂರು ಮಾಡುವುದು. ಬಸವನ ಬಾಗೇವಾಡಿ ಪಟ್ಟಣದಲ್ಲಿ ಕಂದಾಯ ಉಪ ವಿಭಾಗಾಧಿಕಾರಿ ಕಚೇರಿ ಮಂಜೂರು ಮಾಡುವುದು. ಬಸವ ಜನ್ಮಭೂಮಿ ಬಸವನ ಬಾಗೇವಾಡಿಯನ್ನು ಪ್ರತ್ಯೇಕ ಪ್ರಾಧಿಕಾರ ಮಾಡುವುದು. ಆಲಮಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಲಮಟ್ಟಿಆರ್‌.ಎಸ್‌.ನ ಅನಧಿಕೃತ ಕಟ್ಟಡಗಳನ್ನು (ಮನೆಗಳು) ಸಕ್ರಮಗೊಳಿಸುವುದು, ತಳೇವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಗುರ್ಕಿದೊಡ್ಡಿ (ಕಿಲಾರಹಟ್ಟಿ)ಯ ಅನಧಿಕೃತ ಕಟ್ಟಡಗಳನ್ನು (ಮನೆಗಳು) ಸಕ್ರಮಗೊಳಿಸುವುದು, ಆಲಮಟ್ಟಿ ಜಲಾಶಯದ 524.256 ಮೀಟರ್‌ ಎತ್ತರದಿಂದ ಸ್ವಾಧೀನಪಡಿಸಿಕೊಳ್ಳಲಾಗುವ ಜಮೀನಿನ ಪಕ್ಕ ಉಳಿದು ಹೋಗುವ ಜಮೀನು ಮಾಲೀಕರ ಒಂದು ಗುಂಟಾದಿಂದ ಹಿಡಿದು ಒಂದು ಎಕರೆವರೆಗೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವದು, ಮರಾಠಾ ಸಮುದಾಯವನ್ನು 2ಎ ಮೀಸಲಾತಿಗೆ ಒಳಪಡಿಸುವ ಕುರಿತು ಮನವಿ ಸಲ್ಲಿಸಿದರು.

Karnataka Politics: 2023ರಲ್ಲಿ ಬಿಜೆಪಿಗೆ 130 ಸ್ಥಾನ, ಮತ್ತೆ ಅಧಿಕಾರಕ್ಕೆ: ಬಸನಗೌಡ ಪಾಟೀಲ್ ಯತ್ನಾಳ್ ವಿಶ್ವಾಸ

ಈ ಎಲ್ಲ ವಿಷಯಗಳ ಕುರಿತು ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ಜಲ ಸಂಪನ್ಮೂಲ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂಧಪಟ್ಟವರಿಗೆ ಪರಿಹರಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಸಂತೋಷ ನಾಯಕ, ಕಾಡಸಿದ್ದೇಶ್ವರ ಬಿರಾದಾರ ಕೊಲ್ಹಾಪುರ, ಬಸವರಾಜ ಗಚ್ಚಿನವರ ಹಾಗೂ ಬಸವರಾಜ ನಾಯ್ಕೋಡಿ ಉಪಸ್ಥಿತರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ಬೆಂಗಳೂರು - ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!