ಅತ್ತ ಬಿಜೆಪಿ ಬೆಂಬಲಿಸುವಂತೆ ಅಜ್ಜ ಕರೆ, ಇತ್ತ ಮೊಮ್ಮಗ ಕೆಪಿಸಿಸಿ ಹುದ್ದೆಗೆ ರಾಜೀನಾಮೆ

Published : Feb 10, 2019, 10:01 PM IST
ಅತ್ತ ಬಿಜೆಪಿ ಬೆಂಬಲಿಸುವಂತೆ ಅಜ್ಜ ಕರೆ, ಇತ್ತ ಮೊಮ್ಮಗ ಕೆಪಿಸಿಸಿ ಹುದ್ದೆಗೆ ರಾಜೀನಾಮೆ

ಸಾರಾಂಶ

ನಿನ್ನೆಯಷ್ಟೇ ಮಾಜಿ ಸಿಎಂ ಎಸ್.ಎಂ ಕೃಷ್ಣ ತಮ್ಮ ಅಭಿಮಾನಿಗಳಿಗೆ ಬಿಜೆಪಿ ಬೆಂಬಲಿಸುವಂತೆ ಕರೆ ನೀಡಿದ್ದ ಬೆನ್ನಲ್ಲೇ ಮೊಮ್ಮಗ ಕೆಪಿಸಿಸಿ ವೈದ್ಯರ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ  ನೀಡಿದ್ದಾರೆ.

ಬೆಂಗಳೂರು, [ಫೆ.10]: ಮಜಿ ಸಿಎಂ ಎಸ್.ಎಂ. ಕೃಷ್ಣ ಅವರ ಮೊಮ್ಮಗ ಡಾ. ನಿರಂತರ ಗಣೇಶ್ ಅವರು ಕೆಪಿಸಿಸಿ ವೈದ್ಯರ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ  ನೀಡಿದ್ದಾರೆ. 

ಕೆಪಿಸಿಸಿ ವೈದ್ಯರ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದು, ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಇರುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. 

ಕೃಷ್ಣ ಮೊಮ್ಮಗ ಇಂದು ಕಾಂಗ್ರೆಸ್'ಗೆ: ಅಜ್ಜನ ಕುರಿತಾಗಿ ಮೊಮ್ಮಗ ಹೇಳಿದ್ದೇನು?

ಎಸ್‌.ಎಂ. ಕೃಷ್ಣ ಅವರ ಸಹೋದರಿ ಸುನೀತಾ ಅವರ ಪುತ್ರಿಯ ಮಗ ನಿರಂತರ ಗಣೇಶ್‌ ಮೂಲತಃ ವೈದ್ಯರು. ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ಆರ್ಥೊ ಸರ್ಜನ್‌ ಆಗಿ ಸೇವೆ ಸಲ್ಲಿಸುತ್ತಿದ್ದ ನಿರಂತರ ಗಣೇಶ್‌ ಕಳೆದ ಎರಡು ವರ್ಷಗಳಿಂದ ಕಡೂರು ಕ್ಷೇತ್ರದ ರಾಜಕೀಯ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ.

ಅಷ್ಟೇ ಅಲ್ಲದೇ ನಿರಂತರ ಗಣೇಶ್ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಆಕ್ಷಾಂಕಿಯಾಗಿದ್ದರು. ಕ್ಷೇತ್ರದಲ್ಲಿ ಹಲವಾರು ವೈದ್ಯಕೀಯ ಕ್ಯಾಂಪ್, ರೈತರಿಗೆ ಉಚಿತವಾಗಿ ಮೇವು ನೀಡಿದ್ದರು. 

ನಿನ್ನೆಯಷ್ಟೇ ಮಾಜಿ ಸಿಎಂ ಎಸ್.ಎಂ ಕೃಷ್ಣ ತಮ್ಮ ಅಭಿಮಾನಿಗಳಿಗೆ ಬಿಜೆಪಿ ಬೆಂಬಲಿಸುವಂತೆ ಕರೆ ನೀಡಿದ್ದರು. ಇದರ ಬೆನ್ನಲ್ಲೇ ದಿಢೀರ್ ಆಗಿ ನಿರಂತರ ಗಣೇಶ್ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!