ನೂತನ ಸಿಎಂ ಬೊಮ್ಮಾಯಿಯವರಿಗೊಂದು ಎಸ್.ಎಂ. ಕೃಷ್ಣ ಪತ್ರ

Published : Jul 28, 2021, 09:33 PM IST
ನೂತನ ಸಿಎಂ ಬೊಮ್ಮಾಯಿಯವರಿಗೊಂದು ಎಸ್.ಎಂ. ಕೃಷ್ಣ ಪತ್ರ

ಸಾರಾಂಶ

* 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ * ಬಸವರಾಜ ಬೊಮ್ಮಾಯಿಯವರಿಗೊಂದು ಪತ್ರ * ಕರ್ನಾಟಕ ಕಂಡ  ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಅವರಿಂದ ಪತ್ರ

ಬೆಂಗಳೂರು, (ಜು.28): ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಇಂದು (ಜುಲೈ 28) ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಗೆ ಕರ್ನಾಟಕ ಕಂಡ  ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಪತ್ರದ ಮೂಲಕ ಶುಭ ಹಾರೈಸಿದ್ದಾರೆ. 

ಎಸ್.ಎಂ. ಕೃಷ್ಣ ತಮ್ಮ ಹಾಗೂ ಬಸವರಾಜ ಬೊಮ್ಮಾಯಿ ತಂದೆ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರೊಂದಿಗಿನ ಒಡನಾಟವನ್ನೂ ಪತ್ರದಲ್ಲಿ ಸ್ಮರಿಸಿಕೊಂಡಿದ್ದಾರೆ. ಪತ್ರದ ಸಾಲುಗಳು ಈ ಕೆಳಗಿನಂತಿವೆ. 

ನೂತನ ಸಿಎಂ ಬೊಮ್ಮಾಯಿಗೆ ಮಹತ್ವದ ಭರವಸೆ ನೀಡಿದ ಸಿದ್ದರಾಮಯ್ಯ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಗೆ ತುಂಬುಹೃದಯದ ಅಭಿನಂದನೆಗಳು. ತಮ್ಮ ನೇತೃತ್ವದ ಬಿಜೆಪಿ ಸರ್ಕಾರ ನಾಡಿನ ಜನರ ಹಿತರಕ್ಷಣೆಗೆ ಕಟಿಬದ್ಧರಾಗಿ ಶ್ರೀ ಬಿ.ಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಆಶಿಸುತ್ತೇನೆ.

ನಾನು ಮತ್ತು ನಿಮ್ಮ ತಂದೆಯವರು ಆತ್ಮೀಯ ಮಿತ್ರರಾಗಿದ್ದು ಶ್ರೀ ಎಸ್.ಆರ್ ಬೊಮ್ಮಾಯಿಯವರು ಹಲವು ಬಾರಿ ನನಗೆ ಮಾರ್ಗದರ್ಶಕರಾಗಿ, ಹಿತೈಷಿಗಳಾಗಿದ್ದು ನನ್ನ ಸ್ಮೃತಿ ಪಟಲದಲ್ಲಿದೆ. ಸಜ್ಜನ ಸೌಮ್ಯ ರಾಜಕಾರಣಿಯಾಗಿ ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆತು ಸಂಬಂಧ ಹೊಂದಿದ್ದ ನಿಮ್ಮ ತಂದೆಯವರಂತೆ ತಾವು ಸಹ ಅವರ ದಾರಿಯಲ್ಲಿ ಮುನ್ನಡೆದು ಎಲ್ಲರ ವಿಶ್ವಾಸಗಳಿಸಿ ಯಶಸ್ವಿಯಾಗಿ ತಮ್ಮ ಆಡಳಿತ ನಡೆಸುವಂತಾಗಲಿ ಎಂದು ಎಸ್‌ಎಂ ಕೃಷ್ಣ ಶುಭಾ ಹಾರೈಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇರಳ ನಿಯೋಗ ಕೋಗಿಲು ಬಡಾವಣೆಗೆ ಬಂದಿದ್ದು ರಾಜಕಾರಣ ಮಾಡಲು, ಹಣವನ್ನೇನು ಕೊಟ್ಟಿಲ್ಲ; ಸಚಿವ ಜಮೀರ್ ಕಿಡಿ!
ರಾಜ್ಯದಲ್ಲಿ ಡ್ರಗ್ ಫ್ಯಾಕ್ಟರಿಗಳ ಅಟ್ಟಹಾಸ: ಗುಪ್ತಚರ ಇಲಾಖೆ ನಿದ್ದೆ ಮಾಡ್ತಿದೆಯೇ?- ಆರ್. ಅಶೋಕ್