ಬಿಜೆಪಿ ಅಧ್ಯಕ್ಷರ ಆಯ್ಕೆ: ರೇಸ್‌ನಲ್ಲಿ ಸ್ಮೃತಿ ಇರಾನಿ, ಅನುರಾಗ್‌ ಠಾಕೂರ್‌, ಶಿವರಾಜ್‌ ಸಿಂಗ್‌ ಚೌಹಾಣ್‌

Published : Feb 28, 2025, 07:28 AM ISTUpdated : Feb 28, 2025, 07:47 AM IST
ಬಿಜೆಪಿ ಅಧ್ಯಕ್ಷರ ಆಯ್ಕೆ: ರೇಸ್‌ನಲ್ಲಿ ಸ್ಮೃತಿ ಇರಾನಿ, ಅನುರಾಗ್‌ ಠಾಕೂರ್‌, ಶಿವರಾಜ್‌ ಸಿಂಗ್‌ ಚೌಹಾಣ್‌

ಸಾರಾಂಶ

ಬಿಜೆಪಿ ಮಾರ್ಚ್ 15 ರೊಳಗೆ ಹೊಸ ರಾಷ್ಟ್ರೀಯ ಪಕ್ಷದ ಅಧ್ಯಕ್ಷರನ್ನು ಪಡೆಯುವ ಸಾಧ್ಯತೆಯಿದೆ. ಸ್ಮೃತಿ ಇರಾನಿ, ಅನುರಾಗ್‌ ಠಾಕೂರ್‌, ಶಿವರಾಜ್‌ ಸಿಂಗ್‌ ಚೌಹಾಣ್‌ ಸೇರಿ ಹಲವರು ರೇಸ್‌ನಲ್ಲಿದ್ದಾರೆ ಎನ್ನಲಾಗಿದೆ. ಕರ್ನಾಟಕ ಸೇರಿ ಉಳಿದ ರಾಜ್ಯಗಳ ರಾಜ್ಯಾಧ್ಯಕ್ಷರನ್ನು ಶೀಘ್ರ ಬಿಜೆಪಿ ನೇಮಿಸಲಿದೆ.

ನವದೆಹಲಿ: ಬಿಜೆಪಿ ಮಾರ್ಚ್ 15 ರೊಳಗೆ ಹೊಸ ರಾಷ್ಟ್ರೀಯ ಪಕ್ಷದ ಅಧ್ಯಕ್ಷರನ್ನು ಪಡೆಯುವ ಸಾಧ್ಯತೆಯಿದೆ ಎಂದು ಗುರುವಾರ ಮೂಲಗಳು ಹೇಳಿವೆ ಎಂದು ಎನ್ಡಿಡೀವಿ ವರದಿ ಮಾಡಿದೆ. ಆದಾಗ್ಯೂ, ಹುದ್ದೆಗೆ ಪ್ರಮುಖ ಆಯ್ಕೆಗಳು ಅಥವಾ ಮುಂಚೂಣಿಯಲ್ಲಿರುವವರ ಬಗ್ಗೆ ಯಾವುದೇ ದೃಢೀಕರಣವಿಲ್ಲ. ಸ್ಮೃತಿ ಇರಾನಿ, ಅನುರಾಗ್‌ ಠಾಕೂರ್‌, ಶಿವರಾಜ್‌ ಸಿಂಗ್‌ ಚೌಹಾಣ್‌ ಸೇರಿ ಹಲವರು ರೇಸ್‌ನಲ್ಲಿದ್ದಾರೆ ಎನ್ನಲಾಗಿದೆ.ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಜೂನ್ 2024 ರಲ್ಲಿ ಕೊನೆಗೊಂಡಿತ್ತು. ಆದರೆ ಕೆಲವು ವಿಧಾನಸಭೆ ಚುನಾವಣೆಗಳು ಎದುರಾದ ಕಾರಣ ಅವರನ್ನು ಮುಂದುವರಿಸಲಾಗಿತ್ತು. ಆದರೆ ಈಗ ದಿಲ್ಲಿ ಚುನಾವಣೆ ಮುಗಿದ ಕಾರಣ ಮಾ.15ರೊಳಗೆ ಚುನಾವಣೆ ಮುಗಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. 

ಶೀಘ್ರ ರಾಜ್ಯಾಧ್ಯಕ್ಷರ ಆಯ್ಕೆ:

ಕನಾಟಕ ಸೇರಿ ಉಳಿದ ರಾಜ್ಯಗಳ ರಾಜ್ಯಾಧ್ಯಕ್ಷರನ್ನು ಶೀಘ್ರ ಬಿಜೆಪಿ ನೇಮಿಸಲಿದೆ ಎಂದು ಮೂಲಗಳು ಹೇಳಿವೆ. ಬಿಜೆಪಿ 28 ರಾಜ್ಯಗಳ ಪೈಕಿ 12 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣೆಗಳನ್ನು ಪೂರ್ಣಗೊಳಿಸಿದೆ.

ನಾನು ಬಿಜೆಪಿಗೆ ಹತ್ತಿರ ಎಂಬುದು ಸುಳ್ಳು, ನಾನು ಎಲ್ಲ ಧರ್ಮ ಪ್ರೀತಿಸುತ್ತೇನೆ: ಡಿಕೆಶಿ

2 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಗೊಳಗಾದ ರಾಜಕಾರಣಿಗಳ ಆಜೀವ ಅನರ್ಹತೆಗೆ ಕೇಂದ್ರದ್ದೇ ವಿರೋಧ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ