ಅಮೇಠಿ ಸೋಲು ಹಿನ್ನೆಲೆ ದೆಹಲಿ ಬಂಗಲೆ ತೊರೆದ ಸ್ಮೃತಿ ಇರಾನಿ, ಆಕೆಯ ಬಗ್ಗೆ ಕೀಳು ಮಾತು ಬೇಡ ಎಂದ ರಾಹುಲ್

Published : Jul 13, 2024, 10:40 PM IST
ಅಮೇಠಿ ಸೋಲು ಹಿನ್ನೆಲೆ ದೆಹಲಿ  ಬಂಗಲೆ ತೊರೆದ ಸ್ಮೃತಿ ಇರಾನಿ, ಆಕೆಯ ಬಗ್ಗೆ ಕೀಳು ಮಾತು ಬೇಡ ಎಂದ ರಾಹುಲ್

ಸಾರಾಂಶ

ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ದೆಹಲಿಯ ಲ್ಯೂಟೆನ್ಸ್‌ 28 ತುಘಲಕ್ ಕ್ರೆಸೆಂಟ್ ರಸ್ತೆಯಲ್ಲಿರುವ ತಮ್ಮ ಸರ್ಕಾರಿ ಬಂಗಲೆ ಖಾಲಿ ಮಾಡಿದ್ದಾರೆ.

ನವದೆಹಲಿ: ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ದೆಹಲಿಯ ಲ್ಯೂಟೆನ್ಸ್‌ 28 ತುಘಲಕ್ ಕ್ರೆಸೆಂಟ್ ರಸ್ತೆಯಲ್ಲಿರುವ ತಮ್ಮ ಸರ್ಕಾರಿ ಬಂಗಲೆ ಖಾಲಿ ಮಾಡಿದ್ದಾರೆ. ನಿಯಮಗಳ ಪ್ರಕಾರ ಹೊಸ ಸರ್ಕಾರ ರಚನೆಯಾದ ತಿಂಗಳಲ್ಲಿ ಮಾಜಿ ಸಚಿವರು, ಮಾಜಿ ಸಂಸದರು ತಮಗೆ ನೀಡಿದ್ದ ಸರ್ಕಾರಿ ಬಂಗಲೆ ತೊರೆಯಬೇಕು.

 ಅದರಂತೆ ಲೋಕಸಭೆ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಿಂದ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ವಿರುದ್ಧ 1.5 ಲಕ್ಷ ಮತಗಳ ಅಂತರದಿಂದ ಸೋತಿದ್ದ ಸ್ಮೃತಿ ,ಬಂಗಲೆ ತೊರೆದಿದ್ದಾರೆ. 2019ರಲ್ಲಿ ರಾಹುಲ್‌ ಗಾಂಧಿಯನ್ನು ಸೋಲಿಸಿ ಅಮೇಠಿ ಕ್ಷೇತ್ರದಲ್ಲಿ ಗೆಲುವು ಕಂಡಿದ್ದ ಸ್ಮೃತಿ ಇರಾನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾಗಿದ್ದರು.

4 ದಶಕದ ಬಳಿಕ ನಕಲಿ ಕೀ ಬಳಸಿ ಪುರಿ ಜಗನ್ನಾಥನ ರತ್ನ ಭಂಡಾರ ಓಪನ್, ಖಜಾನೆ ಲೂಟಿ ಮಾಡಲಾಗಿದ್ಯಾ?

ಸ್ಮೃತಿ ಇರಾನಿ ಬಗ್ಗೆ ಕೀಳು ಮಾತು ಬೇಡ: ರಾಹುಲ್‌ ಗಾಂಧಿ
ನವದೆಹಲಿ: ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಅಥವಾ ಇತರೆ ಯಾವುದೇ ನಾಯಕರ ಬಗ್ಗೆ ಕೀಳಾಗಿ ಮಾತನಾಡುವುದು ಹಾಗೂ ಅಸಹ್ಯವಾಗಿ ವರ್ತಿಸುವುದನ್ನು ನಿಲ್ಲಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸಾರ್ವಜನಿಕರನ್ನು ಕೋರಿದ್ದಾರೆ.

ಅಮೇಠಿಯಲ್ಲಿ ಸೋತ ಹಿನ್ನೆಲೆಯಲ್ಲಿ ಇರಾನಿ ಅವರು ಗುರುವಾರ ದೆಹಲಿಯಲ್ಲಿರುವ ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದರರು. ಬಳಿಕ ಲವರು ಇರಾನಿ ಅವರ ಬಗ್ಗೆ ಕೀಳಾಗಿ ಸೋಷಿಯಲ್‌ ಮೀಡಿಯಾದಲ್ಲಿ ಟೀಕೆ ಮಾಡಿದ್ದರು.

ಈ ಬಗ್ಗೆ ಶುಕ್ರವಾರ ಟ್ವೀಟ್‌ ಮಾಡಿರುವ ರಾಹುಲ್‌, ‘ಸೋಲು-ಗೆಲುವು ಜೀವನದ ಅವಿಭಾಜ್ಯ ಅಂಗಗಳು. ಸ್ಮೃತಿ ಇರಾನಿ ಅಥವಾ ಯಾವುದೇ ನಾಯಕರ ಬಗ್ಗೆ ಕೀಳಾಗಿ ಮಾತನಾಡುವುದು ಹಾಗೂ ಅವರೊಂದಿಗೆ ಅಸಹ್ಯವಾಗಿ ವರ್ತಿಸುವುದು ತಪ್ಪು. ಆದ್ದರಿಂದ ಈ ವರ್ತನೆಯನ್ನು ಇಲ್ಲಿಗೆ ನಿಲ್ಲಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್