ಕೊರೋನಾಗೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಬಲಿ: ಅಧಿಕಾರ ಸ್ವೀಕರಿಸಿದ ಆರೇ ತಿಂಗಳಿಗೆ ಬದುಕು ಕೊನೆ

Published : May 19, 2021, 07:42 PM IST
ಕೊರೋನಾಗೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಬಲಿ: ಅಧಿಕಾರ ಸ್ವೀಕರಿಸಿದ ಆರೇ ತಿಂಗಳಿಗೆ ಬದುಕು ಕೊನೆ

ಸಾರಾಂಶ

* ಕಿಲ್ಲರ್‌ ಕೊರೋನಾಗೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಬಲಿ * ಸೋಮವಾರಪೇಟೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಸಾವು * ಅಧಿಕಾರ ಸ್ವೀಕರಿಸಿದ ಆರೇ ತಿಂಗಳಿಗೆ ಬದುಕು ಕೊನೆ

ಕೊಡಗು, (ಮೇ.19):  ಸೋಮವಾರಪೇಟೆ ಪಟ್ಟಣ ಪಂಚಾಯತಿ ಅಧ್ಯಕ್ಷೆಯಾಗಿ ಕೇವಲ 6 ತಿಂಗಳು ಆಗಿತ್ತು ಅಷ್ಟೇ. ಆದ್ರೆ, ಮಹಾಮಾರಿ ಕೊರೋನಾ ಅವರನ್ನ ಬಲಿಪಡೆದುಕೊಂಡಿದೆ.

ಹೌದು...ಕೊಡಗಿನ ಸೋಮವಾರಪೇಟೆಯ ಪಟ್ಟಣ ಪಂಚಾಯತಿ ಅಧ್ಯಕ್ಷೆ ನಳಿನಿ ಗಣೇಶ್ (57) ಕೊರೋನಾ ಸೋಂಕು ಬಲಿಯಾಗಿದ್ದಾರೆ.

ಕೊರೋನಾದಿಂದ ಕೊನೆಯುಸಿರೆಳೆದ ಗಣ್ಯರು

ಸೋಮವಾರಪೇಟೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ನಳಿನಿ ಗಣೇಶ್ ಅವರಿಗೆ ಕೆಲ ದಿನಗಳ ಹಿಂದೆ ಕರೊನಾ ಸೋಂಕು ದೃಢವಾಗಿದ್ದು, ಮಡಿಕೇರಿ ಜಿಲ್ಲಾ‌ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. 

ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಅವರು ಇಂದು (ಬುಧವಾರ) ಕೊನೆಯುಸಿರೆಳೆದಿದ್ದಾರೆ. ನಳಿನಿ ಅವರು ಪಟ್ಟಣ ಪಂಚಾಯತಿಗೆ ಹಲವು ಬಾರಿ ಸದಸ್ಯೆಯಾಗಿ ಚುನಾಯಿತರಾಗಿದ್ದರು.  ಕಳೆದ ನವೆಂಬರ್​ನಲ್ಲಿ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ್ದರು. ಅಧಿಕಾರ ಸ್ವೀಕರಿಸಿದ ಆರೇ ತಿಂಗಳಿಗೆ ಅವರ ಬದುಕು ಕೊನೆಯಾಗಿದೆ.

 ಕೊರೋನಾದಿಂದ  ರಾಜ್ಯಾದ್ಯಂತ ಪ್ರತಿನಿತ್ಯ ನೂರಾರು ಜನರು ಬಲಿಯಾಗುತ್ತಿದ್ದಾರೆ. ಅನೇಕ ಅಧಿಕಾರಿಗಳು ಸೇರಿ ಜನಪ್ರತಿನಿಧಿಗಳೂ ಸೋಂಕಿನಿಂದಾಗಿ ಕೊನೆಯುಸಿರೆಳೆಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ
ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌