ಹಿಂದೂಗಳ ಮತ ಬೇಕಿದ್ದರೆ ಸೋನಿಯಾ ಅಯೋಧ್ಯೆಗೆ ಬರಲಿ: ಯತ್ನಾಳ್

Published : Dec 23, 2023, 10:00 PM IST
ಹಿಂದೂಗಳ ಮತ ಬೇಕಿದ್ದರೆ ಸೋನಿಯಾ ಅಯೋಧ್ಯೆಗೆ ಬರಲಿ: ಯತ್ನಾಳ್

ಸಾರಾಂಶ

ಹಿಂದೂಗಳಲ್ಲಿ ವೈರಿಗಳನ್ನೂ ಸ್ವಾಗತ ಮಾಡುವುದು ಧರ್ಮ. ಹೀಗಾಗಿ ಸೋನಿಯಾ ಗಾಂಧಿಗೆ ಆಹ್ವಾನ ನೀಡಿದ್ದಾರೆ. ಆದರೆ, ಅಯೋಧ್ಯೆಯ ರಾಮಮಂದಿರ ವಿರುದ್ಧ ಕಾಂಗ್ರೆಸ್ 25 ಜನ ವಕೀಲರನ್ನು ಸುಪ್ರೀಂ ಕೋರ್ಟ್‌ನಲ್ಲಿ ನಿಲ್ಲಿಸಿತ್ತು: ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ 

ವಿಜಯಪುರ(ಡಿ.23):  ಹಿಂದೂಗಳ ಬಗ್ಗೆ, ದೇಶದ ಬಗ್ಗೆ ಕಳಕಳಿ ಇದ್ದರೆ, ಹಿಂದೂಗಳ ವೋಟ್ ಬೇಕಿದ್ದರೆ ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿ ಅವರು ಅಯೋಧ್ಯೆಯ ಶ್ರೀ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿ. ಅವರು ರಾಮಮಂದಿರಕ್ಕೆ ಬರೋದು ವೋಟಿಗಾಗಿಯೇ. ಸಾಬರ ವೋಟ್ ಬೇಕಿದ್ದರೆ ಮೆಕ್ಕಾ ಮದೀನಾಕ್ಕೆ ಹೋಗಲಿ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.

ನಗರದಲ್ಲಿ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿಯವರಿಗೆ ಆಹ್ವಾನ ನೀಡಿದ್ದು, ಅವರು ಬರುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತ್ನಾಳ, ಹಿಂದೂಗಳಲ್ಲಿ ವೈರಿಗಳನ್ನೂ ಸ್ವಾಗತ ಮಾಡುವುದು ಧರ್ಮ. ಹೀಗಾಗಿ ಸೋನಿಯಾ ಗಾಂಧಿಗೆ ಆಹ್ವಾನ ನೀಡಿದ್ದಾರೆ. ಆದರೆ, ಅಯೋಧ್ಯೆಯ ರಾಮಮಂದಿರ ವಿರುದ್ಧ ಕಾಂಗ್ರೆಸ್ 25 ಜನ ವಕೀಲರನ್ನು ಸುಪ್ರೀಂ ಕೋರ್ಟ್‌ನಲ್ಲಿ ನಿಲ್ಲಿಸಿತ್ತು. ಹಿರಿಯ ಮುಖಂಡ ಕಪಿಲ್ ಸಿಬಲ್ ಸೇರಿ 27 ವಕೀಲರು, ಕಾಂಗ್ರೆಸ್ ಸದಸ್ಯರು ನ್ಯಾಯಾಲಯದಲ್ಲಿ ರಾಮ ಮಂದಿರ ವಿರುದ್ಧ ವಾದ ಮಂಡಿಸಿದ್ದಾರೆ. ರಾಮ ಎಂಬುದು ಕೇವಲ ಕಲ್ಪನೆ. ರಾಮ ಇದ್ದ ಎನ್ನಲು ದಾಖಲೆಯೇ ಇಲ್ಲ ಎಂದು ನ್ಯಾಯಾಲಯದಲ್ಲಿ ಕಾಂಗ್ರೆಸ್‌ನವರು ವಾದ ಮಾಡಿದ್ದರು ಟೀಕಿಸಿದರು.

ಐಷಾರಾಮಿ ವಿಮಾನದಲ್ಲಿ ಸಿಎಂ, ಸಚಿವರ ಜರ್ನಿ: ಯಾರಪ್ಪನ ದುಡ್ಡು? ಜನ್ರ ದುಡ್ಡಲ್ಲಿ ಶೋಕಿ ಮಾಡ್ತೀರಾ? ಯತ್ನಾಳ್ ಗರಂ

ಯಾರ ಭೇಟಿಗೂ ಹೋಗಿಲ್ಲ:

ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಗರಂ ಆದ ಶಾಸಕ ಯತ್ನಾಳ, ನಾನು ಯಾರ ಭೇಟಿಗೂ ಹೋಗಿಲ್ಲ. ಯಾರ ಅಪಾಯಿಂಟ್‌ಮೆಂಟ್‌ ಕೇಳಿಲ್ಲ. ನನಗೆ ಅಪಾಯಿಂಟ್‌ಮೆಂಟ್‌ ಪಡೆಯುವ ಅವಶ್ಯಕತೆಯೂ ಇಲ್ಲ. ನನ್ನ ವೈಯಕ್ತಿಕ ಕೆಲಸಕ್ಕೆ ಅಂದರೆ ಕಾರ್ಖಾನೆ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ. ನಾನು ಅತ್ಯಂತ ಅಪಮಾನಕಾರಿಯಾಗಿ, ದೈನ್ಯನಾಗಿ ಹೋಗಿಲ್ಲ. ನನಗೆ ಯಾರೂ ಬೈದಿಲ್ಲ. ಗಂಭೀರವಾದ ಎಚ್ಚರಿಕೆಯನ್ನೂ ಕೊಟ್ಟಿಲ್ಲ. ಸುಮ್ನೆ ನೀವು ಹೊಡೆಯುತ್ತ ಕೂರುತ್ತೀರಿ ಎಂದು ಮಾಧ್ಯಮಗಳ ವಿರುದ್ಧ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್‌ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್‌ ವಿರುದ್ಧ ರಜತ್‌ ಆರೋಪ