
ಹುಬ್ಬಳ್ಳಿ(ಫೆ.20): ಪರಿಷತ್ ಚುನಾವಣೆಯೊಳಗೆ ಬಸವರಾಜ ಹೊರಟ್ಟಿ(Basavaraj Horatti) ಬಿಜೆಪಿ ಸೇರಲಿದ್ದಾರೆಯೇ? ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ಗೆ(Vidhan Parishat Election) ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆಯೇ? ಈ ರೀತಿಯ ವದಂತಿಗಳು ರಾಜಕೀಯ(Politics) ವಲಯದಲ್ಲಿ ಹರಿದಾಡುತ್ತಿದ್ದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ(Pralhad Joshi) ಅವರ ಮಾತುಗಳೂ ಇದಕ್ಕೆ ಪುಷ್ಟಿ ನೀಡುವಂತಿವೆ.
ಈ ಬಗ್ಗೆ ಮಾಧ್ಯಮದವರು ಪ್ರಹ್ಲಾದ ಜೋಶಿಯವರನ್ನು ಪ್ರಶ್ನಿಸಿದಾಗ, ನಮ್ಮ ಪಕ್ಷದಿಂದಲೂ ಒಬ್ಬ ಅಭ್ಯರ್ಥಿ ಕಣಕ್ಕಿಳಿಸಲಾಗುವುದು. ಹೈಕಮಾಂಡ್ಗೆ ಮೂರು ಜನರ ಹೆಸರನ್ನು ಕಳುಹಿಸಲಾಗಿದೆ. ಅದು ಹೊರಟ್ಟಿ ಆದರೂ ಆಗಬಹುದು. ಬೇರೆಯವರಾದರೂ ಆಗಬಹುದು ಎಂದು ಹೇಳಿದರು. ನಿಮ್ಮ ಆಕಾಂಕ್ಷಿಗಳ ಪಟ್ಟಿಯಲ್ಲಿ ಹೊರಟ್ಟಿ ಅವರ ಹೆಸರಿದೆಯಾ? ಎಂಬ ಪ್ರಶ್ನೆಗೆ, ಇಲ್ಲ ಹಾಗಿಲ್ಲ. ಅವರ ಪಕ್ಷದ ಪಟ್ಟಿಯಲ್ಲಿ ಅವರ ಹೆಸರಿರುತ್ತದೆ. ನಮ್ಮ ಪಕ್ಷದ ಅಭ್ಯರ್ಥಿ ಬೇರೆಯವರು ನಿಲ್ಲುತ್ತಾರಷ್ಟೇ ಎಂದರು. ಬಿಜೆಪಿ(BJP) ಸೇರ್ಪಡೆ ಬಗೆಗಿನ ಪ್ರಶ್ನೆಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು, ಬಿಜೆಪಿ ಸೇರುವ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ಚುನಾವಣೆ ಬಗ್ಗೆ ಮೇ ತನಕ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.
60 ದಿನ ಕಲಾಪ ನಡೆಸಲು ಸರ್ಕಾರಕ್ಕೆ ಹೊರಟ್ಟಿ ಸೂಚನೆ
ಬಸವರಾಜ ಹೊರಟ್ಟಿ ಬಿಜೆಪಿ ಸೇರ್ತಾರಾ? ಇದಕ್ಕೆ ಸ್ಪಷ್ಟನೆ ಕೊಟ್ಟ ಪರಿಷತ್ ಸಭಾಪತಿ
ಹುಬ್ಬಳ್ಳಿ: ಕರ್ನಾಟಕದ 4 ವಿಧಾನಪರಿಷತ್ ಸ್ಥಾನಗಳಿಗೆ ಈ ವರ್ಷದ ಮಧ್ಯಭಾಗದಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ.
ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸದಸ್ಯತ್ವ ಅವಧಿ ಜೂನ್ ವೇಳೆಗೆ ಮುಕ್ತಾಯವಾಗಲಿದ್ದು, ಅವರು ಮುಂದಿನ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಇದೀಗ ಅದಕ್ಕೆ ಸ್ವತಃ ಹೊರಟ್ಟಿ ಅವರೇ ಫೆ.11 ರಂದು ಸ್ಪಷ್ಟನೆ ಕೊಟ್ಟಿದ್ದರು.
ಸದ್ಯಕ್ಕೆ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸೇರುವ ಬಗ್ಗೆ ನಾನು ಎಲ್ಲೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಶಿಕ್ಷಕರ ಕ್ಷೇತ್ರಕ್ಕೆ ಆಯಾ ಪಕ್ಷ ಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಪ್ರಕಟಿಸಿವೆ. ಇನ್ನೂ ಮೇ ತಿಂಗಳಲ್ಲಿ ಚುನಾವಣೆ ಇದೆ . ನನ್ನ ಚುನಾವಣೆ ವಿಚಾರದಲ್ಲಿ ಜಾತಿ ಪ್ರಶ್ನೆಯೇ ಬರಲ್ಲ. ಶಿಕ್ಷಕರ ಬೆಂಬಲ ನನಗಿದೆ. ಯಾವ ಪಕ್ಷಕ್ಕೂ ಹೋಗಬೇಕೆಂಬುದಿಲ್ಲ. ಕೆಲವರು ಸ್ನೇಹಿತರ ಬಿಜೆಪಿಗೆ ಸೇರುವಂತೆ ಆಹ್ವಾನ ನೀಡಿದ್ದರು. ಮತ್ತೆ ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಿದ್ದರು.
ಮತಾಂತರ ನಿಷೇಧ ಕಾಯ್ದೆ ಬಜೆಟ್ ಅಧಿವೇಶನದಲ್ಲಿ ಪರಿಷತ್ ನಲ್ಲಿ ಮಂಡನೆ ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾವ ಮಸೂದೆಗಳು ಮಂಡನೆಯಾಗುತ್ತೆ ಅನ್ನೋದರ ಬಗ್ಗೆ ಮಾಹಿತಿಯಿಲ್ಲ ಪರಿಷತ್ ನಲ್ಲಿ ಮಂಡನೆ ಆದ್ರೂ ನೆಕ್ ಟು ನೆಕ್ ಫೈಟ್ ಇದೆ ಎಂದು ತಿಳಿಸಿದ್ದರು.
Caste abuse: ಸ್ಪೀಕರ್ ಹೊರಟ್ಟಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ
ಹಿಜಾಬ್(Hijab), ಕೇಸರಿ ಶಾಲು ವಿವಾದಕ್ಕೆ ಸಂಬಂಧಪಟ್ಟಂತೆ ಹೊರಟ್ಟಿ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ತನ್ನ ಜವಬ್ದಾರಿಯಿಂದ ವಿಮುಖವಾಗಿದೆ. ಹಿಜಾಬ್ ಕೇಸರಿ ವಿವಾದ(controversy) ರಾಜಕೀಯಮಯವಾಗಿದ್ದು, ಶಾಲಾ-ಕಾಲೇಜಿಗೆ ರಜೆ ನೀಡಿದ್ದು ಸರಿಯಲ್ಲ. ಸರ್ಕಾರಕ್ಕೆ ಈ ವಿಷಯದಲ್ಲಿ ಗಂಭೀರತೆ ಇಲ್ಲ. ಶಿಕ್ಷಣ ಸಚಿವರು ಸುಮ್ಮನೆ ಆರಾಮಾಗಿದ್ದರೆ ಹೇಗೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು.
ರಾಮನ ಭಕ್ತರೇ ಇರಲಿ ಹನುಮನ ಭಕ್ತರೇ ಇರಲಿ. ಮಕ್ಕಳ ಜೊತೆ ರಾಜಕೀಯ ಮಾಡಬಾರದು. ಕೆಲ ಸಂಘಟನೆಗಳು ರಾಜಕೀಯ ನಾಯಕರ ಸಂಬಂಧಿಕರಾಗಿದ್ದಾರೆ. ಕುಮ್ಮಕ್ಕು ಕೊಟ್ಟು ಈ ರೀತಿ ಮಾಡಲಾಗುತ್ತಿದೆ. ಸಮಾಜದಲ್ಲಿ ಜವಬ್ದಾರಿ ಇರುವವರು ನಮ್ಮ ಊರು, ನಮ್ಮ ಜಿಲ್ಲೆಯ ಮಕ್ಕಳು ಎನ್ನುವುದನ್ನು ಮರೆತಿದ್ದಾರೆ. ಈ ರೀತಿ ಮಾಡುವುದು ಒಂದೇ, ಕೊಲೆ ಮಾಡುವುದು ಎರಡೂ ಒಂದೇ ಎಂದು ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.