
ವಿಧಾನಪರಿಷತ್(ಡಿ.05): ಚಳಿಗಾಲದ ಅಧಿವೇಶನದ ಮೊದಲ ದಿನದ ಕಾಲಪದ ಆರಂಭದಲ್ಲಿಯೇ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಕಲಾಪಕ್ಕೆ ನಿಗದಿತ ಸಚಿವರು ಗೈರಾಗಿದ್ದಕ್ಕೆ ಗರಂ ಆದ ಸಭಾಪತಿಗಳು, ಕಲಾಪಕ್ಕೆ ಹಾಜರಾಗುವುದಕ್ಕಿಂತ ಬೇರೆ ಯಾವ ಕೆಲಸವೂ ಮುಖ್ಯವಾಗುವುದಿಲ್ಲ ಎಂದು ಹೇಳಿದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಕಲಾಪದ ಮೊದಲ ದಿನ ವಿಧಾನಪರಿಷತ್ತಿನಲ್ಲಿ ನಿಗದಿತ ಸಚಿವರು ಗೈರಾಗಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರು, ಸಭಾನಾಯಕ ಎನ್.ಎಸ್. ಬೋಸರಾಜು ಅವರನ್ನು ತರಾಟೆಗೆ ತೆಗೆದುಕೊಂಡರು. ಪ್ರಶ್ನೋತ್ತರ ಕಲಾಪದ ಸಂದರ್ಭದಲ್ಲಿ ಸದಸ್ಯರೊಬ್ಬರು ಉನ್ನತ ಶಿಕ್ಷಣ ಸಚಿವರಿಗೆ ಕೇಳಿದ್ದ ಪ್ರಶ್ನೆಗೆ ಎನ್.ಎಸ್. ಬೋಸರಾಜು ಅವರು ಉತ್ತರಿಸಲು ಎದ್ದಾಗ, ಅದನ್ನು ತಡೆದ ಬಸವರಾಜ ಹೊರಟ್ಟಿ, ನಿಮ್ಮ ಸಚಿವರೆಲ್ಲ ಎಲ್ಲಿ ಹೋದರು? ನಿಗದಿಯಂತೆ ಯಾರ್ಯಾರು ಕಲಾಪಕ್ಕೆ ಹಾಜರಾಗಬೇಕೆಂದಿದೆ, ಅವರೆಲ್ಲ ಏಕೆ ಬಂದಿಲ್ಲ ಎಂದು ಪ್ರಶ್ನಿಸಿದರು.
ವಿಪಕ್ಷದ ಎಲ್ಲ ಪ್ರಶ್ನೆಗೆ ಕಾಂಗ್ರೆಸ್ ಸರ್ಕಾರ ಉತ್ತರಿಸಲಿದೆ: ಸಿಎಂ ಸಿದ್ದರಾಮಯ್ಯ
ಅದಕ್ಕೆ ಬೋಸರಾಜು ಅವರು, ನಿಗದಿತ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಶೀಘ್ರದಲ್ಲಿ ಬರುತ್ತಾರೆ ಎಂದು ಹೇಳಿದರು. ಅದರಿಂದ ಮತ್ತಷ್ಟು ಸಿಟ್ಟಾದ ಸಭಾಪತಿಗಳು, ಸಚಿವರಿಗೆ ಅಧಿವೇಶನಕ್ಕಿಂತ ಬೇರೆ ಯಾವುದೂ ಮುಖ್ಯವಾಗುವುದಿಲ್ಲ. ಮಂಗಳವಾರದಿಂದ ನಿಗದಿತ ಸಚಿವರು ಕಲಾಪಕ್ಕೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.