ಮೇಲ್ಮನೆಯಲ್ಲಿ ಕಾಗದರಹಿತ ಕಲಾಪಕ್ಕೆ ಕ್ರಮ: ಹೊರಟ್ಟಿ

Kannadaprabha News   | Asianet News
Published : Jun 23, 2021, 12:43 PM IST
ಮೇಲ್ಮನೆಯಲ್ಲಿ ಕಾಗದರಹಿತ ಕಲಾಪಕ್ಕೆ ಕ್ರಮ: ಹೊರಟ್ಟಿ

ಸಾರಾಂಶ

* ಕಲಾಪ, ಪ್ರಶ್ನೋತ್ತರ ಡಿಜಿಟಲೀಕರಣ * ಮೇಲ್ಮನೆ ಮಾದರಿ ಮಾಡಲು ಸಂಕಲ್ಪ * ಲೋಕಸಭೆ ಸ್ಪೀಕರ್‌ ಜತೆ ಸಂವಾದ  

ಬೆಂಗಳೂರು(ಜೂ.23): ವಿಧಾನ ಪರಿಷತ್ತನ್ನು ಮಾದರಿ ಮಾಡುವ ಸಂಕಲ್ಪ ತೊಡಲಾಗಿದೆ. ಸದನದ ಕಲಾಪ, ಪ್ರಶ್ನೋತ್ತರವನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಇ-ವಿಧಾನ ಕಾರ್ಯಕ್ರಮದಡಿ ಕಾಗದರಹಿತ ಕಲಾಪಕ್ಕೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಸಂಸದೀಯ ಕಾರ್ಯ ವಿಧಾನ ಕುರಿತು ಲೋಕಸಭಾಧ್ಯಕ್ಷರಾದ ಓಂ ಬಿರ್ಲಾರವರು ದೇಶದ ಎಲ್ಲಾ ರಾಜ್ಯಗಳ ವಿಧಾನ ಮಂಡಲಗಳ ಸಭಾಪತಿಗಳು ಹಾಗೂ ಸಭಾಧ್ಯಕ್ಷರೊಂದಿಗೆ ಮಂಗಳವಾರ ನಡೆಸಿದ ವರ್ಚುವಲ್‌ ಸಂವಾದದಲ್ಲಿ ಅವರು ಮಾತನಾಡಿದರು.

ಖಾಸಗಿ ಶಾಲಾ ಶಿಕ್ಷಕರಿಗೂ ಪ್ಯಾಕೇಜ್‌ ನೀಡಿ: ಸಿಎಂಗೆ ಹೊರಟ್ಟಿ ಪತ್ರ

114 ವರ್ಷಗಳ ಇತಿಹಾಸವಿರುವ ರಾಜ್ಯ ವಿಧಾನ ಪರಿಷತ್‌ನಲ್ಲಿ ಆಮೂಲಾಗ್ರ ಬದಲಾವಣೆಗೆ ಒತ್ತು ನೀಡಲಾಗಿದೆ. ಇ-ವಿಧಾನದಡಿ ಕಲಾಪ ಕಾರ್ಯವನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಬಜೆಟ್‌ ಅಧಿವೇಶನದಿಂದಲೇ ಪರಿಷತ್ತಿನ ಕಾರ್ಯಕಲಾಪಗಳನ್ನು ರಾಜ್ಯಸಭೆಯ ಮಾದರಿಯಲ್ಲಿ ಮಾಡಲಾಗುತ್ತಿದೆ. ನಿಗದಿತ ವೇಳೆ ಹಾಗೂ ಅವಧಿಯಲ್ಲಿಯೇ ಪ್ರಶ್ನೋತ್ತರ, ಶೂನ್ಯ ವೇಳೆ ಸೇರಿದಂತೆ ವಿವಿಧ ಕಾರ್ಯಕಲಾಪಗಳನ್ನು ನಡೆಸುವ ಮೂಲಕ ದೇಶದಲ್ಲಿಯೇ ಮಾದರಿಯಾಗಿದೆ ಎಂದರು. ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ತಾವು ಸದನದ ಕಲಾಪ ನಡೆಸಿದ ರೀತಿ ಹಾಗೂ ಅನುಭವಗಳನ್ನು ಹಂಚಿಕೊಂಡರು.

ಕೋವಿಡ್‌ ನಡುವೆ 31 ದಿನ ಕಲಾಪ:

ಕೋವಿಡ್‌ ನಡುವೆಯೂ ಕಳೆದ ವರ್ಷ 31 ದಿವಸ ವಿಧಾನಸಭೆ ಕಲಾಪವನ್ನು ನಡೆಸಲಾಗಿದೆ. ಬೇರೆ ಯಾವ ರಾಜ್ಯದಲ್ಲೂ ಇಷ್ಟುದಿವಸ ಕಲಾಪ ನಡೆಸಿಲ್ಲ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಲೋಕ ಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಮಾಹಿತಿ ನೀಡಿದರು. ಸಂವಿಧಾನದ ಬಗ್ಗೆ 8 ದಿವಸ ಕಲಾಪದಲ್ಲಿ ಚರ್ಚೆಯಾಗಿದ್ದು, ಸುಮಾರು 50 ಸದಸ್ಯರು ಭಾಗವಹಿಸಿದ್ದರು. ಹಲವು ಅಮೂಲ್ಯ ಸಲಹೆಗಳನ್ನು ಸದಸ್ಯರು ನೀಡಿದರು ಎಂದು ಕಾಗೇರಿ ವಿವರಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ
ವಾಕ್‌ ಸ್ವಾತಂತ್ರ್ಯ ಕಡಿವಾಣಕ್ಕೆ ದ್ವೇಷ ಭಾಷಣ ಮಸೂದೆ: ಆರ್.ಅಶೋಕ್ ಕಿಡಿ