ಆಪರೇಷನ್ ಆಡಿಯೋ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ..!

Published : Feb 12, 2019, 09:09 PM IST
ಆಪರೇಷನ್ ಆಡಿಯೋ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ..!

ಸಾರಾಂಶ

ಕಳೆದ ಮೂರು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಆಪರೇಷನ್ ಆಡಿಯೋ ಬಾಂಬ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ.

ಬೆಂಗಳೂರು, (ಫೆ.12): ರಾಜ್ಯದ ಅಭಿವೃದ್ಧಿಗೆ ಸಾಕ್ಷಿಯಾಗಬೇಕಿದ್ದ ವಿಧಾನಸಭೆ ಕಲಾಪ ಆಪರೇಷನ್ ಕಮಲ ಆಡಿಯೋಗೆ ಬಲಿಯಾಗಿದೆ.

ರಾಷ್ಟ್ರ ಮಟ್ಟದಲ್ಲಿ ಚರ್ಚೆ ಗ್ರಾಸವಾಗಿರುವ ಆಡಿಯೋ ಕ್ಲಿಪ್ ಪ್ರಕರಣ ಮೈತ್ರಿ ಸರ್ಕಾರ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಸದನದಲ್ಲಿ ವಾಗ್ವಾದಗಳು ನಡೆದಿದ್ದು, ಪ್ರಕರಣವನ್ನು SIT ತನಿಖೆಗೆ ನೀಡಲು ಸರ್ಕಾರ ನಿರ್ಧರಿಸಿದೆ.

ದೋಸ್ತಿಗಳ ಕೈಯಲ್ಲಿ ಎಸ್‌ಐಟಿ ದಾಳ, ಬಿಜೆಪಿ ತಳಮಳ!

ಆದ್ರೆ, ಇದಕ್ಕೆ ಒಪ್ಪದ ಬಿಜೆಪಿ ಯಾವುದೇ ಕಾರಣಕ್ಕೂ SITಗೆ ಕೊಡುವುದು ಬೇಡ. ನ್ಯಾಯಾಂಗ ತನಿಖೆಗೆ ನೀಡಿ ಎಂದು ಪಟ್ಟು ಹಿಡಿದಿದೆ. ಇದ್ರಿಂದ ಪರ ವಿರೋಧ ಮಾತುಗಳು ಕೇಳಿಬಂದಿವೆ.

ಈ ಸಂಬಂಧ ಸ್ಪೀಕರ್ ರಮೇಶ್ ಕುಮಾರ್ ಅವರು ನಾಳೆ [ಬುಧವಾರ] ಮೂರು ಪಕ್ಷಗಳ ಸದನ ನಾಯಕರ ಸಭೆ ಕರೆದಿದ್ದಾರೆ.  ಈ ಸಭೆ ಬಳಿಕ ಸಭಾಧ್ಯಕ್ಷರು ಮುಂದಿನ ನಡೆಯ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 

ಇವತ್ತು ನಡೆದ ಅಧಿವೇಶನ ಕಲಾಪದಲ್ಲಿ ಬಿಜೆಪಿಯ ನಾಯಕರು, ಸದನದಲ್ಲಿ ಚರ್ಚೆ ನಡೆಸುವ ಬದಲು ಸ್ಪೀಕರ್ ಕೊಠಡಿಗೆ ಕರೆದು ಮಾತುಕತೆ ನಡೆಸಬಹುದಿತ್ತು ಎಂಬ ಸಲಹೆಗಳನ್ನು ನೀಡಿದ್ದರು. 

ಕಲಾಪದ ಅಂತ್ಯದಲ್ಲಿ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಈ ಸಲಹೆಯನ್ನು ಸ್ವೀಕರಿಸಿದ್ದು, ಬುಧವಾರ ಬೆಳಗ್ಗೆ 10:30ಕ್ಕೆ, ಅಂದರೆ ಕಲಾಪ ಆರಂಭಕ್ಕೆ ಅರ್ಧ ಗಂಟೆ ಮುಂಚೆ ತಮ್ಮ ಕೊಠಡಿಯಲ್ಲಿ ಸಭೆ ನಡೆಸುತ್ತೇನೆಂದು ಹೇಳಿದರು. 

ಮೂರು ಪಕ್ಷಗಳಿಂದ ಯಾರ್ಯಾರು ಬರಬೇಕು ಎಂಬುದನ್ನು ತಾವೇ ತೀರ್ಮಾನಿಸಿಕೊಂಡು ಬನ್ನಿ ಎಂದೂ ತ್ರಿಪಕ್ಷಗಳಿಗೆ ಸೂಚಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!