
ಚಿಕ್ಕಮಗಳೂರು(ಜು.12): ಶೃಂಗೇರಿ ಶಾಸಕ ಟಿ. ಡಿ. ರಾಜೇಗೌಡ ಅವರು ಮಂಗಳೂರಿನ ಬಜ್ಪೆಯಿಂದ ಬೆಂಗಳೂರಿಗೆ ಹೊರಟಿದ್ದಾರೆ.10 ದಿನ ಪ್ರಕೃತಿ ಚಿಕಿತ್ಸೆ ಉಜಿರೆಯಲ್ಲಿ ದಾಖಲಾಗಿದ್ದು ಅವರು ಕಾಂಗ್ರೆಸ್ ಶಾಸಕಾಂಗ ಸಭೆಗೂ ಗೈರಾಗಿದ್ದರು.
ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟ ಶಾಸಕ ರಾಜೇಗೌಡ ಅವರು ಚಿಕಿತ್ಸೆ ಮುಗಿಯುವ ಮುನ್ನವೇ ಬೆಂಗಳೂರಿಗೆ ಹೊರಟಿದ್ದಾರೆ. ಅವರು 13 ರಂದು ಡಿಸ್ಚಾರ್ಜ್ ಅಗಬೇಕಿತ್ತು.
ಆಪರೇಷನ್ ಕಮಲ: ಸ್ಫೋಟಕ ಸುದ್ದಿ ಬಹಿರಂಗಪಡಿಸಿದ ಕಾಂಗ್ರೆಸ್ ಶಾಸಕ
ರಾಜ್ಯರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜೇಗೌಡ ಅವರು ಚಿಕಿತ್ಸೆ ಪೂರ್ತಿಗೊಳಿಸದೇ ಬೆಂಗಳೂರಿಗೆ ಹೊರಟಿದ್ದಾರಾ ಅನ್ನೋ ಸಂದೇಹವೂ ವ್ಯಕ್ತವಾಗಿದೆ. ಅಪರೇಷನ್ ಕಮಲದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರ ಹೆಸರೂ ಕೇಳಿ ಬಂದಿತ್ತು. ಮೈತ್ರಿ ಸರ್ಕಾರ ಮುಂದುವರೆದರೆ ಟಿ.ಡಿ.ರಾಜೇಗೌಡ ಅವರಿಗೆ ಬಂಪರ್ ಅಫರ್ ನೀಡುವ ಭರವಸೆ ಸಿಕ್ಕಿರುವ ಕುರಿತೂ ಮಾತು ಕೇಳಿ ಬಂದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.