ವಿಜಯೇಂದ್ರ ನೇತೃತ್ವದಲ್ಲಿ ಇಂದು ರಾಜ್ಯ ಬಿಜೆಪಿ ಮೊದಲ ಕಾರ್ಯಕಾರಿಣಿ

Published : Jan 27, 2024, 06:05 AM IST
 ವಿಜಯೇಂದ್ರ ನೇತೃತ್ವದಲ್ಲಿ ಇಂದು ರಾಜ್ಯ ಬಿಜೆಪಿ ಮೊದಲ ಕಾರ್ಯಕಾರಿಣಿ

ಸಾರಾಂಶ

ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ನಮ್ಮ ಮುಂದಿನ ಕಾರ್ಯ ಯೋಜನೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ: ಬಿ.ವೈ.ವಿಜಯೇಂದ್ರ 

ಬೆಂಗಳೂರು(ಜ.27): ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ರಾಜ್ಯ ಪದಾಧಿಕಾರಿಗಳ ತಂಡ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿಯ ಕಾರ್ಯ ಕಾರಿಣಿ ಸಭೆ ಶನಿವಾರ ನಡೆಯಲಿದೆ. ನಗರದ ಆರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ಶುಕ್ರವಾರ ಕಾರ್ಯಕಾರಿಣಿ ನಡೆಯುವಸಳದಲ್ಲಿನ ಸಿದ್ಧತೆಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ನಮ್ಮ ಮುಂದಿನ ಕಾರ್ಯ ಯೋಜನೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. 

ಶೆಟ್ಟರ್ ಸೇರ್ಪಡೆಯಿಂದ ಬಿಜೆಪಿಗೆ ಆನೆ ಬಲ: ವಿಜಯೇಂದ್ರ

ರಾಜ್ಯದಲ್ಲಿರುವ ಬಡವರು, ರೈತರು ಮತ್ತು ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕು. ಬಡವರ ವಿರೋಧಿ ಸರಕಾರದ ಬಗ್ಗೆ ಜನರಿಗೆ ಸತ್ಯಾಂಶಗಳನ್ನು ತಲುಪಿಸಬೇಕು ಎಂದು ಉದ್ದೇಶಿಸಿದ್ದೇವೆ ಎಂದರು. 

ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳಿಂದ ದೇಶಾದ್ಯಂತ ಜನತೆ ಮೋದಿ ಪರವಾಗಿದ್ದಾರೆ. ಕೇಂದ್ರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ಉದ್ದೇಶಿಸಲಾಗಿದೆ. ಮೋದಿ ಅವರ ಜನಪ್ರಿಯತೆಯನ್ನು ಮತವನ್ನಾಗಿ ಪರಿವರ್ತಿಸಿ ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿ ಹೆಬ್ಬಾಗಿಲು ಎಂಬುದನ್ನು ಸಾಬೀತು ಪಡಿಸುತ್ತೇವೆ. ಈ ನಿಟ್ಟಿನಲ್ಲಿ ಕಾಠ್ಯಕ್ರಮಗಳನ್ನು ರೂಪಿಸುತ್ತೇವೆ ಎಂದರು.
ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್‌ ಅವರುಕಾರ್ಯಕಾರಿಣಿ ಉದ್ಘಾಟಿಸುತ್ತಾರೆ. ಡಿ.ವಿ.ಸದಾನಂದಗೌಡ, ಬಸವರಾದ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಪಕ್ಷದ ಎಲ್ಲ ಹಿರಿಯ ನಾಯಕರು ವೇದಿಕೆ ಮೇಲಿರುತ್ತಾರೆ. ಅವರ ಮಾರ್ಗದರ್ಶನದಲ್ಲಿ ಪಕ್ಷ ಮುನ್ನಡೆಸುವ ಕುರಿತು ಚರ್ಚಿಸುತ್ತೇವೆ ಎಂದು ಹೇಳಿದರು.

ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಮಾತನಾಡಿ, ಕಾರ್ಯಕಾರಿಣಿಗಾಗಿ ರಾಜ್ಯ ಘಟಕವು 10 ದಿನಗಳಿಂದ ಪೂರ್ವಭಾವಿ ಸಭೆಗಳನ್ನು ನಡೆಸು ತ್ತಿದೆ. ಬೆಂಗಳೂರಿನ ಮೂರು ಸಂಘಟನಾತ್ಮಕ ಜಿಲ್ಲೆಗಳ ಪದಾಧಿಕಾರಿಗಳು, ಶಾಸಕರ ಮಾರ್ಗದರ್ಶನದಲ್ಲಿ ಸಭೆಯ ಯಶಸ್ಸಿಗೆ ಪೂರ್ವತಯಾರಿ ನಡೆದಿದೆ. 35ಕ್ಕೂ ಹೆಚ್ಚು ವೃತ್ತಗಳಲ್ಲಿ ಪ್ರಮುಖರಿಗೆ ಸ್ವಾಗತ ಕೋರುತ್ತಿ ದ್ದಾರೆ. ಅಪೇಕ್ಷಿತರಿಗೆ ವ್ಯವಸ್ಥಿತವಾಗಿ ವಾಹನ ವ್ಯವಸ್ಥೆ, ಕೊಠಡಿವ್ಯವಸ್ಥೆ ಸೇರಿಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಡೆಯಲಿದೆ.

ಕೇಂದ್ರದ ಜನಪರ ಯೋಜನೆಗಳ ಚರ್ಚೆ ನಡೆಯಲಿದೆ. ಅಯೋಧ್ಯೆಯ ಶ್ರೀರಾಮಚಂದ್ರನ ಕುರಿತ ಪ್ರದರ್ಶಿನಿವ್ಯವಸ್ಥೆಯನ್ನೂ ಮಾಡಲಾಗಿದೆ. ಡಿಜಿಟಲ್ ಎಂಟ್ರಿ ಮೂಲಕ ನೋಂದಣಿ ನಡೆಯಲಿದೆ. ಅಪೇಕ್ಷಿತರಿಗೆ ಹೊಸ ಅನುಭವ ಆಗುವ ಮಾದರಿಯಲ್ಲಿ ಅಚ್ಚುಕಟ್ಟಾಗಿ ಈ ಕಾರ್ಯಕಾರಿಣಿ ನಡೆಯಲಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ