ರಾಜ್ಯ ಸರ್ಕಾರದಿಂದ ಜನರಿಗೆ ತೃಪ್ತಿಪಡಿಸುವ ಕೆಲಸ: ಸಚಿವ ಚಲುವರಾಯಸ್ವಾಮಿ

Published : Feb 12, 2025, 10:43 PM IST
ರಾಜ್ಯ ಸರ್ಕಾರದಿಂದ ಜನರಿಗೆ ತೃಪ್ತಿಪಡಿಸುವ ಕೆಲಸ: ಸಚಿವ ಚಲುವರಾಯಸ್ವಾಮಿ

ಸಾರಾಂಶ

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದೆ. ಇದನ್ನು ಸಹಿಸದೆ ಜೆಡಿಎಸ್‌-ಬಿಜೆಪಿ ಪಕ್ಷಗಳ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಟಾಂಗ್‌ ನೀಡಿದರು.   

ಮಂಡ್ಯ (ಫೆ.12): ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದೆ. ಇದನ್ನು ಸಹಿಸದೆ ಜೆಡಿಎಸ್‌-ಬಿಜೆಪಿ ಪಕ್ಷಗಳ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಟಾಂಗ್‌ ನೀಡಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿ ಎಂಬ ವಿರೋಧ ಪಕ್ಷದ ಶಾಸಕರ ಹೇಳಿಕೆಗೆ ಕೆ.ಆರ್‌.ಪೇಟೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿ ಎಂದು ದೇವೇಗೌಡರು, ಕುಮಾರಸ್ವಾಮಿ ಅವರು ಜನರ ಮುಂದೆ ಬಂದು ಹೇಳಲಿ. ಹಿಂದೆ ಇದ್ದ ಸರ್ಕಾರದಲ್ಲಿ ಏನು ಮಾಡಿದ್ದಾರೆಂಬುದು ಜನರಿಗೆ ಗೊತ್ತಿದೆ. 

ಜನರ ಮುಂದೆ ಹೀಗೆ ಹೇಳಿ ಜನ ತೃಪ್ತಿಪಡಿಸಬಹುದು ತಿಳಿದಿದ್ದಾರೆ ಎಂದು ಕುಟುಕಿದರು. ರಾಜ್ಯ ಸರ್ಕಾರ ಅನುದಾನ ನೀಡುತ್ತಿಲ್ಲ ಎಂಬ ಶಾಸಕ ಎಚ್.ಟಿ ಮಂಜು ಆರೋಪಕ್ಕೆ ನಮ್ಮ ಜೊತೆ ಜೆಡಿಎಸ್ ಶಾಸಕ ಎಚ್.ಟಿ ಮಂಜು ಚೆನ್ನಾಗಿದ್ದಾರೆ. ಆ ಪಕ್ಷದಲ್ಲಿದ್ದುಕೊಂಡು ಹೇಳಿಕೆ ನೀಡುವುದು ಸಹಜ. ನಮ್ಮ ಸರ್ಕಾರ ಜಿಲ್ಲೆಯ ಜನರಿಗೆ ತೃಪ್ತಿಪಡಿಸುತ್ತಿದೆಯೇ ಹೊರತು ಶಾಸಕರನ್ನು ತೃಪ್ತಿಪಡಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರಕ್ಕೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎನ್ನುವ ಬೇದ ಭಾವವಿಲ್ಲ. ನಮಗೆ ಎಲ್ಲಾ ಶಾಸಕರು ಒಂದೇ. ಪಕ್ಷಾತೀತವಾಗಿ ಅಭಿವೃದ್ಧಿಗೆ ಸಹಕರಿಸುತ್ತಿದೆ ಎಂದರು.

ಅಂಕನಾಥೇಶ್ವರನಿಗೆ ವಾರ್ಷಿಕ ಪೂಜೆ: ಬೇವಿನಹಳ್ಳಿ ಅಂಕನಾಥೇಶ್ವರ ದೇಗುಲದಲ್ಲಿ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ, ಹೋಮ ಹವನಾದಿಗಳು ಶ್ರದ್ಧಾಭಕ್ತಿಯಿಂದ ಜರುಗಿತು. 7ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವ ಪ್ರಯುಕ್ತ ಹೇಮಾವತಿ ನದಿ ತಟದ ಅಂಕನಾಥೇಶ್ವರ, ಸುಬ್ರಹ್ಮಣ್ಯ, ಗಣಪತಿ, ನವಗ್ರಹ ದೇವರಿಗೆ ವಿಶೇಷ ಪೂಜೆಗಳು ನಡೆದವು. ಪೂಜಾ ವಿಧಿ ವಿಧಾನಗಳಲ್ಲಿ ಹೋಮ ಹವನಾದಿ, ಪಂಚಾಮೃತ ಅಭಿಷೇಕ, ಬಿಲ್ವಾರ್ಚನೆ, ರುದ್ರಾಭಿಷೇಕ ನೆರವೇರಿತು.

ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ಸರ್ಕಾರ ಅಧಿಕೃತ ಅನುಮೋದನೆ: ಸಚಿವ ಚಲುವರಾಯಸ್ವಾಮಿ

ಪುಣ್ಯಾಹ್ನ, ಕಳಶ ಸ್ಥಾಪನೆ, ಗಣೇಶ ಪೂಜೆ, ಪರಿವಾರ ದೇವತಾ ಪೂಜೆ, ಸಹಪರಿವಾರ ದೇವತಾ ಸಮೇತ ರುದ್ರ ಹೋಮ, ಮಹಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ಸೇವೆ ಜರುಗಿತು. ಭಕ್ತರು ಹೇಮಾವತಿ ನದಿಯಲ್ಲಿ ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದರು. ಹಣ್ಣು, ಕಾಯಿ ಅರ್ಪಿಸಿ ಪ್ರಸಾದ ಸ್ವೀಕಾರ ಮಾಡಿದರು. ದೇಗುಲದ ಉಸ್ತುವಾರಿ ಸಮಿತಿ ಎಂ.ಎಸ್. ಸುಬ್ಬಕೃಷ್ಣ, ಎಂ.ಎಸ್. ರವಿ, ಎಂ.ಎಸ್. ಚಂದ್ರು, ಎಂ.ಎಸ್. ಆನಂದ್, ಎಂ.ಎನ್. ನಂಜುಂಡಸ್ವಾಮಿ, ಅರ್ಚಕ ಶ್ರೀಕಾಂತ್, ಸಾವಿತ್ರಿ, ಭಾಗ್ಯಲಕ್ಷ್ಮೀ, ಸ್ವರ್ಣ, ಭಾರತಿ, ಲಕ್ಷ್ಮೀ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌