ಅಧಿವೇಶನ: ಕಡ್ಡಾಯ ಟೆಸ್ಟ್‌ನಲ್ಲಿ ಸಚಿವ ಸರೇಶ್‌ ಅಂಗಡಿಗೆ ಕೊರೋನಾ ದೃಢ

Published : Sep 11, 2020, 05:29 PM IST
ಅಧಿವೇಶನ:  ಕಡ್ಡಾಯ ಟೆಸ್ಟ್‌ನಲ್ಲಿ ಸಚಿವ ಸರೇಶ್‌ ಅಂಗಡಿಗೆ ಕೊರೋನಾ ದೃಢ

ಸಾರಾಂಶ

ಅಧಿವೇಶನ ಆರಂಭಕ್ಕೆ ಎರಡು ದಿನಗಳ ಮುನ್ನವೇ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರಿಗೆ ಕೊರೋನಾ ಸೋಂಕು ತಗುಲಿದೆ.

ಬೆಂಗಳೂರು, (ಸೆ.11): ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. 

ಸೆಪ್ಟೆಂಬರ್‌ 14ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು, ಹಾಜರಾಗುವ ಸಂಸದರಿಗೆ, ಸಚಿವರಿಗೆ ಕೊರೋನಾ ಟೆಸ್ಟ್ ಕಡ್ಡಾಯಗೊಳಿಸಿದ್ದ ಸ್ಪೀಕರ್ ಆದೇಶಿಸಿದ್ದರು.

ಅದರಂತೆ ಇಂದು ಪರೀಕ್ಷೆ ಮಾಡಿಕೊಂಡ ಸುರೇಶ್ ಅಂಗಡಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ದೆಹಲಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸಿಎಂ ರಾಜಕೀಯ ಕಾರ್ಯದರ್ಶಿಗೆ ಕೊರೋನಾ: ಬಿಎಸ್‌ವೈ ಸೇರಿದಂತೆ ಹಲವು ಸಚಿವರಿಗೆ ಆತಂಕ

ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್ ಅಂಗಡಿ, ನಾನು ಕೊವಿಡ್​-19 ತಪಾಸಣೆಗೆ ಒಳಗಾಗಿದ್ದೇನೆ. ನನಗೆ ರೋಗದ ಯಾವುದೇ ಲಕ್ಷಣಗಳೂ ಇಲ್ಲ. ಆದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಇತ್ತೀಚೆಗೆ ನನ್ನ ಸಂಪರ್ಕದಲ್ಲಿರುವವರು ಕೊವಿಡ್​ ಪರೀಕ್ಷೆ ಮಾಡಿಸಿಕೊಳ್ಳಿ. ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ. ಹಾಗೇ ಪ್ರಧಾನಮಂತ್ರಿ ಕಚೇರಿಯನ್ನೂ ಟ್ಯಾಗ್​ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ