
ಬೆಂಗಳೂರು(ಜ.28): ರಾಜ್ಯ ಬಿಜೆಪಿಯಲ್ಲಿ ಮೂಡಿರುವ ಆಂತರಿಕ ಭಿನ್ನಮತ ಮುಂದು ವರೆದಿದ್ದು, ಇದರ ಮಧ್ಯೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರ ಇದೀಗ ನಿಧಾನವಾಗಿ ಹಲವರು ದನಿ ಎತ್ತಲು ಪ್ರಾರಂಭಿಸಿದ್ದಾರೆ.
ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಅವರು ಸರಣಿ ಸಭೆ ನಡೆ ಸಿದ ಬಳಿಕವೂ ಪಕ್ಷದಲ್ಲಿನ ತಿಕ್ಕಾಟ ವೇನೂ ನಿಂತಿಲ್ಲ. ಆದರೆ, ಸಭೆ ಬಳಿಕ ಯಾವುದೇ ಬಣದೊಂದಿಗೆ ಗುರುತಿಸಿ ಕೊಳ್ಳದೆ ತಟಸ್ಥರಾಗಿದ್ದ ಕೆಲವರು ವಿಜಯೇಂದ್ರ ಪರವಾಗಿ ಬ್ಯಾಟಿಂಗ್ ಆರಂಭಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ನಾಯಕತ್ವ ನಾವು ಒಪ್ಪಲ್ಲ ಎಂದ ಯತ್ನಾಳ್, ಕೈಮುಗಿದ ವಿಜಯೇಂದ್ರ!
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡ ನಾಯಕರು ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ, ವಿಜಯೇಂದ್ರ ಪರವಾಗಿ ರೇಣುಕಾ ಚಾರ್ಯರಂತಹ ಮಾಜಿ ಸಚಿವರು, ಶಾಸಕರು ಮಾತ್ರ ಬ್ಯಾಟಿಂಗ್ಮಾ ಡುತ್ತಿದ್ದರು. ಇದೀಗ ಶಾಸಕರೂ ವಿಜಯೇಂದ್ರ ಪರ ದನಿ ಎತ್ತತೊಡಗಿದ್ದಾರೆ. ಇದರಿಂದ ವಿಜಯೇಂದ್ರ ಬಲ ಹೆಚ್ಚಾಗುವ ಸಾಧ್ಯತೆ ಕಂಡು ಬರುತ್ತಿದೆ.
ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂಬುದಾಗಿ ಉಮಾನಾಥ್ ಕೋಟ್ಯಾನ್ ಹೇಳಿದ್ದರೆ, ಎಸ್.ಆರ್.ವಿಶ್ವನಾಥ್ ಅವರು ಪಕ್ಷದಿಂದ ಹೋಗುವವರೆಲ್ಲ ಹೋಗಲಿ, ಪಕ್ಷದಲ್ಲಿ ಕಡ್ಡಿ ಆಡಿಸುತ್ತಿರುವವರ ವಿರುದ್ಧ ಬೆಂಗಳೂರು ಶಾಸಕರೆಲ್ಲ ತಿರುಗಿ ಬೀಳುವುದಾಗಿ ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಈ ಶಾಸಕರ ಹೇಳಿಕೆ ಯತ್ನಾಳ ಬಣಕ್ಕೆ ತಿರುಗೇಟು ನೀಡಿದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.