ಸಿ.ಟಿ. ರವಿ ಸಮ್ಮುಖದಲ್ಲಿಯೇ ಬಿಜೆಪಿ ಸೇರ್ಪಡೆಯಾದ ಮಾಜಿ ಸಂಸದ..!

Published : Nov 21, 2020, 06:10 PM IST
ಸಿ.ಟಿ. ರವಿ ಸಮ್ಮುಖದಲ್ಲಿಯೇ ಬಿಜೆಪಿ ಸೇರ್ಪಡೆಯಾದ ಮಾಜಿ ಸಂಸದ..!

ಸಾರಾಂಶ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸಮ್ಮುಖದಲ್ಲಿ ಮಾಜಿ ಸಂಸದರೊಬ್ಬರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಚೆನ್ನೈ, (ನ.21):  ಬಿಜೆಪಿ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿಯಾಗಿರುವ ಸಿಟಿ ರವಿ ಅವರಿಗೆ ತಮಿಳುನಾಡು ಉಸ್ತುವಾರಿ ವಹಿಸಲಾಗಿದೆ. ಇದರಿಂದ ಅಖಾಡಕ್ಕಿಳಿದ ಸಿ.ಟಿ,ರವಿ ತಮಿಳುನಾಡಿಲ್ಲೂ ಭರ್ಜರಿ ಆಪರೇಷನ್ ಕಮಲ ನಡೆಸಿದ್ದಾರೆ.

ಹೌದು...ಡಿಎಂಕೆ (ದ್ರಾವಿಡ ಮುನ್ನೇತ್ರಾ ಕಳಗಂ)ಪಕ್ಷದಿಂದ ಅಮಾನತುಗೊಂಡಿದ್ದ ಕೆಪಿ ರಾಮಲಿಂಗಂ ಶನಿವಾರ ತಮಿಳುನಾಡು ಬಿಜೆಪಿ ಉಸ್ತುವಾರಿ ಸಿಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ಎಲ್.ಮುರುಗನ್ ಅವರ ಸಮ್ಮುಖದಲ್ಲಿ ಕೆಪಿ ರಾಮಲಿಂಗಂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಸಿಟಿ ರವಿಗೆ 3 ರಾಜ್ಯಗಳ ಉಸ್ತುವಾರಿ; ಇಕ್ಕಟ್ಟಿಗೆ ಸಿಲುಕಿಸಿದೆ ಹೊಸ ಜವಾಬ್ದಾರಿ

ಕೋವಿಡ್ 19 ಸೋಂಕಿನ ವಿಚಾರದಲ್ಲಿ ಎಂಕೆ ಸ್ಟಾಲಿನ್ ಅವರ ಪ್ರಸ್ತಾಪದ ವಿರುದ್ಧ ಮಾತನಾಡಿದ ಕೆಪಿ ರಾಮಲಿಂಗಂ ಅವರನ್ನು ಡಿಎಂಕೆ ನಾಯಕ ಎಂಕೆ ಸ್ಟಾಲಿನ್, ಶಿಸ್ತುಕ್ರಮದ ಹಿನ್ನೆಲೆಯಲ್ಲಿ ರಾಮಲಿಂಗಂ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದರು.

ಡಿಎಂಕೆ ವಿರುದ್ಧ ಮುನಿಸಿಕೊಂಡಿರುವ ರಾಮಲಿಂಗಂ ಬಿಜೆಪಿ ಸೇರ್ಪಡೆ ನಂತರ ಮಾತನಾಡಿದ ಅವರು, ಎಂಕೆ ಸ್ಟಾಲಿನ್ ಸಹೋದರ ಎಂಕೆ ಅಳಗಿರಿಯನ್ನು ಕೂಡಾ ಬಿಜೆಪಿಗೆ ಕರೆತರಲು ಪ್ರಯತ್ನಿಸುವುದಾಗಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ