ಬಿಜೆಪಿ ಸೇರಲು ಮುಂದಾದ ಶಾಸಕ: ವಿಜಯೇಂದ್ರ ಜತೆ ಮೊದಲ ಸುತ್ತಿನ ಮಾತುಕತೆ ಮುಕ್ತಾಯ..!

Published : Dec 02, 2020, 08:16 PM ISTUpdated : Dec 02, 2020, 08:28 PM IST
ಬಿಜೆಪಿ ಸೇರಲು ಮುಂದಾದ ಶಾಸಕ: ವಿಜಯೇಂದ್ರ ಜತೆ ಮೊದಲ ಸುತ್ತಿನ ಮಾತುಕತೆ ಮುಕ್ತಾಯ..!

ಸಾರಾಂಶ

 ಗ್ರಾಮ.ಪಂಚಾಯಿತಿ.ಚುನಾವಣೆ ಘೋಷಣೆ ಬೆನ್ನಲ್ಲೇ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ರಾಜಕೀಯ ಅಖಾಡ ರಂಗೇರಿದ್ದು, ಶಾಸಕರೊಬ್ಬರು ಕಮಲ ಮುಡಿಯಲು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.

ಚಾಮರಾಜನಗರ, (ಡಿ.02): ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ವಿಶ್ವಾಸ ಮತದ ದಿನ ಗೈರಾಗುವ ಮೂಲಕ ಪರೋಕ್ಷವಾಗಿ ಬಿಜೆಪಿ ಬೆಂಬಲಿಸಿದ್ದ ಶಾಸಕ ಎನ್.ಮಹೇಶ್, ಬಿಎಸ್‍ಪಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದರು. 

ಇದೀಗ ಗ್ರಾ.ಪಂ.ಚುನಾವಣೆ ಹಿನ್ನಲೆ ತಮ್ಮ ಬೆಂಬಲಿಗರು, ಕಾರ್ಯಕರ್ತರಿಗೆ ಅಧಿಕಾರ ಒದಗಿಸಿಕೊಡಬೇಕಾಗಿರುವ ನಿಟ್ಟಿನಲ್ಲಿ ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಆನೆ ಇಳಿದು ಬಿಜೆಪಿ ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ. 

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ: ಬಿಜೆಪಿ ಸೇರುವುದಾಗಿ ಘೋಷಿಸಿದ ಕೈ ನಾಯಕ

ಈ ಕುರಿತು ಸಚಿವರಾದ ಆರ್.ಅಶೋಕ್,ಸೋಮಶೇಖರ್, ಗೋಪಾಲಯ್ಯ, ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜೆಯೇಂದ್ರ, ರವಿಕುಮಾರ್ ಜೊತೆಗೆ ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆ ಎಂಬ ತಿಳಿದುಬಂದಿದೆ.

ಇನ್ನು ಅಂತಿಮವಾಗಿ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ಮಾಡಲಿದ್ದು, ಎಲ್ಲವೂ ಅಂದುಕೊಂಡತೆ ಆದರೆ ಸಂಕ್ರಾತಿ ಹಬ್ಬದ ನಂತರ ಎನ್.ಮಹೇಶ್ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್