West Bengal ಗುರು ಔಟ್​, ಶಿಷ್ಯ ಇನ್​: ಸಿಎಂ ಸ್ಥಾನ ಏರಿದ ದೀದಿ ಮಾಜಿ ಬಲಗೈ ಬಂಟ: ಗಮನ ಸೆಳೆದ 98ರ ವೃದ್ಧ

Published : May 09, 2026, 01:33 PM IST
Suvendu Adhikari sworn in programme

ಸಾರಾಂಶ

ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಮಮತಾ ಬ್ಯಾನರ್ಜಿ ಆಡಳಿತ ಅಂತ್ಯಗೊಂಡಿದ್ದು, ಬಿಜೆಪಿ 207 ಸ್ಥಾನಗಳೊಂದಿಗೆ ಅಧಿಕಾರಕ್ಕೇರಿದೆ. ಒಂದು ಕಾಲದಲ್ಲಿ ದೀದಿಯ ಬಲಗೈ ಬಂಟನಾಗಿದ್ದ ಸುವೇಂದು ಅಧಿಕಾರಿ, ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

15 ವರ್ಷಗಳ ಮಮತಾ ಬ್ಯಾನರ್ಜಿ ಹಿಡಿತದಿಂದ ಪಶ್ಚಿಮ ಬಂಗಾಳ ಮುಕ್ತವಾಗಿದೆ. 207 ಸೀಟ್‌ಗಳನ್ನು ಗೆಲ್ಲುವ ಮೂಲಕ ಬಿಜೆಪಿಯ ಗೆಲುವಿನೊಂದಿಗೆ ಕಾಂಗ್ರೆಸ್​​ ಕಾರ್ಯಕರ್ತರೂ ಸೇರಿ, ಹಿಂದೂಗಳೆಲ್ಲರೂ ಭಾರಿ ವಿಜಯೋತ್ಸವ ಆಚರಿಸಿದ್ದಾರೆ. ತಮ್ಮ ಸ್ಥಾನವನ್ನೂ ಉಳಿಸಿಕೊಳ್ಳಲಾಗದ ಮಮತಾಗೆ ಭಾರಿ ಮುಖಭಂಗವಾಗಿದೆ. ಇದರ ನಡುವೆಯೇ, ಈ ಹತಾಶೆ ಎಷ್ಟರಮಟ್ಟಿಗೆ ಹೋಗಿದೆ ಎಂದರೆ ದೀದಿ ವಿರುದ್ಧ ಗೆದ್ದ ಈಗ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಸುವೇಂದು ಅಧಿಕಾರಿ ಅವರ ಪಿಎಯನ್ನೇ ಹ*ತ್ಯೆ ಮಾಡಲಾಗಿದೆ. ಇವೆಲ್ಲವುಗಳ ನಡುವೆಯೇ ಸುವೇಂದು ಅಧಿಕಾರಿ ಇಂದು ಅಧಿಕಾರದ ಗದ್ದುಗೆ ಏರಿದ್ದಾರೆ. ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಒಂದು ಕಾಲದಲ್ಲಿ ದೀದಿ ಬಲಗೈ ಬಂಟ ಎಂದೇ ಫೇಮಸ್ ಆಗಿದ್ದ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಚುಕ್ಕಾಣಿ ಹಿಡಿಯುವ ಮೂಲಕ ಗುರುವಾಗಿದ್ದ ಮಮತಾ ಔಟ್‌ ಆಗಿದ್ದ, ಶಿಷ್ಯ ಇನ್‌ ಆಗಿದ್ದಾರೆ. ಹಿಂದೊಮ್ಮೆ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಗದ್ದುಗೆ ಏರಲು ಕಾರಣರಾಗಿದ್ದ ಸುವೇಂದು ಅವರು, ಇಂದು ಆ ಗದ್ದುಗೆ ಏರಿದ್ದಾರೆ. 2020ರ ಸುಮಾರಿಗೆ, ಪಕ್ಷದಲ್ಲಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ಪ್ರಭಾವ ಹೆಚ್ಚಾಗಿದ್ದರಿಂದ ಸುವೇಂದು ಅಧಿಕಾರಿ ಅಸಮಾಧಾನಗೊಂಡಿದ್ದರು. ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯ ಮತ್ತು ಪಕ್ಷದಲ್ಲಿ ತಮ್ಮ ಸ್ಥಾನಮಾನ ಕಡಿಮೆಯಾಗುತ್ತಿದೆ ಎಂಬ ಭಾವನೆಯಿಂದಾಗಿ, ಅವರು 2020ರ ಡಿಸೆಂಬರ್‌ನಲ್ಲಿ ಟಿಎಂಸಿ ತೊರೆದು ಬಿಜೆಪಿಗೆ ಸೇರಿದರು. ಬಿಜೆಪಿ ಸೇರಿದ ನಂತರ, ಅವರು 2021ರ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಿಂದ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ, ಬಿಜೆಪಿಯ ಬಲಿಷ್ಠ ನಾಯಕರಾಗಿ ಹೊರಹೊಮ್ಮಿದರು.

ಪ್ರಮಾಣ ವಚನ ಸ್ವೀಕಾರ

ಇಂದು ನಡೆದ ಕಾರ್ಯಕ್ರಮದಲ್ಲಿ, ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುವೇಂದು ಅಧಿಕಾರಿ ಅವರಿಗೆ ರಾಜ್ಯಪಾಲ ಆರ್.ಎನ್. ರವಿ ಪ್ರಮಾಣ ವಚನ ಬೋಧಿಸಿದರು, ಜೊತೆಗೆ ಸಚಿವ ಸಂಪುಟಕ್ಕೆ ಸೇರಿದ ಐದು ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್, ಅಶೋಕ್ ಕೀರ್ತಾನಿಯಾ, ಕ್ಷುದಿರಾಮ್ ತುಡು ಮತ್ತು ನಿಸಿತ್ ಪ್ರಾಮಾಣಿಕ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ಸಚಿವರು ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ NDA ಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.

98 ವರ್ಷದ ವೃದ್ಧ

ಇಂದು ನಡೆದ ಕಾರ್ಯಕ್ರಮದಲ್ಲಿ ಗಮನ ಸೆಳೆದದ್ದು 98 ವರ್ಷದ ವೃದ್ಧ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಧಾನಿ ಮೋದಿ ಅವರು ಇವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದದ್ದು ಭಾರಿ ಸುದ್ದಿಯಾಗುತ್ತಿದೆ. ಅಷ್ಟಕ್ಕೂ ಇವರು ಮಖನ್ಲಾಲ್ ಸರ್ಕಾರ್. ಮಖನ್‌ಲಾಲ್ ಸರ್ಕಾರ್ ಅವರು ಪಶ್ಚಿಮ ಬಂಗಾಳದ ಬಿಜೆಪಿ ಪಕ್ಷದ 97-98 ವರ್ಷದ ಅತ್ಯಂತ ಹಿರಿಯ ಮತ್ತು ನಿಷ್ಠಾವಂತ ಕಾರ್ಯಕರ್ತರು. ಮಖನ್ಲಾಲ್ ಸರ್ಕಾರ್ ಅವರು ಸ್ವಾತಂತ್ರ್ಯಾನಂತರದ ಭಾರತದಲ್ಲಿ ರಾಷ್ಟ್ರೀಯತಾವಾದಿ ಚಳವಳಿಗೆ ಸಂಬಂಧಿಸಿದ ಆರಂಭಿಕ ತಳಮಟ್ಟದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಜನಸಂಘದ ಕಾಲದಿಂದಲೂ ಬಿಜೆಪಿಗಾಗಿ ಕೆಲಸ ಮಾಡುತ್ತಿರುವ ಇವರು, ಬಂಗಾಳದಲ್ಲಿ ಬಿಜೆಪಿ ನೆಲೆ ಕಂಡುಕೊಳ್ಳಲು ದಶಕಗಳ ಕಾಲ ಶ್ರಮಿಸಿದವರು.ಇವರನ್ನು ಪಕ್ಷದ 'ಹಳೆ ಸಿಂಹ' ಎಂದು ಕರೆಯಲಾಗುತ್ತದೆ.

ಎಕ್ಸ್ ಖಾತೆಯಲ್ಲಿ ಅನ್​ಫಾಲೋ?

ಕೋಲ್ಕತ್ತಾ ಪೊಲೀಸರ ಅಧಿಕೃತ ‘ಎಕ್ಸ್’ ಖಾತೆಯಲ್ಲೊಂದು ಬದಲಾವಣೆ ನಡೆದಿದೆ. ಈ ಡಿಜಿಟಲ್ ಬದಲಾವಣೆಯನ್ನು ಹಲವರು ರಾಜಕೀಯ ಸಂದೇಶವೆಂದು ನೋಡುತ್ತಿದ್ದಾರೆ. ಮೊದಲು ಈ ಖಾತೆಯು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಕೆಲ ಪ್ರಮುಖ ಟಿಎಂಸಿ ನಾಯಕರನ್ನು ಫಾಲೋ ಮಾಡುತ್ತಿತ್ತು. ಈಗ ಆ ಖಾತೆಯಿಂದ ಅವರುಗಳನ್ನು ಅನ್‌ಫಾಲೋ ಮಾಡಲಾಗಿದೆ ಎಂದು ವರದಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

IPL Final match shift row: ಶಾಸಕರಿಗೆ ಕೊಡೋದೇ 2 ಫ್ರೀ ಟಿಕೆಟ್‌ ಅಷ್ಟೇ : ಲಾಭಕ್ಕಾಗಿ ಐಪಿಎಲ್ ಫೈನಲ್ ಶಿಫ್ಟ್: ಪರಂ
ಪುದುಚೇರಿ ಪ್ರವಾಸ ಹೊರಟ ಡಿಸಿಎಂ ಶನೇಶ್ವರನ ದರ್ಶನ, ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ, ಏನಂದ್ರು ಡಿಕೆಶಿ?