ಅಂತಿಮವಾಗಿ ಜೆಡಿಎಸ್‌ ಅಭ್ಯರ್ಥಿ ಫೈನಲ್, ದೊಡ್ಡಣ್ಣ ಅಳಿಯಗೆ ತಪ್ಪಿದ ಟಿಕೆಟ್

Published : May 24, 2022, 11:53 AM ISTUpdated : May 24, 2022, 12:04 PM IST
ಅಂತಿಮವಾಗಿ ಜೆಡಿಎಸ್‌ ಅಭ್ಯರ್ಥಿ ಫೈನಲ್, ದೊಡ್ಡಣ್ಣ ಅಳಿಯಗೆ ತಪ್ಪಿದ ಟಿಕೆಟ್

ಸಾರಾಂಶ

* ಕರ್ನಾಟಕ ವಿಧಾಣಪರಿಷತ್ ಚುನಾವಣೆ * ಅಂತಿಮವಾಗಿ ಜೆಡಿಎಸ್‌ ಅಭ್ಯರ್ಥಿಫೈನಲ್,  * ದೊಡ್ಡಣ್ಣನ ಅಳಿಯಗೆ ತಪ್ಪಿದೆ ಟಿಕೆಟ್

ಬೆಂಗಳೂರು, (ಮೇ.24): ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ ಜೆಡಿಎಸ್‌ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದು, ನಟ ದೊಡ್ಡಣ್ಣ ಅಳಿಯ ವೀರೇಂದ್ರಗೆ ಟಿಕೆಟ್ ತಪ್ಪಿದೆ. 

ಅಧಿಕೃತವಾಗಿ ಟಿ.ಎ. ಶರವಣ ಅವರಿಗೆ ಲಕ್‌ ಖುಲಾಯಿಸಿದೆ. ಇದರೊಂದಿಗೆ ಶರವಣ ಅವರು ಎರಡನೇ ಬಾರಿಗೆ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದಾರೆ. ವೀರೇಂದ್ರ ಹಾಗೂ ಶರವಣ ನಡುವೆ ಟಿಕೆಟ್‌ಗಾಗಿ ಪ್ರಬಲ ಪೈಪೋಟಿ ನಡೆದಿತ್ತು.

ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ, ಪಟ್ಟಿಯಲ್ಲಿ ಮತ್ತಷ್ಟು ಅಚ್ಚರಿ

ಈಗಾಗಲೇ ಶರವಣ ಅವರು ಒಂದು ಬಾರಿ ಪರಿಷತ್‌ಗೆ ಆಯ್ಕೆಯಾಗಿದ್ದರಿಂದ ಈ ಬಾರಿ ದೊಡ್ಡಣ್ಣ ಅಳಿಯ ವೀರೇಂದ್ರ ಅವರಿಗೆ ಜೆಡಿಎಸ್‌ ಪರಿಷತ್‌ ಟಿಕೆಟ್‌ ಸಿಗುವುದು ಪಕ್ಕಾ ಎನ್ನಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ವೀರೇಂದ್ರ ಅವರಿಗೆ ಟಿಕೆಟ್ ಕೈತಪ್ಪಿದ್ದು, ಶರವಣ ಅವರಿಗೆ ಅದೃಷ್ಟ ಖುಲಾಯಿಸಿದೆ.

ಒಂದು ಸ್ಥಾನಕ್ಕೆ ಸಿಎಂ ಇಬ್ರಾಹಿಂ, ಆರ್ ಪ್ರಕಾಶ್, ಶರವಣ ಹಾಗೂ ವೀರೇಂದ್ರ ಅವರ ನಡುವೆ ಟಿಕೆಟ್‌ಗಾಗಿ ಪೈಪೋಟಿ ನಡೆದಿತ್ತು. ಕೊನೆಗೆ ಶರವಣ ಹಾಗೂ ವೀರೇಂದ್ರ ನಡುವೆ ಟಿಕೆಟ್ ಫೈಟ್ ಇತ್ತು. ಇದರಿಂದ ಕಡೇ ಕ್ಷಣದವರೆಗೂ ಕುತೂಹಲವಿತ್ತು. ಅಂತಿಮವಾಗಿ ಶರವಣ ಅವರಿಗೆ ಜೆಡಿಎಸ್‌ ಮಣೆ ಹಾಕಿದೆ.

ಜೆಡಿಎಸ್‌ನ ಯಾವುದೇ ಕಾರ್ಯಚಟುವಟಿಕೆಗಳು ನಡೆದರೂ ಸಹ ಶರವಣ ಅವರು ಮೊದಲಿಗರಾಗಿ ಭಾಗವಹಿಸುತ್ತಾರೆ.ಈ ಎಲ್ಲಾ ಅಂಶಗಳನ್ನ ಗಮನದಲ್ಲಿಟ್ಟುಕೊಂಡು ಶರವಣ ಅವರನ್ನ ಅಂತಿಮಗೊಳಿಸಲಾಗಿದೆ.  

ಬಿಜೆಪಿಯಲ್ಲೂ ಅಚ್ಚರಿ ಆಯ್ಕೆ
ಬಿಜೆಪಿ ಕೊನೇ ಕ್ಷಣದಲ್ಲಿ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಊಹಿಸದ ಹೆಸರು ಪಟ್ಟಿಯಲ್ಲಿರುವುದು ಬಿಜೆಪಿ ನಾಯಕರ ಅಚ್ಚರಿಗೆ ಕಾರಣವಾಗಿದೆ. ಅಚ್ಚರಿ ಅಂದ್ರೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಮೂಲತಃ ಕೊಪ್ಪಳ ಜಿಲ್ಲೆಯವರಾದ ಹೇಮಲತಾ ನಾಯಕ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ಲಕ್ಷ್ಮಣ ಸವದಿ,  ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕೇಶವ ಪ್ರಸಾದ್ ಹಾಗೂ ಚಲುವಾದಿ ನಾರಾಯಣಸ್ವಾಮಿ ಅವರಿಗೆ ಮಣೆ ಹಾಕಲಾಗಿದೆ.

ಕಾಂಗ್ರೆಸ್‌ನಿಂದಲೂ ಅಚ್ಚರಿ ಅಭ್ಯರ್ಥಿ ಕಣಕ್ಕೆ
ವಿಧಾನಪರಿಷತ್ ಚುನಾವಣೆ ಕಣ ರಂಗೇರಿದೆ. ಇದರ ನಡುವೆ ಕಾಂಗ್ರೆಸ್ ಎರಡು ಸ್ಥಾನಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಎಂ ನಾಗರಾಜು ಯಾದವ್ ಹಾಗೂ ಕೆ ಅಬ್ದುಲ್ ಜಬ್ಬಾರ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿ ಪ್ರಕಟಿಸಿದೆ.

ಭಾರಿ ಕುತೂಹಲ ಮೂಡಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಗೊಂದಲಗಳಿಗೂ ಕಾರಣವಾಗಿತ್ತು. ಸಿದ್ದರಾಮಯ್ಯ ಬಣ ಹಾಗೂ ಡಿಕೆ ಶಿವಕುಮಾರ್ ಬಣದ ನಡುವೆ ಅಭ್ಯರ್ಥಿಗಳ ಆಯ್ಕೆಗೆ ಜಿದ್ದಾಜಿದ್ದಿ ನಡೆದಿತ್ತು ಅನ್ನೋ ವರದಿಗಳು ಹರಿದಾಡಿತ್ತು. ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಸುದೀರ್ಘ ಚರ್ಚೆ ನಡೆಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ