ಖರ್ಗೆ, ರಾಜ್ಯಸಭಾಧ್ಯಕ್ಷರ ನಡುವೆ ನೇರ ಜಟಾಪಟಿ..!

Published : Jul 03, 2024, 04:26 AM ISTUpdated : Jul 03, 2024, 08:33 AM IST
ಖರ್ಗೆ, ರಾಜ್ಯಸಭಾಧ್ಯಕ್ಷರ ನಡುವೆ ನೇರ ಜಟಾಪಟಿ..!

ಸಾರಾಂಶ

ವರ್ಣ ವ್ಯವಸ್ಥೆ ತರಬೇಡಿ. ಅದಕ್ಕಾಗಿಯೇ ಜೈರಾಂ ರಮೇಶ್‌ ಅವರನ್ನು ತುಂಬಾ ಬುದ್ಧಿವಂತ. ನಾನು ದಡ್ಡ ಎನ್ನುತ್ತಿದ್ದೀರಿ’ ಎಂದರು. ಇದಕ್ಕೆ ಆಕ್ರೋಶಗೊಂಡ ಧನಕರ್,‘ ಖರ್ಗೆ ನನ್ನ ಹೇಳಿಕೆಯನ್ನು ತಿರುಚಿದ್ದಾರೆ. ಸಂಸತ್‌ನಲ್ಲಿ ಎಂದೂ ಇಲ್ಲಿಯವರೆಗೆ ಸಭಾಪತಿ ಪೀಠ ಇಷ್ಟು ಅವಮಾನಕ್ಕೆ ಗುರಿ ಆಗಿಲ್ಲ ಎಂದ ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ 

ನವದೆಹಲಿ(ಜು.03):  ರಾಜ್ಯಸಭೆ ಮಂಗಳವಾರ ಸಭಾಪತಿ ಜಗದೀಪ್‌ ಧನಕರ್‌ ಮತ್ತು ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾಯಿತು. ‘ಕಾಂಗ್ರೆಸ್‌ ಸಂಸದರು ಶಿಸ್ತಿನಿಂದ ವರ್ತಿಸುವಂತಾಗಲು ಜೈರಾಂ ರಮೇಶ್‌ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಜಾಗವನ್ನು ತುಂಬಬೇಕು’ ಎಂದು ಧನಕರ್ ವ್ಯಂಗ್ಯವಾಡಿದ್ದು ಇಬ್ಬರ ಜಟಾಪಟಿಗೆ ಕಾರಣವಾಯಿತು.

ರಾಷ್ಟ್ರಪತಿ ಭಾಷಣದ ಬಗ್ಗೆ ಕಾಂಗ್ರೆಸ್‌ನ ಪ್ರಮೋದ್‌ ತಿವಾರಿ ಮಾತನಾಡುವಾಗ, ‘ಖಚಿತಪಡದ ವಿಷಯಗಳ ಬಗ್ಗೆ ಪ್ರಸ್ತಾಪಿಸಬೇಡಿ’ ಎಂದು ಧನಕರ್‌ ಹೇಳಿದರು. ಆಗ ಜೈರಾಂ ರಮೇಶ್‌ ಅವರು ‘ಪರೀಶಿಲಿಸಲಾಗುವುದು’ ಎಂದರು. ಆಗ ಧನಕರ್‌ ಅವರು, ‘ನೀವು ಜಾಣ, ಪ್ರತಿಭಾವಂತ ಹಾಗೂ ದೈವದತ್ತ ವ್ಯಕ್ತಿ. ಖರ್ಗೆ ಅವರ ಜಾಗವನ್ನು ತಕ್ಷಣವೇ ನೀವು ತುಂಬಬೇಕು. ಏಕೆಂದರೆ ಅವರು ಮಾಡುವ ಕೆಲಸ ನೀವು ಮಾಡತ್ತಿದ್ದೀರಿ’ ಎಂದರು.

ಅಂದೊಂದಿತ್ತು ಕಾಲ ಭ್ರಷ್ಟಾಚಾರದ ಮೇಳ, ಗದ್ದಲದ ನಡುವೆ ಲೋಕಸಭೆಯಲ್ಲಿ ವಿಪಕ್ಷಕ್ಕೆ ಮೋದಿ ಗುದ್ದು!

ಇದಕ್ಕೆ ಸಿಟ್ಟಿಗೆದ್ದ ಖರ್ಗೆ,‘ವರ್ಣ ವ್ಯವಸ್ಥೆ ತರಬೇಡಿ. ಅದಕ್ಕಾಗಿಯೇ ಜೈರಾಂ ರಮೇಶ್‌ ಅವರನ್ನು ತುಂಬಾ ಬುದ್ಧಿವಂತ. ನಾನು ದಡ್ಡ ಎನ್ನುತ್ತಿದ್ದೀರಿ’ ಎಂದರು. ಇದಕ್ಕೆ ಆಕ್ರೋಶಗೊಂಡ ಧನಕರ್,‘ ಖರ್ಗೆ ನನ್ನ ಹೇಳಿಕೆಯನ್ನು ತಿರುಚಿದ್ದಾರೆ. ಸಂಸತ್‌ನಲ್ಲಿ ಎಂದೂ ಇಲ್ಲಿಯವರೆಗೆ ಸಭಾಪತಿ ಪೀಠ ಇಷ್ಟು ಅವಮಾನಕ್ಕೆ ಗುರಿ ಆಗಿಲ್ಲ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌