ಶೋಭಾ- ಸೋಮಶೇಖ‌ರ್ ಮಧ್ಯೆ ತಾಕತ್ತಿನ ವಾಕ್ಸಮರ!

Published : Nov 10, 2024, 09:00 AM IST
ಶೋಭಾ- ಸೋಮಶೇಖ‌ರ್ ಮಧ್ಯೆ ತಾಕತ್ತಿನ ವಾಕ್ಸಮರ!

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಲ್ಲಿ ಹೇಗೂ ಗೆದ್ದಿದ್ದಳಲ್ಲ, ಯಶವಂತಪುರದಲ್ಲಿಯೂ ಸ್ಪರ್ಧಿಸಲಿ. ಅವಳದ್ದು ಪಾಪದ ಕೊಡ ಇನ್ನೂ ತುಂಬಬೇಕಾಗಿದೆ. ನಾನೂ ತಾಳ್ಮೆಯಿಂದ ಕಾಯುತ್ತಿದ್ದೇನೆ. ಆಮೇಲೆ ನಾನು ಮಾತಾಡುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಶಾಸಕ ಎಸ್. ಟಿ. ಸೋಮಶೇಖ‌ರ್ 

ಬೆಂಗಳೂರು(ನ.10): 'ನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಎನ್ನುವುದಾದರೆ ಕ್ಷೇತ್ರಕ್ಕೆ ಬರಲಿ. ಅವಳು ಸಂಸದೆ ಸ್ಥಾನಕ್ಕೆ ರಾಜೀನಾಮೆ ನೀಡಲಿ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ತಾಕತ್ ಇದ್ದರೆ ಯಶವಂತಪುರ ಕ್ಷೇತ್ರದಲ್ಲಿ ನಿಲ್ಲಲಿ.' ಇದು ತಮ್ಮ ಪಕ್ಷದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಏಕವಚನದಲ್ಲಿ ಶಾಸಕ ಎಸ್. ಟಿ. ಸೋಮಶೇಖ‌ರ್ ವಾಗ್ದಾಳಿ ನಡೆಸಿ ಪರಿ. 

ಸೋಮಶೇಖರ್‌ಗೆ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‌ನಿಂದ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ ಶೋಭಾ ಕರಂದ್ಲಾಜೆಗೆ ಶನಿವಾರ ಸುದ್ದಿಗಾರರ ಜತೆ ಮಾತನಾಡಿ ಸೋಮಶೇಖರ್ ಪ್ರತಿ ಸವಾಲು ಹಾಕಿದರು. 
'ಲೋಕಸಭೆ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಲ್ಲಿ ಹೇಗೂ ಗೆದ್ದಿದ್ದಳಲ್ಲ, ಯಶವಂತಪುರದಲ್ಲಿಯೂ ಸ್ಪರ್ಧಿಸಲಿ. ಅವಳದ್ದು ಪಾಪದ ಕೊಡ ಇನ್ನೂ ತುಂಬಬೇಕಾಗಿದೆ. ನಾನೂ ತಾಳ್ಮೆಯಿಂದ ಕಾಯುತ್ತಿದ್ದೇನೆ. ಆಮೇಲೆ ನಾನು ಮಾತಾಡುತ್ತೇನೆ' ಎಂದು ಟೀಕಾ ಪ್ರಹಾರ ನಡೆಸಿದರು. 

ಬೆಂಗಳೂರು ಸೌಥ್ ಅಂತ ಮಾಡಿದ್ದಾರೆ, ಅದ್ರಲ್ಲಿ‌ ತಪ್ಪೇನು?: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್

ಚಿಕ್ಕಮಗಳೂರಿನಲ್ಲಿ ಉಗಿದ ರೀತಿ ನನ್ನನ್ನು ಕ್ಷೇತ್ರದಲ್ಲಿ ಕ್ಯಾಕರಿಸಿ ಉಗಿದಿಲ್ಲ. ನನ್ನ ಬಗ್ಗೆ ಮಾತಾಡುವ ಕಿಂಚಿತ್ ಯೋಗ್ಯತೆ ಈ ಯಮ್ಮನಿಗಿಲ್ಲ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ