ಮಧುರೈನಿಂದ ಚುನಾವಣಾ ಕಣಕ್ಕೆ : ನಟ ವಿಜಯ್‌

Kannadaprabha News   | Kannada Prabha
Published : Aug 22, 2025, 06:01 AM IST
Actor Vijay

ಸಾರಾಂಶ

ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮೈತ್ರಿಯಿಲ್ಲದೆ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಇತಿಹಾಸ ಸೃಷ್ಟಿಸಲಿದೆ ಎಂದು ಪಕ್ಷದ ಮುಖ್ಯಸ್ಥ, ನಟ ವಿಜಯ್‌ ಘೋಷಿಸಿದ್ದಾರೆ. ಜತೆಗೆ ಆಡಳಿತಾರೂಢ ಡಿಎಂಕೆಗೂ ನೇರ ಸವಾಲೆಸೆದಿದ್ದಾರೆ.

ಮದುರೈ: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮೈತ್ರಿಯಿಲ್ಲದೆ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಇತಿಹಾಸ ಸೃಷ್ಟಿಸಲಿದೆ ಎಂದು ಪಕ್ಷದ ಮುಖ್ಯಸ್ಥ, ನಟ ವಿಜಯ್‌ ಘೋಷಿಸಿದ್ದಾರೆ. ಜತೆಗೆ ಆಡಳಿತಾರೂಢ ಡಿಎಂಕೆಗೂ ನೇರ ಸವಾಲೆಸೆದಿದ್ದಾರೆ.

ಮದುರೈನಲ್ಲಿ ‘ಮತದಾರರ ಇತಿಹಾಸ ಮರಳುವಿಕೆ’ ಥೀಮ್‌ನಡಿ ನಡೆದ ಪಕ್ಷದ ಎರಡನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ವಿಜಯ್‌, ‘ಟಿವಿಕೆಯ ರಾಜಕೀಯ ನಿಜವಾದ, ಭಾವನಾತ್ಮಕ, ಜನರ ಒಳಿತಿಗಾಗಿ ಮತ್ತು ಅವರಿಗೆ ಒಳ್ಳೆಯದನ್ನು ಮಾಡುವುದಕ್ಕಾಗಿ ಮಾತ್ರ ಇದೆ. 1967 ಮತ್ತು 1977ರಲ್ಲಿ ಆದಂತೆ, 2026ರಲ್ಲಿ ರಾಜ್ಯ ಬಹುದೊಡ್ಡ ರಾಜಕೀಯ ಬದಲಾವಣೆಯನ್ನು ಕಾಣಲಿದೆ. ಇತಿಹಾಸ ಪುನರಾವರ್ತನೆಯಾಗುತ್ತದೆ’ ಎಂದು ಹೇಳಿದ್ದಾರೆ.

ಈ ಮೂಲಕ, 1967ರಲ್ಲಿ ಡಿಎಂಕೆ ಮತ್ತು 1977ರಲ್ಲಿ ಎಐಎಡಿಎಂಕೆ ಮೊದಲ ಬಾರಿ ಜಯಗಳಿಸಿದ್ದನ್ನು ನೆನಪಿಸಿ, ಕಳೆದ ವರ್ಷ ಸ್ಥಾಪನೆಯಾದ ತಮ್ಮ ಪಕ್ಷ ಮುಂದಿನ ಚುನಾವಣೆಯಲ್ಲಿ ಮೊದಲ ಗೆಲುವು ಕಾಣಲಿದೆ ಎಂದು ವಿಶ್ವಾಸದ ಮಾತನ್ನಾಡಿದ್ದಾರೆ. ಜತೆಗೆ, ಶ್ರೀಲಂಕಾದಿಂದ ಕಚ್ಚತೀವು ದ್ವೀಪವನ್ನು ಸ್ವತಂತ್ರಗೊಳಿಸುವ ಭರವಸೆ ನೀಡಿದ್ದಾರೆ.

ಡಿಎಂಕೆ ಮೇಲೆ ವಾಗ್ದಾಳಿ :

‘ನಮ್ಮನ್ನು ತುಚ್ಛವಾಗಿ ಕಾಣಬೇಡಿ, ಈ ಸಮ್ಮೇಳನಕ್ಕೆ ಬಂದವರು, ಮುಂದಿನ ಚುನಾವಣೆಯಲ್ಲಿ ಜನವಿರೋಧಿ ಸರ್ಕಾರಕ್ಕೆ ಭಾರೀ ಪೆಟ್ಟು ಕೊಡುತ್ತಾರೆ. ಕಾಡಲ್ಲಿ ತೋಳದಂತಹ ಕೆಲ ಪ್ರಾಣಿಗಳಿದ್ದರೂ, ಸಿಂಹವೇ ಎಂದಿದ್ದರೂ ವನರಾಜ. ಅದು ತನ್ನ ಪ್ರದೇಶವನ್ನು ತಾನೇ ಗುರುತಿಸಿಕೊಳ್ಳುತ್ತದೆ. ಅದಕ್ಕೆ ಗುಂಪಿನಲ್ಲಿರಲೂ ಗೊತ್ತು, ಒಬ್ಬಂಟಿಯಾಗಿರಲೂ ಗೊತ್ತು. ಸಿಂಹ ಯಾವತ್ತಿದ್ದರೂ ಬೇಟೆಗಷ್ಟೇ ಹೊರಗೆ ಬರುವುದು’ ಎಂದ ವಿಜಯ್‌, ‘ಬಿಜೆಪಿ ನಮ್ಮ ಸೈದ್ಧಾಂತಿಕ ವಿರೋಧಿಯಾದರೆ, ಡಿಎಂಕೆ ರಾಜಕೀಯ ವೈರಿ’ ಎಂದು ಬಹಿರಂಗವಾಗಿ ಹೇಳಿದ್ದಾರೆ. ಇದೇ ವೇಳೆ, ಸಿಎಂ ಸ್ಟಾಲಿನ್‌ರನ್ನು ಅಂಕಲ್‌ ಎಂದು ಕರೆದು ಕಾಲೆಳೆದಿದ್ದಾರೆ.

ಈ ನಡುವೆ ಲಕ್ಷಾಂತರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಪೈಕಿ ಒಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ