
ನವದೆಹಲಿ, (ಮಾ.12): ಈ ಬಾರಿ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಭಾರೀ ರಂಗೇರಿದೆ. ಅದರಲ್ಲೂ ಪಶ್ಚಿಮ ಬಂಗಾಳದ ಹೊರತುಪಡಿಸಿ ತಮಿಳಿಮಾಡು ವಿಧಾನಸಭಾ ಚುನಾವಣೆ ಕುತೂಹಲ ಮೂಡಿಸಿದೆ.
ಹೌದು...'ಕರ್ನಾಟಕದ ಸಿಂಗಂ' ಎಂದು ಜನಜನಿತರಾದ ಕೆ. ಅಣ್ಣಾಮಲೈ ತಮಿಳುನಾಡಿನಲ್ಲಿ ವಿಧಾಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ತಮಿಳ್ನಾಡಲ್ಲಿ ಮತ್ತೆ ಡಿಎಂಕೆ ಯುಗಾರಂಭ: ಸಮೀಕ್ಷೆ ಭವಿಷ್ಯ
ತಮಿಳುನಾಡಿನಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದ್ದು, ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ಅರವಾಕುರಿಚಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತವಾಗಿದೆ.
ಅರವಾಕುರಿಚಿ ಎಂಬುದು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾಗಿದೆ. ಡಿಎಂಕೆ ಪಕ್ಷದ ವಿ ಸೆಂಥಿಲ್ ಬಾಲಾಜಿ ಕ್ಷೇತ್ರದ ಹಾಲಿ ಶಾಸಕ. ವಲಸೆ ಹಕ್ಕಿಯಾಗಿ ಕ್ಷೇತ್ರಗಳನ್ನು ಬದಲಾಯಿಸುತ್ತಾ.. ಕಳೆದ ಬಾರಿ ಅರವಾಕುರಿಚಿ ಕ್ಷೇತ್ರದಿಂದ ಅರಸಿ ಬಂದ್ದಿದಾರೆ. ಇತ್ತೀಚೆಗೆ ಸಭೆಯೊಂದರಲ್ಲಿ ಓಪನ್ ಚಾಲೆಂಜ್ ಹಾಕಿದ ಅಣ್ಣಾಮಲೈ ಕ್ಷೇತ್ರದಲ್ಲಿ ಈ ಬಾರಿ ಡಿಎಂಕೆ ಮತ್ತು ಬಿಜೆಪಿ ಮಧ್ಯೆ ನೇರ ಹಣಾಹಣಿ ಏರ್ಪಡಲಿದೆ.
ಇನ್ನು ಈ ಬಗ್ಗೆ ನವದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಅಣ್ಣಾಮಲೈ, ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರ ಹೈ ಕಮಾಂಡ್ ನಿರ್ಧರಿಸುತ್ತೆ. ಪಕ್ಷ ನಿಲ್ಲಬೇಕು ಅಂತಾ ಹೇಳಿದ್ರೆ ನಿಲ್ಲುತ್ತೇನೆ. ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಎಡಪ್ಪಾಡಿ ಪಳಸಿಸ್ವಾಮಿ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಬಿಜೆಪಿ 20 ರಲ್ಲಿ ಗೆಲ್ಲಬೇಕು ಅನ್ನೋದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.