ಬಿಜೆಪಿ, ಜೆಡಿಎಸ್‌ ತಿರಸ್ಕರಿಸಲು ತರೀಕೆರೆ ಜನತೆ ನಿರ್ಧಾರ: ಲೋಕೇಶ್‌ ತಾಳಿಕಟ್ಟೆ

Published : Apr 09, 2023, 03:16 PM IST
ಬಿಜೆಪಿ, ಜೆಡಿಎಸ್‌ ತಿರಸ್ಕರಿಸಲು ತರೀಕೆರೆ ಜನತೆ ನಿರ್ಧಾರ: ಲೋಕೇಶ್‌ ತಾಳಿಕಟ್ಟೆ

ಸಾರಾಂಶ

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಹಾಗೂ ಕುಟಂಬ ಸ್ವಾರ್ಥದ ಜೆಡಿಎಸ್‌ನ್ನು ತಿರಸ್ಕರಿಸಲು ಜನತೆ ನಿರ್ಧರಿಸಿದ್ದಾರೆ ಎಂದು ತರೀಕೆರೆ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್‌ ಪಕ್ಷದ ಪ್ರಬಲ ಟಿಕೆಟ್‌ ಆಕಾಂಕ್ಷಿ ಲೋಕೇಶ್‌ ತಾಳಿಕಟ್ಟೆಹೇಳಿದ್ದಾರೆ.

ತರೀಕೆರೆ (ಏ.9) : ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಹಾಗೂ ಕುಟಂಬ ಸ್ವಾರ್ಥದ ಜೆಡಿಎಸ್‌ನ್ನು ತಿರಸ್ಕರಿಸಲು ಜನತೆ ನಿರ್ಧರಿಸಿದ್ದಾರೆ ಎಂದು ತರೀಕೆರೆ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್‌ ಪಕ್ಷದ ಪ್ರಬಲ ಟಿಕೆಟ್‌ ಆಕಾಂಕ್ಷಿ ಲೋಕೇಶ್‌ ತಾಳಿಕಟ್ಟೆ(Lokesh Talikatte) ಹೇಳಿದ್ದಾರೆ.

ಶನಿವಾರ ಪಟ್ಟಣದ ಅರಮನೆ ಹೋಟೆಲ್‌ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ನೀಡುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಸರ್ಕಾರ(BJP Government) ಜನರಿಗೆ ಮೂಲಭೂತ ಸೌಕರ್ಯ ನೀಡಲು ಮತ್ತು ಅಡಳಿತದಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಇವರು ಸಮಸ್ಯೆಗಳನ್ನು ಪರಿಹರಿಸುವ ಬದಲು, ಜನರ ಮನಸ್ಸಿನಲ್ಲಿ ಕೋಮು ದ್ವೇಷ ಬಿತ್ತುವ ಹಾಗೂ ದೇಶದ ಪ್ರಮುಖ ಆಸ್ತಿಗಳನ್ನು ತಮ್ಮ ಹಿತೈಷಿಗಳಿಗೆ ಪರಭಾರೆ ಮಾಡಿರುವ ಬಿಜೆಪಿಯನ್ನು ತರೀಕೆರೆ ಜನರು ಈ ಭಾರಿ ತಿರಸ್ಕರಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು.

ಕೂಸಳ್ಳಿ ಫಾಲ್ಸ್‌ನಲ್ಲಿ ಮುಳುಗಿ ಕೊಪ್ಪದ ಯುವಕ ಸಾವು

ಹಾಗೆಯೇ ನಮ್ಮದು ಜಾತ್ಯಾತೀತ ಪಕ್ಷ ಎಂದು ಸುಳ್ಳು ಹೇಳಿಕೊಂಡು ಕುಟುಂಬ ರಾಜಕಾರಣದಲ್ಲಿ ನಿರತರಾಗಿರುವ ಜೆಡಿಎಸ್‌ಗೆ ಮತ ಚಲಾಯಿಸದಿರಲು ನಿರ್ಧರಿಸಿದ್ದಾರೆ. ಜಾತ್ಯತೀತ, ಸಮಸಮಾಜ ತತ್ವದಡಿ ಸಾಗುತ್ತಿರುವ ಕಾಂಗ್ರೆಸ್‌ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿ ಆಗಿದ್ದೇನೆ. ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆದು, ರಾಜ್ಯದ ಶಿಕ್ಷಣ ಇಲಾಖೆಯ ಅವ್ಯವಸ್ಥೆಗಳನ್ನು ಹಲವಾರು ವೇದಿಕೆಗಳಲ್ಲಿ ಚರ್ಚಿಸುವಂತೆ ಮಾಡಿ ಅದರಲ್ಲಿದ್ದ ಅನೇಕ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕಾರಣನಾಗಿರುವ ನನ್ನನ್ನು ಗುರುತಿಸಿ ಟಿಕೆಟ್‌ ನೀಡಿದರೆ ಪಕ್ಷದ ಸಿದ್ದಾಂತದಡಿ ತರೀಕೆರೆ ಜನತೆಯ ಸೇವೆ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಒಂದು ವೇಳೆ ಟಿಕೆಟ್‌ ಕೊಡದಿದ್ದರೂ ಸೈದ್ಧಾಂತಿಕವಾಗಿ ಪಕ್ಷವನ್ನು ಗಟ್ಟಿಯಾಗಿ ಕಟ್ಟಲು ಸಿದ್ದನಾಗಿರುವೆ ಎಂದು ತಿಳಿಸಿದರು.

ಕುರುಬ ಸಮಾಜದ ತಾಲೂಕು ಅಧ್ಯಕ್ಷ ಹಾಲವಜ್ರಪ್ಪ, ಪುರಸಭಾ ಮಾಜಿ ಅಧ್ಯಕ್ಷ ಈರಣ್ಣ, ಸೋಮಶೇಖರ್‌, ದೇವರಾಜ್‌, ಶಿವಣ್ಣ. ದೇವರಾಜ್‌ ಮತ್ತಿತರರು ಭಾಗವಹಿಸಿದ್ದರು.

ಡ್ಯಾಂನಲ್ಲಿ ಈಜಲು ಹೋಗಿ ಕಾಲೇಜು ವಿದ್ಯಾರ್ಥಿನಿಯರು ಸಾವು: ಟ್ರಿಪ್‌ಗೆ ಹೋದವರು ಮಸಣ ಸೇರಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್