
ಬೆಂಗಳೂರು, (ಫೆ.25): ಮುಂಬರುವ ಲೋಕಸಭಾ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರೆಂಬುದು ಬಹುತೇಕ ಫೈನಲ್ ಆಗಿದೆ.
ಕೇಂದ್ರ ಸಚಿವರಾಗಿದ್ದ ಅನಂತಕುಮಾರ್ ಅವರ ಪತ್ನಿ ಡಾ.ತೇಜಸ್ವಿನಿ ಅನಂತಕುಮಾರ್ ಅವರನ್ನು ಅಂತಿಮಗೊಳಿಸಿದೆ ಎಂದು ರಾಜ್ಯ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.
ಟಿಕೆಟ್ ಫೈಟ್: ಅನಂತ್ ಕ್ಷೇತ್ರದಲ್ಲಿ ಪತ್ನಿ ಬಿಜೆಪಿ ಅಭ್ಯರ್ಥಿ?
ಬಿಜೆಪಿಯ ಮೂಲಗಳು ಹೇಳಿದಂತೆ, ಮೊನ್ನೆಯಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ತೇಜಸ್ವಿನಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಅನಂತಕುಮಾರ್ ನಿಧನದಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಅನಂತ್ಕುಮಾರ್ ಅವರು 7 ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ತೇಜಸ್ವಿನಿಗೆ ಟಿಕೆಟ್ ತಪ್ಪಿಸಲು BJP ಮುಖಂಡ ಕಸರತ್ತು
ಈಗ ಅನಂತಕುಮಾರ್ರಿಂದ ತೆರವಾಗಿರುವ ಕ್ಷೇತ್ರಕ್ಕೆ ಡಾ.ತೇಜಸ್ವಿನಿ ಅನಂತಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಡಾ. ತೇಜಸ್ವಿನಿ ಅನಂತಕುಮಾರ್, ಸಕ್ರಿಯಾವಾಗಿ ರಾಜಕಾರಣದಲ್ಲಿ ಇಲ್ಲವಾದರೂ ಅದಮ್ಯ ಚೇತನದ ಮೂಲಕ ಜನರ ಸಂಪರ್ಕದಲ್ಲಿದ್ದು, ನಿನ್ನೆ (ಭಾನುವಾರ) ಪ್ರಧಾನಿ ‘ಮನ್ ಕೀ ಬಾತ್’ ಕಾರ್ಯಕ್ರಮದ ಬೆಂಗಳೂರಿನ ವೇದಿಕೆಯಲ್ಲಿ ತೇಜಸ್ವಿನಿ ಅನಂತಕುಮಾರ್ ಪ್ರತ್ಯಕ್ಷರಾಗಿದ್ದರು. ಈ ಮೂಲಕ ಪೂರ್ಣ ಪ್ರಮಾಣದಲ್ಲಿ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.