2 ಬಾರಿ ಟೆಸ್ಟ್‌ ಮಾಡಿ ಸರ್ಕಾರಿ ಆಸ್ಪತ್ರೆಗೆ ಔಷಧ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Published : Mar 11, 2025, 11:09 AM ISTUpdated : Mar 11, 2025, 11:17 AM IST
2 ಬಾರಿ ಟೆಸ್ಟ್‌ ಮಾಡಿ ಸರ್ಕಾರಿ ಆಸ್ಪತ್ರೆಗೆ ಔಷಧ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಸಾರಾಂಶ

ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲ್ಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ.

ವಿಧಾನ ಪರಿಷತ್‌ (ಮಾ.11): ಸರ್ಕಾರಿ ಆಸ್ಪತ್ರೆಗಳಿಗೆ ಕಂಪನಿಗಳು ಪೂರೈಸುವ ಔಷಧಗಳ ಗುಣಮಟ್ಟವನ್ನು ಎರಡನೇ ಬಾರಿ ಪ್ರಯೋಗಾಲಯದಿಂದ ಪರೀಕ್ಷಿಸಿದ ನಂತರವೇ ಜಿಲ್ಲೆ, ತಾಲ್ಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ತೀರ್ಮಾನಿಸಲಾಗಿದೆ. ಜೊತೆಗೆ 2-3 ವರ್ಷಕ್ಕೊಂದು ಬಾರಿ ಔಷಧ ತಯಾರಿಕೆ ಕಂಪನಿಗೆ ಖುದ್ದಾಗಿ ತೆರಳಿ ತಪಾಸಣೆ ಮಾಡಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಬಿಜೆಪಿಯ ಡಾ. ತಳವಾರ್‌ ಸಾಬಣ್ಣ ಹಾಗೂ ಸಿ.ಟಿ. ರವಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅಗತ್ಯ ಹಾಗೂ ಇತರ ಔಷಧಗಳ ಸಂಖ್ಯೆಯನ್ನು 732ರಿಂದ 1084ಕ್ಕೆ ಹೆಚ್ಚಿಸಲಾಗಿದೆ. ಕೆಲವು ಜೀವ ರಕ್ಷಕ ಔಷಧಗಳನ್ನು ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಪೂರೈಸಬೇಕಾಗಿರುವುದರಿಂದ ಟೆಂಡರ್‌ ಪ್ರಕ್ರಿಯೆಯಲ್ಲಿ ಹೆಚ್ಚು ಬಿಡ್‌ದಾರರು ಭಾಗಿಯಾಗಲ್ಲ. ಕೆಲವು ಔಷಧಗಳಿಗೆ ಹಲವು ಬಾರಿ ಟೆಂಡರ್‌ ಆಹ್ವಾನಿಸಿದ್ದರೂ ಪ್ರತಿಕ್ರಿಯಿಸುವುದಿಲ್ಲ ಎಂದರು.

ತುರ್ತು ಸಂದರ್ಭದಲ್ಲಿ ಅಗತ್ಯ ಪ್ರಮಾಣದಲ್ಲಿ ಔಷಧಗಳನ್ನು ತಮ್ಮ ಮಟ್ಟದಲ್ಲಿ ಸೂಕ್ತ ಪ್ರಾಧಿಕಾರದ ಅನುಮೋದನೆಯೊಂದಿಗೆ ಖರೀದಿಸಿ ಸಾರ್ವಜನಿಕರಿಗೆ ವಿತರಿಸಲು ಸಹ ಸೂಚಿಸಲಾಗಿದೆ. 23 ಔಷಧಿಗಳನ್ನು 4ಜಿ ವಿನಾಯಿತಿ ಮೂಲಕ 9.50 ಕೋಟಿ ರು. ಮೌಲ್ಯದ ಔಷಧಿಗಳನ್ನು ಖರೀದಿಸುವ ಪ್ರಸ್ತಾವನೆ ಪ್ರಕ್ರಿಯೆಯಲ್ಲಿರುತ್ತದೆ ಎಂದು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ಡಾ. ತಳವಾರ್‌ ಸಾಬಣ್ಣ ಅವರು, ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಅಗತ್ಯ ಹಾಗೂ ಜೀವ ರಕ್ಷಕ ಔಷಧಗಳ ಕೊರತೆಯಿಂದ ದುಬಾರಿ ದರದಲ್ಲಿ ಜನರು ಖರೀದಿಸುವ ಸ್ಥಿತಿ ಇದೆ ಎಂದರು. 

ಬಿಜೆಪಿ ವಿರೋಧದ ಮಧ್ಯೆ ಬೆಂಗಳೂರು ಅರಮನೆ ವಿಧೇಯಕ ವಿಧಾನ ಪರಿಷತ್ತಲ್ಲೂ ಅಂಗೀಕಾರ

ಒತ್ತಡ ನಿವಾರಣೆಗೆ ಮನೋವಿಜ್ಞಾನ ಅವಶ್ಯಕ: ಇಂದಿನ ಡಿಜಿಟಲ್‌ ಯುಗದಲ್ಲಿ ಮಾನಸಿಕ ಒತ್ತಡ, ಖಿನ್ನತೆಗಳು ಅತ್ಯಧಿಕವಾಗಿದ್ದು ಎಲ್ಲರಿಗೂ ಮನೋವಿಜ್ಞಾನದ ಅವಶ್ಯಕತೆ ಇದೆ. ಹಾಗಾಗಿ ಎಲ್ಲ ಆರೋಗ್ಯ ಸಂಸ್ಥೆಗಳು ನುರಿತ ಮನೋಶಾಸ್ತ್ರಜ್ಞರನ್ನು ನೇಮಿಸಿಕೊಂಡು ಉದ್ಯೋಗಸ್ತರು ಒತ್ತಡ ಪರಿಸ್ಥಿತಿ ನಿಭಾಯಿಸಲು ಕೌನ್ಸೆಲಿಂಗ್‌, ಚಿಕಿತ್ಸೆ ಮೂಲಕ ಸೂಕ್ತ ಪರಿಹಾರಗಳನ್ನು ಒದಗಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ‘ಮನೋವಿಜ್ಞಾನ ಕ್ಷೇತ್ರ ವಿಶ್ವದೆಲ್ಲೆಡೆ ವ್ಯಾಪಿಸಿದೆ, ಆಧುನಿಕ ಪ್ರಪಂಚದಲ್ಲಿ ಮನೋವಿಜ್ಞಾನದ ಅನಿವಾರ್ಯತೆ ಕೂಡ ಹೆಚ್ಚಾಗಿದೆ. ಸಂತೋಷ, ನೆಮ್ಮದಿಯನ್ನು ಹುಡುಕುವ ಪರಿಸ್ಥಿತಿ ಎದುರಾಗಿದೆ ಆ ನಿಟ್ಟಿನಲ್ಲಿ ಮನೋವಿಜ್ಞಾನದ ಪಾತ್ರ ಗಣನೀಯವಾಗಿದೆ‌ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ