
ನವದೆಹಲಿ: ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೊಗಳುವಿಕೆ ಮುಂದುವರಿಸಿದ್ದಾರೆ. ಸೋಮವಾರ ಮೋದಿ ನೀಡಿದ ರಾಮನಾಥ ಗೋಯೆಂಕಾ ಸ್ಮಾರಕ ಉಪನ್ಯಾಸವನ್ನು ಹಾಡಿ ಹೊಗಳಿದ್ದಾರೆ. ಇದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಕಾರಣವಾಗುವ ಸಾಧ್ಯತೆ ಇದೆ.
ಟ್ವೀಟ್ ಮಾಡಿದ ತರೂರ್, ‘ವಸಾಹತುಶಾಹಿ ಮನಃಸ್ಥಿತಿ ತೊಡೆದು ಹಾಕಬೇಕು ಎಂಬ ಮೋದಿ ಅವರ ಭಾಷಣ ಉತ್ತಮವಾಗಿತ್ತು. ನಾನು ಕೆಮ್ಮು ಹಾಗೂ ನೆಗಡಿಯಿಂದ ಬಳಲುತ್ತಿದ್ದರೂ ಸಭಿಕರ ಸಾಲಿನಲ್ಲಿ ಕುಳಿತು ಅವರ ಭಾಷಣ ಕೇಳಿದ್ದು ಆನಂದ ತಂದಿತು’ ಎಂದಿದ್ದಾರೆ.
ಈ ಹಿಂದೆ ಕೂಡ ಆಪರೇಷನ್ ಸಿಂದೂರ ಸೇರಿ ಮೋದಿ ಅವರ ಅನೇಕ ಕ್ರಮಗಳನ್ನು ಶ್ಲಾಘಿಸಿ ತರೂರ್ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.