ಮನಸ್ಸು ಮಾಡಿದ್ರೆ ಮಾಡಾಳು ವಿರುದ್ಧ ಕೇಸ್‌ ತಪ್ಪಿ​ಸ​ಬ​ಹು​ದಿ​ತ್ತು: ಪ್ರಲ್ಹಾದ್ ಜೋಶಿ

Published : Mar 06, 2023, 10:33 AM IST
ಮನಸ್ಸು ಮಾಡಿದ್ರೆ ಮಾಡಾಳು ವಿರುದ್ಧ ಕೇಸ್‌ ತಪ್ಪಿ​ಸ​ಬ​ಹು​ದಿ​ತ್ತು: ಪ್ರಲ್ಹಾದ್ ಜೋಶಿ

ಸಾರಾಂಶ

 ನಮ್ಮ ಸರ್ಕಾರ ಮನಸ್ಸು ಮಾಡಿ​ದ್ದರೆ ಲೋಕಾ​ಯುಕ್ತ ದಾಳಿ​ಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧದ ಪ್ರಕರಣ ದಾಖ​ಲಾ​ಗು​ವು​ದನ್ನು ತಡೆಯಬಹುದಿತ್ತು. ಆದರೆ, ಹಾಗೆ ಮಾಡಲಿಲ್ಲ. ನಾವು ಯಾವ​ತ್ತಿ​ದ್ದರೂ ಭ್ರಷ್ಟಾಚಾರದ ವಿರುದ್ಧ ಎಂದು ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದರು.

ಬಾಳೆಹೊನ್ನೂರು/ಹುಬ್ಬ​ಳ್ಳಿ (ಮಾ.6) : ನಮ್ಮ ಸರ್ಕಾರ ಮನಸ್ಸು ಮಾಡಿ​ದ್ದರೆ ಲೋಕಾ​ಯುಕ್ತ ದಾಳಿ​ಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧದ ಪ್ರಕರಣ ದಾಖ​ಲಾ​ಗು​ವು​ದನ್ನು ತಡೆಯಬಹುದಿತ್ತು. ಆದರೆ, ಹಾಗೆ ಮಾಡಲಿಲ್ಲ. ನಾವು ಯಾವ​ತ್ತಿ​ದ್ದರೂ ಭ್ರಷ್ಟಾಚಾರದ ವಿರುದ್ಧ ಎಂದು ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಹ್ಲಾದ್‌ ಜೋಶಿ(Pralhad Joshi) ಆರೋಪಿಸಿದರು.

ಚಿಕ್ಕ​ಮ​ಗ​ಳೂ​ರಿನ(Chikkamagaluru) ಬಾಳೆ​ಹೊ​ನ್ನೂರು ರಂಭಾಪುರಿ ಪೀಠ(Balehonnur rambhapuri peetha)ದ ಆವರಣ ಹಾಗೂ ಹುಬ್ಬ​ಳ್ಳಿ​ಯಲ್ಲಿ ಭಾನು​ವಾರ ಸುದ್ದಿ​ಗಾ​ರರ ಜತೆಗೆ ಮಾತ​ನಾಡಿ, ಆಡ​ಳಿ​ತಾ​ರೂಢ ಪಕ್ಷದ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿ(Karnataka lokayukta raid)ಯಾಗಿದೆ ಎಂದರೆ ಅದು ನಮ್ಮ ಸರ್ಕಾರದ ಪಾರದರ್ಶಕತೆ ತೋರಿಸುತ್ತದೆ. ತಪ್ಪು ಮಾಡಿದ್ದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುತ್ತದೆ ಎಂದ​ರು.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಜಾರಿಗೆ ತರಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಕಾಂಗ್ರೆಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ. ದೇಶದಲ್ಲಿ ಭ್ರಷ್ಟಾಚಾರದ ರಕ್ತ ಬೀಜಾಸುರನನ್ನು ಉತ್ಪಾದನೆ ಮಾಡಿದ್ದೇ ಕಾಂಗ್ರೆಸ್‌ ಪಕ್ಷ. ಈ ಹಿಂದೆ ಕಾಂಗ್ರೆಸ್‌ ಲೋಕಾಯುಕ್ತವನ್ನು ಹಲ್ಲಿಲ್ಲದ ಹಾವು ಮಾಡಿತ್ತು. ಇದೀಗ ನಮ್ಮ ಕಾಲದಲ್ಲಿ ಲೋಕಾಯುಕ್ತವನ್ನು ಬಲಗೊಳಿಸಲಾಗಿದೆ. ಲೋಕಾ​ಯು​ಕ್ತಕ್ಕೆ ಪೂರ್ಣ ಅಧಿ​ಕಾ​ರ ಕೊಟ್ಟಿದ್ದೇ ನಮ್ಮ ಸರ್ಕಾ​ರ. ಯಾರು ಕಳಂಕಿತರಿರುತ್ತಾರೆ ಅವರ ವಿರುದ್ಧ ಕ್ರಮ ಆಗಲಿದೆ. ಭ್ರಷ್ಟಾಚಾರ ಮಾಡಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ಸುಮ​ಲ​ತಾಗೆ ಬಿಜೆಪಿ ಪರ ಒಲ​ವಿ​ದೆ: ಸಚಿ​ವ

ಮಂಡ್ಯ ಸಂಸದೆ ಸುಮಲತಾ(MP Sumalata) ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದರು. ಲೋಕಸಭೆಯಲ್ಲಿ ಅವರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ನಮ್ಮ ಪರ ಮತ ಚಲಾವಣೆ ಮಾಡಿದ್ದರು. ಅವರಿಗೆ ಬಿಜೆಪಿ ಪರ ಒಲವಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸ್ಪಷ್ಟ​ವಾ​ಗ​ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿ​ದ​ರು.

ಭ್ರಷ್ಟಾಚಾರ ಹುಟ್ಟು ಹಾಕಿದ ರಕ್ತ ಬೀಜಾಸುರ ಪಕ್ಷ ಕಾಂಗ್ರೆಸ್: ಪ್ರಹ್ಲಾದ್ ಜೋಶಿ ವಾಗ್ದಾಳಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!