ಮುನಿರತ್ನ ವಿರುದ್ಧದ ದೂರುದಾರೆಯಿಂದ ಕೆಲ ರಾಜಕಾರಣಿಗಳ ಅಶ್ಲೀಲ ವಿಡಿಯೋ ಸಲ್ಲಿಕೆ!

Published : Oct 03, 2024, 07:38 AM IST
ಮುನಿರತ್ನ ವಿರುದ್ಧದ ದೂರುದಾರೆಯಿಂದ ಕೆಲ ರಾಜಕಾರಣಿಗಳ ಅಶ್ಲೀಲ ವಿಡಿಯೋ ಸಲ್ಲಿಕೆ!

ಸಾರಾಂಶ

ಅತ್ಯಾಚಾರ ಪ್ರಕರಣ ಸಂಬಂಧ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ಧದ ಆರೋಪಕ್ಕೆ ಪೂರಕವಾಗಿ ಕೆಲ ರಾಜಕಾರಣಿಗಳ ಅಶ್ಲೀಲ ವಿಡಿಯೋ ಮತ್ತು ಭಾವಚಿತ್ರಗಳನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ದೂರುದಾರೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. 

ಬೆಂಗಳೂರು (ಅ.03): ಅತ್ಯಾಚಾರ ಪ್ರಕರಣ ಸಂಬಂಧ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ಧದ ಆರೋಪಕ್ಕೆ ಪೂರಕವಾಗಿ ಕೆಲ ರಾಜಕಾರಣಿಗಳ ಅಶ್ಲೀಲ ವಿಡಿಯೋ ಮತ್ತು ಭಾವಚಿತ್ರಗಳನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ದೂರುದಾರೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಕಚೇರಿಯಲ್ಲಿ ಎಸ್‌ಐಟಿ ಮುಂದೆ ಸಂತ್ರಸ್ತೆ ವಿಚಾರಣೆಗೆ ಹಾಜರಾಗಿದ್ದರು. 

ಆ ವೇಳೆ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ ಬ್ಲ್ಯಾಕ್‌ಮೇಲ್ ಮೂಲಕ ಕೆಲ ರಾಜಕಾರಣಿಗಳು, ಪೊಲೀಸ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಮುನಿರತ್ನ ಹನಿಟ್ರ್ಯಾಪ್ ಮಾಡಿಸಿದ್ದರು ಎಂದು ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ. 'ನನ್ನ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿ ಹನಿಟ್ರ್ಯಾಪ್ ಕೃತ್ಯಕ್ಕೆ ಶಾಸಕರು ಬಳಸಿಕೊಂಡಿದ್ದಾರೆ. ಜೀವ ಭೀತಿಯಿಂದ ಅನಿರ್ವಾಯವಾಗಿ ಅವರು ಹೇಳಿದಂತೆ ಕೇಳಿದೆ. ನಾನಾಗಿಯೇ ನಾನು ತಪ್ಪು ಮಾಡಿಲ್ಲ' ಎಂದು ಸಂತ್ರಸ್ತ ಹೇಳಿದ್ದಾರೆ ಎನ್ನಲಾಗಿದೆ. ಈ ವೇಳೆ ತಮ್ಮ ಆರೋಪಕ್ಕೆ ಪೂರಕ ವಾಗಿ ಕೆಲ ಅಶ್ಲೀಲ ವಿಡಿಯೋ ಹಾಗೂ ಭಾವಚಿತ್ರಗಳನ್ನು ಆಕೆ ಸಲ್ಲಿಸಿದ್ದಾರೆ. 

ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅನಿವಾರ್ಯ: ಸಚಿವ ಈಶ್ವರ್‌ ಖಂಡ್ರೆ

ಇವುಗಳಲ್ಲಿ ಮಾಜಿ ಶಾಸಕ, ಬಿಬಿಎಂಪಿ ಮಾಜಿ ಸದಸ್ಯೆಯೊಬ್ಬರ ಪತಿ ಹಾಗೂ ಮೂವರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಕೆಲವರ ಅಶ್ಲೀಲ ವಿಡಿಯೋ ಗಳು ಮತ್ತು ಪೋಟೋಗಳಿವೆ ಎಂದು ಮೂಲಗಳು ಮಾಹಿತಿ ನೀಡಿವೆ. ಮೊಬೈಲ್ ಜಪ್ತಿ ಮಾಡಿ ಎಸ್‌ಐಟಿ: ಇನ್ನು ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಮೊಬೈಲ್ ಅನ್ನು ಜಪ್ತಿ ಮಾಡಿ ಪರಿಶೀಲನೆ ಸಲುವಾಗಿ ಎಫ್‌ಎಸ್‌ಎಲ್‌ಗೆ ಎಸ್‌ಐಟಿ ಅಧಿಕಾರಿಗಳು ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆ ಬಳಿಕ ಸಂತ್ರಸ್ತೆಯ ಮೊಬೈಲ್ ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಮೊಬೈಲ್‌ನಲ್ಲಿ ಸಹ ಕೆಲ ಪುರಾವೆಗಳು ಲಭಿಸಿವೆ ಎನ್ನಲಾಗಿದೆ. 

ಶಾಸಕರ ವಿರುದ್ಧ ವೇಲು ನಾಯ್ಕ‌ರ್‌ ಸಾಕ್ಷಿ: ದೂರುದಾರೆ ಬಳಿಕ ಎಸ್‌ಐಟಿ ಮುಂದೆ ಶಾಸಕ ಮುನಿರತ್ನ ವಿರುದ್ಧ ಬಿಬಿಎಂಪಿ ಮಾಜಿ ಸದಸ್ಯ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ಸ್ಥಳೀಯ ಕಾಂಗ್ರೆಸ್ ಮುಖಂಡ ವೇಲು ನಾಯ್ಕ‌ ಸಹ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ನೋಟಿಸ್‌ ನೀಡಿದ ಕಾರಣ ವಿಚಾರಣೆಗೆ ವೇಲು ನಾಯ್ಕರ್‌ ಹಾಜರಾಗಿದ್ದರು. ಆ ವೇಳೆ ಶಾಸಕರ ಅಪರಾಧ ಕೃತ್ಯಗ ಗಳಿಗೆ ಸಂಬಂಧಿಸಿದಂತೆ ಕೆಲ ದಾಖಲೆಗಳನ್ನು ಎಸ್‌ಐಟಿಗೆ ವೇಲು ಸಲ್ಲಿಸಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಶಾಸಕರು ಜಾತಿ ನಿಂದನೆ ಮಾಡಿರುವ ಆರೋಪಕ್ಕೂ ಕೂಡ ದೂರುದಾರರಾಗಿರುವ ವೇಲು ಪುರಾವೆ ಒದಗಿಸಿದಾರೆ ಎಂದು ತಿಳಿದು ಬಂದಿದೆ.

ಉಲ್ಟಾ ಹೊಡೆದ ಮಹಿಳೆ-ಮುನಿರತ್ನ ಆಪ್ತನ ಹೇಳಿಕೆ: 'ಶಾಸಕರ ವಿರುದ್ದ ಸುಳ್ಳು ಆರೋಪ ಮಾಡಲಾಗಿದೆ. ಈಗ ದೂರು ನೀಡಿರುವ ಮಹಿಳೆ ಸಹ ಶಾಸಕರಿಂದ ಉಪಯೋಗ ಪಡೆದಿದ್ದಾರೆ' ಎಂದು ಎಸ್ ಐಟಿಗೆ ಶಾಸಕ ಮುನಿರತ್ನರವರ ಆಪ್ತ ಸಹಾಯಕ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ. 'ವೈಯಕ್ತಿಕ ಕೆಲಸಗಳ ನಿಮಿತ್ತ ಹಲವು ಬಾರಿ ಶಾಸಕರನ್ನು ದೂರುದಾರ ಮಹಿಳೆ ಭೇಟಿಯಾಗಿದ್ದರು. ಆಗ ಆಕೆಗೆ ಶಾಸಕರು ನೆರವಾಗಿದ್ದರು. ಅಲ್ಲದೆ ಆ ಮಹಿಳೆಯಿಂದ ಹನಿಟ್ರ್ಯಾಪ್ ಗೊಳಗಾದ ಪೊಲೀಸರು ಸೇರಿದಂತೆ ಕೆಲ ಅಧಿಕಾರಿಗಳಿಗೆ ಶಾಸಕರೇ ಬುದ್ಧಿಮಾತು ಹೇಳಿದ್ದರು. ಮಹಿಳೆಯೇ ಉಪಕಾರ ಪಡೆದು ಈಗ ಉಲ್ಟಾ ಹೊಡೆದಿದ್ದಾರೆ' ಎಂದು ಶಾಸಕರ ಆಪ್ತ ಹೇಳಿರುವುದಾಗಿ ತಿಳಿದು ಬಂದಿದೆ. 

ಇಂದು ಸುಳ್ಳು ಸುದ್ದಿ, ತೇಜೋವಧೆ ಸುದ್ದಿ ಹೆಚ್ಚಿವೆ: ಸಿಎಂ ಸಿದ್ದರಾಮಯ್ಯ ಕಳವಳ

ಖಾಸಗಿ ಸುದ್ದಿವಾಹಿನಿ ಪತ್ರಕರ್ತ ಸಾಕ್ಷಿ?: ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣ ದಲ್ಲಿ ಖಾಸಗಿ ಸುದ್ದಿವಾಹಿನಿಯೊಂದರ ಪತ್ರಕರ್ತನನ್ನು ಎಸ್‌ಐಟಿ ಸಾಕ್ಷಿಯಾಗಿ ಪರಿಗಣಿಸಿದೆ ಎನ್ನಲಾಗಿದೆ. ಮೊದಲು ಶಾಸಕರಿಗೆ ಆಪ್ತನಾಗಿದ್ದ ಆತ, ಆನಂತರ ಅವರಿಂದ ದೂರವಾಗಿದ. ಅಲ್ಲದೆ 'ರಹಸ್ಯ ಕಾರ್ಯಾಚರಣೆ ಮೂಲಕ ಕೆಲ ರಾಜಕಾರಣಿಗಳು ಹಾಗೂ ಪೊಲೀಸರು ಸೇರಿದಂತೆ ಕೆಲ ಅಧಿಕಾರಿಗಳಿಗೆ ಸಂಬಂಧಿಸಿದ ವೈಯಕ್ತಿಕ ಮಾಹಿತಿ ಯನ್ನು ಆತ ಸಂಗ್ರಹಿಸಿದ್ದು, ಇವುಗಳನ್ನು ಮುನಿರತ್ನರವರಿಗೆ ಆ ಪತ್ರಕರ್ತ ಕೊಟ್ಟಿದ್ದ. ಅತ್ಯಾಚಾರ ಪ್ರಕರಣದ ದೂರುದಾರ ಮಹಿಳೆಗೂ ಆತ ಪರಿಚಿತನಾಗಿದ್ದ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ