
ಬಂಟ್ವಾಳ (ಮಾ.19): ಕಳೆದ ಬಾರಿ ರಾಜಕೀಯ ಪ್ರಬುದ್ಧತೆಯ ಕೊರತೆಯಿಂದ ಕಾಂಗ್ರೆಸ್ ಪಕ್ಷವನ್ನು ನಂಬಿ ಸೋತಿದ್ದೇವೆ, ಈ ಬಾರಿ ಅಂತಹ ತಪ್ಪು ಮಾಡುವುದಿಲ್ಲ, 2023 ರ ವಿಧಾನಸಭಾ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್ಡಿಪಿಐ ಅಭ್ಯರ್ಥಿ ಇಲ್ಯಾಸ್ ತುಂಬೆ ತಿಳಿಸಿದ್ದಾರೆ.
ಅವರು ಬಿ.ಸಿ. ರೋಡಿನ ಪ್ರೆಸ್ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣಾ ಸಂದರ್ಭದಲ್ಲಿ ಎಸ್ಡಿಪಿಐ ಹಾಗೂ ಕಾಂಗ್ರೆಸ್ ನಡುವೆ ನಡೆದ ಗುಪ್ತ ಮೈತ್ರಿಯ ವಿಚಾರವನ್ನು ಬಹಿರಂಗ ಪಡಿಸಿದರು.
ಬಿಜೆಪಿ ಸೋಲಿಸಲು ಎಸ್ಡಿಪಿಐ ಜೊತೆ ಕಾಂಗ್ರೆಸ್ ಮೈತ್ರಿ ಬಯಲು, ಚುನಾವಣಾ ರಾಜಕೀಯ ಬಲು ಜೋರು!
ಕಳೆದ ಚುನಾವಣೆಯಲ್ಲಿ 25 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಸ್ಡಿಪಿಐ ತೀರ್ಮಾನಿಸಿತ್ತು, ಬಂಟ್ವಾಳ ಸೇರಿದಂತೆ ಹಲವು ಅಭ್ಯರ್ಥಿಗಳನ್ನೂ ಪಕ್ಷ ಘೋಷಿಸಿತ್ತು. ಆದರೆ ಆಗ ಕಾಂಗ್ರೆಸ್ನ ಹಿರಿಯ ಪ್ರಭಾವಿ ನಾಯಕರ ಮನವಿ ಮೇರೆಗೆ ಎರಡು ಷರತ್ತಿನ ಒಪ್ಪಂದವಾಗಿತ್ತು. ಆದರೆ ಚುನಾವಣೆಯ ಸಂದರ್ಭದಲ್ಲಿ ಅವರು ನೀಡಿದ ಮಾತನ್ನು ಪಾಲಿಸಿಲ್ಲ ಎಂದು ಆರೋಪಿಸಿದರು. ಕಳೆದ ಬಾರಿ ಪಕ್ಷದ ತಪ್ಪು ನಿರ್ಧಾರದಿಂದ ಪಕ್ಷದ ಸಂಘಟನೆಗೆ ಬಲವಾದ ಹೊಡೆದ ಬಿದ್ದಿದೆ. ಹೀಗಾಗಿ ಈ ಬಾರಿ ಅಂತಹ ತಪ್ಪು ಮರುಕಳಿಸದಂತೆ ಮತ್ತು ತಳಮಟ್ಟದಿಂದ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಲಾಗಿದೆ ಎಂದು ಇಲ್ಯಾಸ್ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.