'ಇಲ್ಲಿ ಇರಲು ಆಗದಿದ್ದರೆ ಹೊರಗೆ ಹೋಗಬಹುದು'  ಕಾಂಗ್ರೆಸ್ VS ಕಾಂಗ್ರೆಸ್

Published : Nov 19, 2020, 07:00 PM IST
'ಇಲ್ಲಿ ಇರಲು ಆಗದಿದ್ದರೆ ಹೊರಗೆ ಹೋಗಬಹುದು'  ಕಾಂಗ್ರೆಸ್ VS ಕಾಂಗ್ರೆಸ್

ಸಾರಾಂಶ

ಕಾಂಗ್ರೆಸ್ ನಲ್ಲಿ ಮತ್ತೊಮ್ಮೆ ಅಸಮಾಧಾನ ಸ್ಫೋಟ/ ಬಿಹಾರ ಚುನಾವಣಾ ಫಲಿತಾಂಶದ ನಂತರ ಒಳಬೇಗುದಿ/ ಆಪ್ತರ ಬಳಿ ನೋವು ಹೇಳಿಕೊಂಡ ಹಿರಿಯ ನಾಯಕ ಕಪಿಲ್ ಸಿಬಲ್/  ಇಲ್ಲಿ ಸಲ್ಲದವರು ಹೊರಗೆ  ಹೋಗಬಹುದು ಎಂದ ಲೋಕಸಭೆ ಕಾಂಗ್ರೆಸ್ ನಾಯಕ  ಅಧೀರ್ ಚೌಧರಿ

ನವದೆಹಲಿ(ನ.19)  ಕಾಂಗ್ರೆಸ್ ನಾಯಕತ್ವದ ಬಗ್ಗೆ ಪ್ರಶ್ನೆ ಎತ್ತಿದ್ದ  ಹಿರಿಯ ನಾಯಕ ಕಪಿಲ್ ಸಿಬಲ್ ಕಡೆಯಿಂದ ಮತ್ತೊಂದು ವಿಚಾರ ಸ್ಫೋಟವಾಗಿದೆ. ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೆ  ಬಹಿರಂಗವಾಗಿದೆ. ಬಹಿರಂಗವಾಗಿ ಯಾವುದೇ ಹೇಳಿಕೆ ನೀಡದಿದ್ದರೂ ಕಪಿಲ್ ಸಿಬಲ್ ತಮ್ಮ ಆಪ್ತರ ಬಳಿ ಅಸಮಾಧಾನ  ಹೊರಹಾಕಿದ್ದಾರೆ ಎನ್ನಲಾಗಿದೆ.

ಕಪಿಲ್ ಸಿಬಲ್  ಬಗ್ಗೆ ಮಾತನಾಡಿರುವ ಲೋಕಸಭೆ ಕಾಂಗ್ರೆಸ್ ಅಧೀರ್ ಚೌಧರಿ,   ಇಲ್ಲಿ ನಿಮಗೆ ಆಗದಿದ್ದರೆ ಹೊರಗೆ ಹೋಗಬಹುದು ಎಂಬ ದಾಟಿಯಲ್ಲಿ ಮಾತನಾಡಿದ್ದಾರೆ. ಬಿಹಾರ ಚುನಾವಣೆ ಫಲಿತಾಂಶದ ನಂತರ ಗುದ್ದಾಟ ಮತ್ತಷ್ಟು ಜೋರಾಗಿದೆ.

ಕಾಂಗ್ರೆಸ್ ನಾಯಕತ್ವದ ವಿರುದ್ಧ ದನಿ ಎತ್ತಿದ ಕಪಿಲ್ ಸಿಬಲ್ ಗೆ ಒಂದಿಷ್ಟು ನಾಯಕರಿಂದ ಬೆಂಬಲ ವ್ಯಕ್ತವಾಗಿದೆ.  ರಾಜ್ಯಸಭೆ ಸದಸ್ಯ ವಿವೇಕ್ ಟಂಖಾ ಇದು ಪರಿಣಾಮಕಾರಿ ನಿರ್ಧಾರ ತೆಗೆದುಕೊಳ್ಳಲು ಸರಿಯಾದ ಸಮಯ ಎಂದಿದ್ದಾರೆ.

ಅಂದು ನಾಯಕತ್ವ ಬದಲಾವಣೆ  ಹೋರಾಟ, ಇಂದು ಹಿರಿಯರ ಕಿತ್ತಾಟ

ತಮಿಳುನಾಡಿನ ಸಿವಗಂಗಾ ಎಂಪಿ ಕಾರ್ತಿ ಚಿದಂಬರಂ ಸಿಬಲ್  ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ.  ಪಕ್ಷವನ್ನು ಬಲಪಡಿಸುವ ಕೆಲಸ ಮಾಡಬೇಕಿದೆ ಎಂದಿದ್ದಾರೆ.

ಆದರೆ ಇದೆಲ್ಲದಕ್ಕೂ ಪ್ರತಿಕ್ರಿಯೆ ರೀತಿ ಮಾತನಾಡಿರುವ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ಚೌಧರಿ, ಸಾರ್ವಜನಿಕ ವಲಯದಲ್ಲಿ ಹೇಳಿಕೆ ನೀಡಿ ಮುಜುಗರ ತರುವ ಬದಲು ಇಲ್ಲಿ ಸಲ್ಲದವರು ಹೊರಗೆ ನಡೆಯಬಹುದು ಎಂಬ ದಾಟಿಯಲ್ಲಿ ಮಾತನಾಡಿದ್ದು ಇನ್ನು ಮುಂದೆ ಯಾವ ಬದಲಾವಣೆ ತರಲಿದೆ ಎಂಬುದನ್ನು ನೋಡಬೇಕು.

ಗಾಂಧಿ ಕುಟುಂಬದವರು ಹೊರತುಪಡಿಸಿ ಬೇರೆಯವರು ಅಧ್ಯಕ್ಷರಾಗಬೇಕು ಎಂದು ಬರೆದಿದ್ದ ಪತ್ರದ ನಂತರ ಕಾಂಗ್ರೆಸ್ ಸಭೆ ಮೇಲೆ ಸಭೆ ನಡೆಸಿತ್ತು. ಆದರೆ ಅಂತಿಮವಾಗಿ ಸೋನಿಯಾ ಗಾಂಧಿಯವರೆ ಅಧ್ಯಕ್ಷೆಯಾಗಿದ್ದರು. 

ಆದರೆ  ಕರ್ನಾಟಕದ ನಾಯಕರು ಗಾಂಧಿ ಕುಟುಂಬಕ್ಕೆ  ಜೈ ಎಂದಿದ್ದರು. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹ  ಗಾಂಧಿಗಳ ಪರವಾಗಿ ನಿಂತಿದ್ದರು. ಈಗ ಸಹ  ಅದೆ  ಮಾತನ್ನು ಆಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!