
ಚಿಕ್ಕಮಗಳೂರು (ಜ.20) : ನ್ಯಾಯ ಕೇಳುವವರಿಗೆ ನೈತಿಕತೆ ಇರಬೇಕು. ಸಮಾಜವಾದಿ ಹೆಸರಲ್ಲಿ ಮಜಾವಾದಿ ರಾಜಕಾರಣ ಮಾಡಿದವರಿಗೆ ಜನ ಶಿಕ್ಷೆ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಮಾಲೀಕರು ಜನರೇ, ಅವರೇ ನ್ಯಾಯ ಕೊಡುವವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದರು.
ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರ ಕರ್ನಾಟಕ ಪ್ರವಾಸದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ನ್ಯಾಯ ಕೊಡಿ ಎಂದು ಸಿದ್ದರಾಮಯ್ಯ(Siddaramaiah) ಅವರು ಸರಣಿ ಟ್ವೀಟ್ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ(CT Ravi), ಅವರ ಕಾಲದಲ್ಲಿ ಪಿಎಫ್ಐ, ಎಸ್ಡಿಪಿಐ ಮೇಲಿನ ಕೇಸ್ ವಾಪಸ್ ಪಡೆದು ಸರಣಿ ಕೊಲೆಗೆ ಕಾರಣರಾದರು. ಜನರು ಅವರಿಗೆ ಶಿಕ್ಷೆ ಕೊಟ್ಟರು. ಅವರನ್ನು ಅಧಿಕಾರದಿಂದ ಇಳಿಸಲು ಹಲವು ಕಾರಣಗಳಲ್ಲಿ ಅದೂ ಒಂದು ಕಾರಣ. ರೀಡೂ ಮೂಲಕ ಸಾವಿರಾರು ಕೋಟಿ ಹಗರಣ ನಡೆಸಿದ ಕಾರಣಕ್ಕೆ ಶಿಕ್ಷೆ ನೀಡಬೇಕೆಂದೆ ಜನ ನ್ಯಾಯ ಕೊಟ್ಟಿದ್ದು ಎಂದು ಟೀಕಿಸಿದರು.
ಪ್ರಧಾನಿ ಮೋದಿ ಕರ್ನಾಟಕದ ರೈತರಿಗೆ ಟೋಪಿ ಹಾಕಿ ಮೋಸ ಮಾಡಿದ್ದಾರೆ: ಸಿದ್ದರಾಮಯ್ಯ
ಮೋದಿ ಅವರು ಯಾವಾಗಲೂ ದೇಶಕ್ಕೆ, ಬಡವರಿಗೆ ದಲಿತರಿಗೆ, ಮಹಿಳೆಯರಿಗೆ ನ್ಯಾಯ ಒದಗಿಸಲು ಮುಂದಿದ್ದಾರೆ. ನೀವು ಯಾವ ರೀತಿ ನ್ಯಾಯ ಬಯಸುತ್ತಿದ್ದೀರಿ ಗೊತ್ತಿಲ್ಲ. ಅಧಿಕಾರ ಇದ್ದರೆ ಮಾತ್ರ ಇಲ್ಲಿರುತ್ತೇನೆ. ಇಲ್ಲವಾದಲ್ಲಿ ಇನ್ನೊಂದು ಪಕ್ಷಕ್ಕೆ ಹೋಗುತ್ತೇನೆ ಎನ್ನುವ ಜಾಯಮಾನದವರು. ಮೋದಿ ಅವರಲ್ಲ, ತಮ್ಮದೇ ಪಕ್ಷದ ನಾಯಕರನ್ನು ಸೋಲಿಸಿ ಅನ್ಯಾಯ ಮಾಡಿದವರು ಮೋದಿ ಅವರಲ್ಲ. ನಿಜವಾಗಲೂ ಪರಮೇಶ್ವರ್ ಅವರು ನನ್ನನ್ನು ಸೋಲಿಸಿದವರನ್ನು ಸೋಲಿಸಿ ನನಗೆ ನ್ಯಾಯ ಕೊಡಿ ಎಂದು ಕೇಳಬೇಕು. ಖರ್ಗೆ ನ್ಯಾಯ ಕೇಳಬೇಕು ಸಿದ್ದರಾಮಯ್ಯ ಅವರಲ್ಲ ಎಂದು ವ್ಯಂಗ್ಯವಾಡಿದರು.
Assembly election: ವೇಶ್ಯೆ ಮಾದರಿಯಲ್ಲಿ ಶಾಸಕ ಆನಂದ್ ಸಿಂಗ್ ಸ್ಥಾನ ಮಾರಾಟ: ಬಿಕೆ. ಹರಿಪ್ರಸಾದ್ ವಾಗ್ದಾಳಿ
ಕಾಂಗ್ರೆಸ್ ಮುಖಂಡ ಹರಿಪ್ರಸಾದ್(BK Hariprasad) ಅವರ ಜವಾಬ್ದಾರಿಗೆ ತಕ್ಕಂತೆ ಮಾತನಾಡುತ್ತಿಲ್ಲ ಎನ್ನುವುದು ಸರ್ವವಿಧಿತ. ನನ್ನ ಮೇಲೆ ಸುಳ್ಳು ಆರೋಪ ಮಾಡಿದ ಕಾರಣಕ್ಕೆ ನಾನೂ ಕೂಡ ಅವರಿಗೆ ಈಗಾಗಲೇ ಕಾನೂನುಬದ್ಧ ನೋಟೀಸು ನೀಡಿದ್ದೇನೆ. ಅವರು ಕ್ಷಮೆ ಕೇಳದಿದ್ದಲ್ಲಿ ಕಾನೂನು ಹೋರಾಟ ನಡೆಸುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.