ಸೋನಿಯಾ, ರಾಹುಲ್‌ ಇಟಲಿಗೆ ಮರಳುವ ಕಾಲ ಸನ್ನಿಹಿತ: ಕಟೀಲ್‌

Published : Oct 14, 2022, 12:15 PM IST
ಸೋನಿಯಾ, ರಾಹುಲ್‌ ಇಟಲಿಗೆ ಮರಳುವ ಕಾಲ ಸನ್ನಿಹಿತ: ಕಟೀಲ್‌

ಸಾರಾಂಶ

ನರೇಂದ್ರ ಮೋದಿ ಇಡೀ ದೇಶದ ಜನರ ಮನಸ್ಸು ಆವರಿಸಿದ್ದಾರೆ. ಹೀಗಾಗಿ ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದ್ದು ಕಾಂಗ್ರೆಸ್‌ ಕಾಲು ಕಿತ್ತಿದೆ. ಈ ಕಾರಣದಿಂದ ತಾಯಿ-ಮಗ ಇಬ್ಬರೂ ಮರಳಿ ಇಟಲಿಗೆ ಹೋಗುವ ಸಮಯ ಬಂದಾಗಿದೆ: ಕಟೀಲ್‌

ಕಲಘಟಗಿ(ಅ.14):  ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಮರಳಿ ಇಟಲಿಗೆ ಹೋಗುವ ಸಮಯ ಬಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು. ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪರಿವರ್ತನೆ ಬಿಜೆಪಿಯಿಂದ ಪ್ರಾರಂಭವಾಗಿದೆ. ನರೇಂದ್ರ ಮೋದಿ ಅವರು ಇಡೀ ದೇಶದ ಜನರ ಮನಸ್ಸು ಆವರಿಸಿದ್ದಾರೆ. ಹೀಗಾಗಿ ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದ್ದು ಕಾಂಗ್ರೆಸ್‌ ಕಾಲು ಕಿತ್ತಿದೆ. ಈ ಕಾರಣದಿಂದ ತಾಯಿ-ಮಗ ಇಬ್ಬರೂ ಮರಳಿ ಇಟಲಿಗೆ ಹೋಗುವ ಸಮಯ ಬಂದಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮಾತನಾಡಿ, ಪ್ರತಿಯೊಂದು ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ನಶಿಸಿ ಹೋಗುತ್ತಿದೆ. ಮನಮೋಹನ್‌ ಸಿಂಗ್‌ ಪ್ರಧಾನಿ ಇದ್ದಾಗ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳು ನಡೆದವು. ಸಿದ್ದರಾಮಯ್ಯ 900 ಕೋಟಿ ಅರ್ಕಾವತಿ ಡಿ ನೋಟಿಫಿಕೇಶನ್‌ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಮತ್ತು ಡಿ.ಕೆ. ಶಿವಕುಮಾರ ಅಕ್ರಮ ಹಣ ವರ್ಗಾವಣೆ ತೊಡಗಿದ್ದು ಸಿಬಿಐ ತನಿಖೆ ಎದುರಿಸಿದ್ದಾರೆ. ಇವರನ್ನು ನಾಡಿನ ಜನ ಹೇಗೆ ನಂಬುತ್ತಾರೆ ಎಂದು ಪ್ರಶ್ನಿಸಿದರು.

ನನ್ನನ್ನು ಸಭಾಪತಿ ಮಾಡಲು ನಾಲ್ವರ ವಿರೋಧ: ಬಸವರಾಜ ಹೊರಟ್ಟಿ

ಶಾಸಕ ಸಿ.ಎಂ. ನಿಂಬಣ್ಣವರ ಅವರು ಈ ಭಾಗದಲ್ಲಿ ಸಾಕಷ್ಟುಅಭಿವೃದ್ಧಿ ಕೆಲಸ ಮಾಡಿದ್ದಾರೆ. ನೂರಾರು ಕೋಟಿ ಅನುದಾನ ತಂದು ಮತ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕಲಘಟಗಿ ಮುಂದಿನ ದಿನಗಳಲ್ಲಿ ಸ್ಥಳೀಯರನ್ನು ಆಯ್ಕೆ ಮಾಡುವ ಮುಖಾಂತರ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಂತೋಷ ಲಾಡ್‌ ಅವರಿಗೆ ಮಣೆ ಹಾಕಬೇಡಿ ಎಂದು ಪರೋಕ್ಷವಾಗಿ ಕಟೀಲ್‌ ಹೇಳಿದರು.

ಪಪಂ ಸದಸ್ಯ ಸುನೀಲ ಗಬ್ಬೂರ ಅವರ ಮನೆಗೆ ತೆರಳಿದ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಮುಖಂಡರು ಅಲ್ಪ ಉಪಾಹಾರ ಸೇವಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್‌, ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಬಸವರಾಜ ಶರೇವಾಡ, ಸದಾನಂದ ಚಿಂತಾಮಣಿ, ಫಕ್ಕೀರೇಶ ನೇಸ್ರೇಕರ, ಸೋಮು ಕೂಪ್ಪದ, ನಿಂಗಪ್ಪ ಸುತಗಟ್ಟಿ ಇದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!