
ಕೋಲ್ಕತ್ತಾ[ನ.28]: ಪಶ್ಚಿಮ ಬಂಗಾಳ ವಿಧಾನಸಭಾ ಉಪ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಮೂರರ ಪೈಕಿ ಎರಡು ಕ್ಷೇತ್ರಗಳು ಕಳೆದ 20 ವರ್ಷಗಳಿಂದ TMC ಹಿಡಿತದಲ್ಲಿರಲಿಲ್ಲ ಎಂಬುವುದು ಉಲ್ಲೇಖನೀಯ.
ಈ ಗೆಲುವಿನ ಬಳಿಕ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 'ಬಿಜೆಪಿ ತನ್ನ ಅಹಂಕಾರದ ಫಲ ಅನುಭವಿಸುತ್ತಿದೆ. ದರ್ಪದ ರಾಜಕೀಯ ನಡೆಯುವುದಿಲ್ಲ. ಜನರು ಬಿಜೆಪಿಯನ್ನು ತಳ್ಳಿ ಹಾಕಿದ್ದಾರೆ' ಎಂದಿದ್ದಾರೆ. ಟಿಎಂಸಿಯು ಖಡಗ್ಪುರ್ ಸದರ್ ಹಾಗೂ ಕಾಲಿಯಾಗಂಜ್ ಕ್ಷೇತ್ರಗಳಲ್ಲಿ ಬರೋಬ್ಬರಿ 30 ವರ್ಷಗಳ ಬಳಿಕ ಗೆಲುವು ಸಾಧಿಸಿದೆ. ಕಾಲಿಯಾಗಂಜ್ ಕ್ಷೇತ್ರದಲ್ಲಿ ಟಿಎಂಸಿಯ ತಪನ್ ದೇವ್ ಗೆಲುವು ಸಾಧಿಸಿದ್ದಾರೆ. ತಪನ್, ಬಿಜೆಪಿ ಅಭ್ಯರ್ಥಿ ಕಮಲ್ ಚಂದ್ರ ಸರ್ಕಾರ್ ರನ್ನು 2 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದಾರೆ. ಕರೀಂಪುರ ಕ್ಷೇತ್ರದಲ್ಲೂ ಟಿಎಂಸಿ ಗೆಲುವು ಸಾಧಿಸಿದೆ.
ಪಶ್ಚಿಮ ಬಂಗಾಳದಲ್ಲಿ ನವೆಂಬರ್ 25 ರಂದು ನಡೆದಿದ್ದ 3 ವಿಧಾನಸಭಾ ಕ್ಷೇತ್ರಗಳ(ಕರೀಂಪುರ, ಖಡಗ್ಪುರ್ ಸದರ್ ಹಾಗೂ ಕಾಲಿಯಾಗಂಜ್) ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು, ಗುರುವಾರ ಬೆಳಗ್ಗೆ ಆರಂಭವಾಗಿತ್ತು. ಈ ಮೂರೂ ಕ್ಷೇತ್ರಗಳಲ್ಲಿ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿಯನ್ನು ಕ್ಲೀಬನ್ ಸ್ವೀಪ್ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.