ಪೊಂಗಲ್​ಗೆ 2500 ರೂ. ಕೊಡುವುದಾಗಿ ಘೋಷಿಸಿದ ಸಿಎಂ..!

Published : Dec 19, 2020, 08:54 PM ISTUpdated : Dec 19, 2020, 08:56 PM IST
ಪೊಂಗಲ್​ಗೆ 2500 ರೂ. ಕೊಡುವುದಾಗಿ ಘೋಷಿಸಿದ ಸಿಎಂ..!

ಸಾರಾಂಶ

ಮುಖ್ಯಮಂತ್ರಿ ಈ ರಾಜ್ಯದ ಜನತೆಗೆ ಪೊಂಗಲ್ ಹಬ್ಬ ಒಂದು ತಿಂಗಳು ಮೊದಲೇ  ಭರ್ಜರಿ ಉಡುಗೊರೆ ಘೋಷಿಸಿದ್ದಾರೆ. ಆದ್ರೆ, ಪಡಿತರ ಕಾರ್ಡ್  ಕಡ್ಡಾಯ ಎಂದಿದ್ದಾರೆ.

ಚೆನ್ನೈ, (ಡಿ.19): ಪಡಿತರ ಕಾರ್ಡ್  ಹೊಂದಿರುವ 2.06 ಕೋಟಿಗೂ ಹೆಚ್ಚು ಜನರಿಗೆ 2500 ರೂ, ಅಕ್ಕಿ, ಒಣ ದ್ರಾಕ್ಷಿ, ಗೋಡಂಬಿ, ಏಲಕ್ಕಿ, ಕಬ್ಬು ಮತ್ತು ಹೊಸ ಬಟ್ಟೆಗಳ ಉಡುಗೊರೆ ನೀಡುವ ಬಗ್ಗೆ ಘೋಷಣೆ ಮಾಡಿದ್ದಾರೆ.

ಅಂದಹಾಗೆ ಇಂಥದ್ದೊಂದು ಬಂಪರ್ ಉಡುಗೊರೆ ಘೋಷಣೆ ಮಾಡಿದ್ದು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ. ತಮ್ಮ ಕ್ಷೇತ್ರವಾದ ಸೇಲಮ್ ಜಿಲ್ಲೆಯ ಎಡಪ್ಪಾಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.

 ತಮಿಳುನಾಡಿನಲ್ಲಿ ಅಧಿಕಾರ ಹೊಂದಿರುವ ಪಕ್ಷಗಳು ಪೊಂಗಲ್​ ಹಬ್ಬಕ್ಕೆ ಉಡುಗೊರೆ ನೀಡುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದಾರೆ. ಇಂದಿನ ಕೊಡುಗೆ ನೀಡುವ ಮೂಲಕ ಕೆ. ಪಳನಿಸ್ವಾಮಿ ಇದನ್ನು ಮುಂದುವರಿಸಿದಂತಾಗಿದೆ.

ಇನ್ನು ಕೆಲವರು ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಇವೆಲ್ಲ ಭರವಸೆಯನ್ನು ನೀಡಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ತಮಿಳುನಾಡಿನಲ್ಲಿ ಪೊಂಗಲ್ ಎಂದರೆ ಹಬ್ಬದ ಪ್ರಯುಕ್ತ 2021ರ ಜ. 4ರಿಂದಲೇ ಈ ನಗದು ಕೊಡುವ ಯೋಜನೆ ಜಾರಿಗೆ ಬರಲಿದ್ದು, ಪಡಿತರ ಚೀಟಿ ಅಕ್ಕಿ ಪಡೆಯಲು ಅರ್ಹರಿರುವ ಎಲ್ಲ ಸಾರ್ವಜನಿಕರೂ ಈ ಪ್ರಯೋಜನ ಪಡೆಯಬಹುದು ಎಂದು ಅವರು ಹೇಳಿದ್ದಾರೆ. ಇದರಿಂದ ಪಡಿತರ ಚೀಟಿ ಹೊಂದಿರುವ, ರಾಜ್ಯದ 2.6 ಕೋಟಿ ಮಂದಿಗೆ ತಲಾ 2,500 ರೂ. ಸಿಗಲಿದೆ ಎಂದಿದ್ದಾರೆ.

ತಮಿಳರಿಗೆ ಜ. 14ರ ಪೊಂಗಲ್ ಹಬ್ಬ ಅತಿ ಪ್ರಮುಖವಾದುದು. ಕಳೆದ ವರ್ಷ ಈ ಹಬ್ಬದಂದು 1 ಸಾವಿರ ರೂ. ನಗದು ನೀಡಲಾಗಿತ್ತು. ಈ ಸಲ ಒಂದೂವರೆ ಸಾವಿರ ರೂ. ಹೆಚ್ಚಿಸಲಾಗಿದ್ದು, ಒಟ್ಟು 2,500 ರೂ. ನೀಡಲಿದ್ದೇವೆ. ಜತೆಗೆ ಒಂದು ಕೆ.ಜಿ. ಅಕ್ಕಿ, ಸಕ್ಕರೆ ಹಾಗೂ ಒಂದಿಡೀ ಕಬ್ಬನ್ನು ಕೂಡ ಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ