ಮೋದಿ ರೋಡ್ ಶೋ ಮುಗಿದ ರಸ್ತೆಗಳಲ್ಲಿ ತಕ್ಷಣದಿಂದಲೇ ಸಂಚಾರಕ್ಕೆ ಪೊಲೀಸರ ಅನುವು

Published : May 06, 2023, 12:07 PM IST
ಮೋದಿ ರೋಡ್ ಶೋ ಮುಗಿದ ರಸ್ತೆಗಳಲ್ಲಿ ತಕ್ಷಣದಿಂದಲೇ ಸಂಚಾರಕ್ಕೆ ಪೊಲೀಸರ ಅನುವು

ಸಾರಾಂಶ

ಪ್ರಧಾನಿ  ಮೋದಿ ರೋಡ್ ಶೋ ಹಿನ್ನೆಲೆ ಹಲವೆಡೆ ರಸ್ತೆಗಳನ್ನು ಬಂದ್ ಮಾಡಲಾಗಿತ್ತು. ಇದೀಗ ವಾಹನ ಸವಾರರಿಗೆ ಕಿರಿಕಿರಿ ತಪ್ಪಿದೆ. ರೋಡ್ ಶೋ ಮುಗಿದ ರಸ್ತೆಗಳಲ್ಲಿ ಎಂದಿನಂತೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ಬೆಂಗಳೂರು (ಮೇ.6):  ಪ್ರಧಾನಿ  ಮೋದಿ ರೋಡ್ ಶೋ ಹಿನ್ನೆಲೆ ಹಲವೆಡೆ ರಸ್ತೆಗಳನ್ನು ಬಂದ್ ಮಾಡಲಾಗಿತ್ತು. ಇದೀಗ ವಾಹನ ಸವಾರರಿಗೆ ಕಿರಿಕಿರಿ ತಪ್ಪಿದೆ. ರೋಡ್ ಶೋ ಮುಗಿದ ರಸ್ತೆಗಳಲ್ಲಿ ಎಂದಿನಂತೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಮೋದಿ ರೋಡ್ ಶೋ ಬಾಕಿ ಇರುವಾಗಲೇ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಎಲ್ಲೆಲ್ಲಿ ರೋಡ್ ಶೋ ಮುಕ್ತಾಯವಾಗಿದೆ ಅಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ರೋಡ್ ಶೋ ಸಾಗಿ ಮುಂದೆ ಬಂದ ರಸ್ತೆಗಳಲ್ಲಿ ಸಂಚಾರ ಎಂದಿನಂತೆ ಆರಂಭವಾಗಿದೆ.

ಬೆಂಗಳೂರಿನಲ್ಲಿ ಮೋದಿ ಮೆಘಾ ರೋಡ್ ಶೋ , ಭಜರಂಗಿ ಮುಖವಾಡ ಧರಿಸಿದ

ಈ ಮೂಲಕ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಂಬಂಧಿಸಿದ ಇಲಾಖೆ ನೋಡಿಕೊಂಡಿದೆ. ಜನದಟ್ಟಣೆ ಇರುವ ಬೆಂಗಳೂರಿನಲ್ಲಿ ಮೋದಿ ರೋಡ್ ಶೋ ನಡೆಸುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಸಂಬಂಧಿಸಿದಂತೆ ಹೈಕೋರ್ಟ್ ಗೆ ಅರ್ಜಿ ಕೂಡ ಸಲ್ಲಿಸಿ ಅನುಮತಿ ನೀಡಬಾರದು ಎಂದು ಮನವಿ ಮಾಡಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ರೋಡ್‌ ಶೋ ಗೆ ಅನುಮತಿ ಕೂಡ ನೀಡಿತ್ತು.

 

ಪ್ರಧಾನಿ ಮೋದಿ ರೋಡ್ ಶೋ ರಥದ ವೇಗದಲ್ಲಿ ಬದಲಾವಣೆ! ಯಾವೆಲ್ಲ ರಸ್ತೆಗಳು ಬಂದ್?

ಮೋದಿ ನೋಡಲು ಜನಸಾಗರವೇ ಹರಿದು ಬಂದಿದೆ. ರಸ್ತೆಯ ಎರಡೂ ಬದಿಗಳಲ್ಲಿ ದನರು ಹೂಮಳೆ ಸುರಿಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಜನರು ಮೋದಿ ನೋಡಲು ಆಗಮಿಸಿದ್ದಾರೆ.  ಶ್ರೀ ಸೋಮೇಶ್ವರ ಸಭಾ ಭವನ ಮೂಲಕ ಆರಂಭಗೊಂಡ ಮೋದಿ ರೋಡ್ ಶೋ , ಜೆಪಿನಗರ 5ನೇ ಹಂತದ ಮೂಲಕ ಸಾಗಿ ಮುಂದುವರೆದು ಮಧ್ಯಾಹ್ನ ಮಾಗಡಿ ರೋಡ್‌ ಜಂಕ್ಷನ್‌, ಶಂಕರಮಠ ವೃತ್ತದ ಮೂಲಕ ಸಾಗಿ ಮಲ್ಲೇಶ್ವರಂಗೆ ಆಗಮಿಸಲಿದೆ. ಬಳಿಕ ಮಲ್ಲೇಶ್ವರಂ 18ನೇ ರಸ್ತೆ ಜಂಕ್ಷನ್ ತಲುಪಲಿದೆ.  ಕಾಡು ಮಲ್ಲೇಶ್ವರ ದೇವಸ್ಥಾನದ ಬಳಿ ಮೋದಿ ರೋಡ್ ಶೋ ಅಂತ್ಯಗೊಳ್ಳಲಿದೆ. ಮೋದಿ ಕಾಡು ಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಮೋದಿಯ ಬೆಂಗಳೂರು ರೋಡ್ ಶೋನಲ್ಲಿ ಸುಮಾರು 10ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ